ಬಿಪಿಎಲ್‌ ಕುಟುಂಬಗಳಿಗೆ ಬಯೋಮೆಟ್ರಿಕ್‌ಗೆ ಆಕ್ರೋಶ

ಜಿಲ್ಲಾ ಸ್ಲಂ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ

Team Udayavani, Aug 18, 2021, 3:52 PM IST

ಬಿಪಿಎಲ್‌ ಕುಟುಂಬಗಳಿಗೆ ಬಯೋಮೆಟ್ರಿಕ್‌ಗೆ ಆಕ್ರೋಶ

ಗದಗ: ಆಹಾರ ಇಲಾಖೆಯಿಂದ ಬಿಪಿಎಲ್‌ ಪಡಿತರ ಕುಟುಂಬಗಳಿಗೆ ಬಯೋಮೆಟ್ರಿಕ್‌ ಪದ್ಧತಿ ಮತ್ತು ವಿದ್ಯುತ್‌ ಖಾಸಗೀಕರಣ ಕಾಯ್ದೆ ವಿರೋಧಿಸಿ  ಜಿಲ್ಲಾ ಸ್ಲಂ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಮುಖಂಡರು, ಕೇಂದ್ರ ಸರಕಾರ ಕಾರ್ಪೋರೇಟ್ ಕಂಪನಿಗಳ ಕೈಗೊಂಬೆಯಂತೆ ವರ್ತಿಸುತ್ತಿದೆ. ದೇಶದ ಎಲ್ಲಾ ಸೇವಾವಲಯಗಳನ್ನು ಖಾಸಗಿಕರಣಗೊಳಿಸುವ ಮೂಲಕ ಬಂಡವಾಳಶಾಹಿಗಳಿಗೆ ದೇಶದ ಸೇವಾ ವಲಯಗಳನ್ನು ಮಾರಾಟ ಮಾಡಲಾಗುತ್ತಿದೆ. ಸರಕಾರದ ಈ ನಡೆಯಿಂದ ದೇಶದ ಬಡ ಜನರಿಗೆ ರೈತರು ಮತ್ತು ಕೂಲಿ ಕಾರ್ಮಿಕರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು. ಇತ್ತೀಚೆಗೆ ರಾಜ್ಯ ಸರಕಾರ ಆಹಾರ ಇಲಾಖೆಯಿಂದ ಬಿಪಿಎಲ್‌ ಪಡಿತರ ಕುಟುಂಬಗಳು ತಮ್ಮ ಬೆರಳಚ್ಚು ಗುರುತು ಕಡ್ಡಾಯ ಗೊಳಿಸಿರುವುದರಿಂದ ಆಹಾರ ಧಾನ್ಯ ಪಡೆಯಲು ಹರಸಾಹಸ ಪಡುವಂತಾಗಿದೆ. ಬಳಿಕ ಜನರ ಆಕ್ರೋಶಕ್ಕೆ ಮಣಿದು ಬಯೋಮೆಟ್ರಿಕ್‌ ಪದ್ಧತಿಯನ್ನು ಸರಕಾರ ಹಿಂಪಡೆಯಿತು. ಮತ್ತೆ ರಾಜ್ಯದಲ್ಲಿ ಬಿಪಿಎಲ್‌ ಕುಟುಂಬಗಳು ತಮ್ಮ ಬೆರಳಚ್ಚು ಗುರುತುಗಳನ್ನು (ಬಯೋಮೆಟ್ರಿಕ್‌) ಮಾಡುವುದು ಕಡ್ಡಾಯವೆಂದು ಹೇಳುತ್ತಿದೆ. ಅನ್ಯ ಜಿಲ್ಲೆ ಮತ್ತು ರಾಜ್ಯಗಳಿಗೆ ಗುಳೆ ಹೋಗಿರುವ ಕಾರ್ಮಿಕರು ಪಡಿತರದಿಂದ ವಂಚಿತಗೊಳ್ಳಲಿವೆ. ರಾಜ್ಯ ಸರಕಾರ ಕೂಡಲೇ ಜನವಿರೋಧಿ ಬಯೋಮೆಟ್ರಿಕ್‌ ಪದ್ಧತಿ ಕೈಬಿಡಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ:ಸರಕಾರಿ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸಿ : ಅಧಿಕಾರಿಗಳಿಗೆ ಸಚಿವೆ ಜೊಲ್ಲೆ ಸೂಚನೆ

