ಬಿಸಿಲಿಗೆ ಬಸವಳಿದ ವನ್ಯಜೀವಿಗಳು


Team Udayavani, Mar 5, 2017, 3:45 AM IST

4GDG-3A.jpg

ಗದಗ: ನೂರಾರು ವನ್ಯಜೀವಿಗಳಿಗೆ ಆಶ್ರಯ ತಾಣವಾಗಿರುವ ಇಲ್ಲಿನ ಬಿಂಕದಕಟ್ಟಿ ಕಿರು ಮೃಗಾಲಯದಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ. ಸುಮಾರು 40 ಎಕರೆ ಪ್ರದೇಶ ವ್ಯಾಪ್ತಿಯಲ್ಲಿರುವಕಿರು ಮೃಗಾಲಯದ ಒಟ್ಟು ನಾಲ್ಕು ಬೋರ್‌ ವೆಲ್‌ಗ‌ಳಲ್ಲಿ ಒಂದು ಸಂಪೂರ್ಣ ಬತ್ತಿದ್ದು, ಇನ್ನುಳಿದ ಮೂರು ಬೋರ್‌ವೆಲ್‌ಗ‌ಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ನೀರು ಲಭ್ಯವಾಗುತ್ತಿಲ್ಲ. ಸುಮಾರು ನಾಲ್ಕು ದಶಕಗಳಿಂದ ಆರಂಭಗೊಂಡಿರುವ ಬಿಂಕದಕಟ್ಟಿ ಕಿರು ಮೃಗಾಲಯದಲ್ಲಿ ಈ ಬಾರಿ ನೀರಿನ ಸಮಸ್ಯೆ ಮತ್ತಷ್ಟು ತೀವ್ರಗೊಂಡಿದೆ.

ಬಿಸಿಲ ತಾಪಕ್ಕೆ ಪ್ರಾಣಿಗಳ ಪರದಾಟ: ಕಿರು ಮೃಗಾಲಯದಲ್ಲಿ 173 ವನ್ಯಜೀವಿಗಳಿದ್ದು, ಈ ಪೈಕಿ ಚಿರತೆ, ಕರಡಿ, ಜಿಂಕೆ, ಕಡವೆ, ನೀಲ್‌ ಗಾಯ್‌, ಮೊಸಳೆ ಹಾಗೂ ವಿವಿಧ ಪಕ್ಷಿಗಳುಹೆಚ್ಚು ನೀರು ಬೇಡುತ್ತವೆ. ಬಿಸಿಲಿನ ತಾಪ ಹೆಚ್ಚುತ್ತಿದ್ದಂತೆ ವನ್ಯಜೀವಿಗಳು ಬಹುತೇಕ ನೀರಿನಲ್ಲೇ ಕಾಲ ಕಳೆಯಲು ಬಯಸುವುದರಿಂದ ಬೋನುಗಳಲ್ಲಿ ನಿರ್ಮಿಸಿರುವ ಸಣ್ಣ ಹೊಂಡ ಹಾಗೂ ದೋಣಿಗಳಿಗೆ ಬೋರ್‌ವೆಲ್‌ ಮೂಲಕ ನೀರು ಹರಿಸಲಾಗುತ್ತಿದೆ. ನೀಲ್‌ಗಾಯ್‌ ಇತ್ಯಾದಿ ಪ್ರಾಣಿಗಳ ಬೋನುಗಳಲ್ಲಿರುವ ಹೊಂಡಗಳ ವಿಸ್ತೀರ್ಣ ಜಾಸ್ತಿಯಿದ್ದು, ನೀರು ತುಂಬಲು ಸಾಧ್ಯವಾಗದೆ ಈ ಪ್ರಾಣಿಗಳು ಬಿಸಿಲಿನ ಝಳದಿಂದ
ಪಾರಾಗಲು ಪರದಾಡುವಂತಾಗಿದೆ.

ಸುಮಾರು ಒಂದೂವರೆ ಎಕರೆ ಪ್ರದೇಶದಲ್ಲಿರುವ ಜಿಂಕೆವನದಲ್ಲಂತೂ ಮರಗಿಡಗಳೆಲ್ಲವೂ ಎಲೆಗಳಿಲ್ಲದ ಅಸ್ತಿಪಂಜರದಂತಾಗಿವೆ. ನೂರಾರು ಸಂಖ್ಯೆಯಲ್ಲಿರುವ ಚುಕ್ಕಿ ಜಿಂಕೆ, ಕೃಷ್ಣ ಮೃಗ, ಸಾರಂಗಗಳಿಗೆ ನೆರಳಿಲ್ಲದಂತಾಗಿದೆ.

ಕ್ಷೀಣಿಸಿದ ಪ್ರವಾಸಿಗರ ಸಂಖ್ಯೆ: ಹಸಿರಿನಿಂದ ಕಣ್ಣಿಗೆ ಮುದ ನೀಡುತ್ತಿದ್ದ ಮೃಗಾಲಯದ ಮರಗಳು ಇದೀಗ ನೀರಿಲ್ಲದೆ ಒಣಗುತ್ತಿವೆ. ಸಾಮಾನ್ಯವಾಗಿ ಪ್ರತಿನಿತ್ಯ 100- 150, ವಾರಾಂತ್ಯದಲ್ಲಿ 300 -350 ಜನರು ಕಿರು ಮೃಗಾಲಯಕ್ಕೆ ಭೇಟಿ ನೀಡುತ್ತಿದ್ದರು. ಆದರೆ, ಈ ಸಂಖ್ಯೆಯೂ ಸಾಕಷ್ಟು ಕಡಿಮೆಯಾಗಿದೆ ಎಂಬುದು ಅರಣ್ಯ ಇಲಾಖೆ ಅಧಿಕಾರಿಗಳ ಮಾತು.

ಮಳೆ ಅಭಾವದಿಂದ ಕಿರು ಮೃಗಾಲಯದ ಬೋರ್‌ವೆಲ್‌ಗ‌ಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದು, ಸ್ವಲ್ಪ ಮಟ್ಟಿಗೆ ಸಮಸ್ಯೆಯಾಗಿದೆ. ವನ್ಯಜೀವಿಗಳಿಗೆ ನೀರು ಪೂರೈಸಲು ಮೊದಲ ಆದ್ಯತೆ ನೀಡಲಾಗಿದೆ. ಈ ಹಿಂದೆ ಸಂಕ್ರಮಣದ ದಿನಗಳಲ್ಲಿ ಹಸಿರು ನಿರ್ವಹಣೆಗಾಗಿ ಟ್ಯಾಂಕರ್‌ನಿಂದ ನೀರು ಪೂರೈಸಲಾಗುತ್ತಿತ್ತು. ಆದರೆ, ಆರ್ಥಿಕ ಹೊರೆ ತಪ್ಪಿಸಲು ಅದನ್ನು ಕೈಬಿಡಲಾಗಿದೆ. ಮುಂದಿನ ದಿನಗಳಲ್ಲಿ ಕಡಿಮೆ ನೀರು ಸಾಕಾಗುವ ಹಸಿರು ಗಿಡಗಳನ್ನು ಬೆಳೆಸಲು ಚಿಂತನೆ ನಡೆಸಲಾಗುತ್ತಿದೆ.
– ಮಹಾಂತೇಶ ಪೆಟೂÉರು,ವಲಯ ಅರಣ್ಯ ಅಧಿಕಾರಿ.

– ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.