ಕೇಂದ್ರ ಸರಕಾರ ವಿದ್ಯುತ್‌ ಕಾಯ್ದೆ 2020ಕ್ಕೆ ತಿದ್ದುಪಡಿ ತಂದಿದ್ದು, ಈ ಕಾಯ್ದೆಯ ಪ್ರಕಾರ ವಿದ್ಯುತ್‌ ಸೌಲಭ್ಯ ಬಂಡವಾಳ ಶಾಹಿಗಳ ಅಧೀನ ಕ್ಕೊಳಪಡಲಿದೆ. ಅವರು ನಿಗದಿಪಡಿಸುವ ದರವನ್ನು ಗ್ರಾಹಕರು ಒಪ್ಪಿಕೊಳ್ಳುವ ಅನಿವಾರ್ಯತೆ ಸೃಷ್ಟಿಯಾಗಲಿದೆ.

ರೈತರಿಗೆ ಹಾಗೂ ಬಡವರಿಗೆ ನೀಡುತ್ತಿರುವ ಭಾಗ್ಯಜೋತಿ ಸ್ಥಗಿತಗೊಳ್ಳಲಿದೆ. ವಿದ್ಯುತ್‌ ದರ ಏರಿಕೆಯಿಂದ ದೇಶದ ಜನ ತತ್ತರಿಸಲಿದ್ದು, ಈ ಉದ್ಯೋಗವನ್ನೇ ನಂಬಿರುವ ಲಕ್ಷಾಂತರ ನೌಕರರು ನಿರುದ್ಯೋಗಿಗಳಾಗುವ ಆತಂಕ ವ್ಯಕ್ತಪಡಿಸಿದರು. ಈಗಾಗಲೇ ಕೇಂದ್ರ ಸರಕಾರ ವಿಮಾನ, ರೇಲ್ವೆ ಸೇರಿದಂತೆ ಸಾರ್ವಜನಿಕ ವಲಯಗಳನ್ನು ಖಾಸಗಿಕರಣಗೊಳಿಸಿದ ಪರಿಣಾಮ ದೇಶದ ಜನರು ತತ್ತರಿಸಿ ಹೋಗಿದ್ದಾರೆ.

ಈಗಿರುವ ವಿದ್ಯುತ್‌ ಕಂಪನಿಗಳು ಅನುಭವಿಸುತ್ತಿರುವ ಲಕ್ಷಾಂತರ ಕೋಟಿ ರೂ. ನಷ್ಟ ಸರಿದುಗಿಸುವ ನೆಪದಲ್ಲಿ ಸರಕಾರ ವಿದ್ಯುತ್‌ ನಿಗಮ ಖಾಸಗಿಕರಣಕ್ಕೆ ಮುಂದಾಗಿರುವುದು ಸರಿಯಲ್ಲ ಎಂದು ಟೀಕಿಸಿದರು.

ಧರಣಿಯಲ್ಲಿ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮಿ¤ಯಾಜ ಮಾನ್ವಿ, ಉಪಾಧ್ಯಕ್ಷ ರವಿಕುಮಾರ ಬೆಳಮಕರ, ಮಹಿಳಾ ಸಮಿತಿ ಸಂಚಾಲಕಿ ಪರವೀನಬಾನು ಹವಾಲ್ದಾರ, ಮೆಹರುನಿಸಾ ಢಾಲಾಯತ, ಇಬ್ರಾಹಿಂ ಮುಲ್ಲಾ, ಶರಣಪ್ಪ ಸೂಡಿ, ಸುರೇಶ ಸಿಂಗಾಡಿ, ಚಾಂದಸಾಬ ಬದಾಮಿ, ದಾವಲಸಾಬ ಹಾಳಕೇರಿ, ಬಸವರಾಜ ಅಡನೂರ, ಲಕ್ಷ್ಮಣ ಗೋಕಾವಿ, ರಾಜೇಸಾಬ ತೆಹಶೀಲ್ದಾರ್, ಇಮಾಮಸಾಬ ಉಮಚಗಿ ಹಾಗೂ ಸ್ಲಂ ನಿವಾಸಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.