ಕೈ ಅಭ್ಯರ್ಥಿ ಸ್ವಗ್ರಾಮ ಹುಲಕೋಟಿಯಲ್ಲಿ ಬಿಜೆಪಿ ಪ್ರಚಾರ


Team Udayavani, Apr 17, 2019, 12:25 PM IST

gad-1

ಗದಗ: ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಅವರ ಪ್ರಚಾರಾರ್ಥವಾಗಿ ಬಿಜೆಪಿ ಮುಖಂಡ ಅನಿಲ್‌ ಮೆಣಸಿನಕಾಯಿ ನೇತೃತ್ವದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಮಂಗಳವಾರ ಕಾಂಗ್ರೆಸ್‌ ಅಭ್ಯರ್ಥಿ ಡಿ.ಆರ್‌.ಪಾಟೀಲ ಅವರ ಸ್ವಗ್ರಾಮ ಹುಲಕೋಟಿಯಲ್ಲಿ ಚುನಾವಣಾ ಬೃಹತ್‌ ರ್ಯಾಲಿ ನಡೆಸಿದರು.

ಹುಲಕೋಟಿ ಬಸ್‌ ನಿಲ್ದಾಣದಿಂದ ಸಂಜೆ 5ರ ಸುಮಾರಿಗೆ ಆರಂಭಗೊಂಡ ಬಿಜೆಪಿ ರ್ಯಾಲಿ ರಾತ್ರಿ 8ರ ವರೆಗೆ ನಡೆಯಿತು. ಕೆಲ ಗಂಟೆಗಳ ಕಾಲ ಗ್ರಾಮದ ಓಣಿ ಓಣಿಗೆ ಭೇಟಿ ನೀಡಿ, ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ, ಚೌಕೀದಾರ್‌ ಪರ ಜಯಘೋಷಣೆಗಳನ್ನು ಮೊಳಗಿಸುತ್ತಾ ಮತಯಾಚಿಸಿದರು.

ಈ ನಡುವೆ ಅಲ್ಲಲ್ಲಿ ಗ್ರಾಮದ ಮಹಿಳೆಯರು, ಸಾರ್ವಜನಿಕರಿಗೆ ಬಿಜೆಪಿ ಚುನಾವಣಾ ಕರ ಪತ್ರ ತಲುಪಿಸಿದ ಅನಿಲ್‌ ಮೆಣಸಿನಕಾಯಿ, ಕೇಂದ್ರ ಬಿಜೆಪಿ ಸರಕಾರದ ಸಾಧನೆಗಳನ್ನು ವಿವರಿಸಿದರು. ರ್ಯಾಲಿ ಮಧ್ಯೆ ಅಲ್ಲಲ್ಲಿ ಎದುರಾದ ಗ್ರಾಮಸ್ಥರಿಗೆ ಬಿಜೆಪಿ ಕರ ಪತ್ರ ನಿಡುವುದರೊಂದಿಗೆ ಬಿಜೆಪಿ ಪ್ರಾಚಾರಕ್ಕೆ ಸಾಥ್‌ ನೀಡುವಂತೆ ಆಹ್ವಾನಿಸಿದರು. ಈ ವೇಳೆ ಕೆಲವರು ನಾಲ್ಕಾರು ಹೆಜ್ಜೆ ಹಾಕಿ, ತಮ್ಮ ಕಾರ್ಯಗಳತ್ತ ಮರಳಿದರು. ಅಲ್ಲದೇ, ಮನೆ ಮನೆ ಪ್ರಚಾರ ನಡೆಸಿದ ಬಿಜೆಪಿ ಕಾರ್ಯಕ ರ್ತರು ಅಲ್ಲಲ್ಲಿ ಕುಡಿಯಲು ನೀರು ಕೇಳುವೊಂದರೊಂದಿಗೆ ಗ್ರಾಮಸ್ಥರಲ್ಲಿ ಆತ್ಮೀಯತೆ ಬೆಳೆಸಲು ಪ್ರಯತ್ನಿಸಿದರು.

ಬಿಜೆಪಿ ಮುಖಂಡರಾದ ರಾಜು ಕುರಡಗಿ, ಅಶೋಕ ಸಂಕಣ್ಣವರ, ಮೋಹನ ಮಾಳಶೆಟ್ಟಿ, ರವಿ ದಂಡಿನ, ರಮೇಶ ಸಜ್ಜಗಾರ, ಭದ್ರೇಶ ಕುಸಲಾಪುರ, ಅರವಿಂದ ಹುಲ್ಲೂರ, ರಾಘವೆಂದ್ರ ಯಳವತ್ತಿ, ವಿನಾಯಕ ಮಾನ್ವಿ, ಸಿದ್ದು ಪಲ್ಲೇದ, ದ್ಯಾಮಣ್ಣ ನೀಲಗುಂದ, ತೊಟದ, ಬಸವಣ್ಣಯ್ಯ ಹಿರೇಮಠ, ಸುದೀರ ಕಾಟಿಗೇರ, ವಾಣಿ ಮೆಣಸಿನಕಾಯಿ, ಆಶ್ವಿ‌ನಿ ಜಗತಾಪ, ಶಾರದಾ ಹಿರೇಮಠ, ಜಯಶ್ರೀ ಉಗಲಾಟದ, ವಿಜಯಲಕ್ಷ್ಮೀ ಮಾನ್ವಿ ಅನೇಕರು ಇದ್ದರು.

ಬಿಗುವಿನ ವಾತಾವರಣ ರಾತ್ರಿ 8 ಗಂಟೆಗೆ ಗ್ರಾಮದಲ್ಲಿ ಪ್ರಚಾರ ಮುಗಿಸಿ ಬಿಜೆಪಿ ಕಾರ್ಯಕರ್ತರು ಹೆದ್ದಾರಿಗೆ ಮರಳುತ್ತಿದ್ದಂತೆ ಯಾರೋ ಕಿಡಿಗೇಡಿಗಳು ಬಿಜೆಪಿ ಕಾರ್ಯ ಕರ್ತರನ್ನು ಉದ್ದೇಶಿಸಿ ಅವಹೇಳನಕಾರಿ ಪದ ಬಳಸಿದರು ಎನ್ನಲಾಗಿದೆ. ಇದರಿಂದ ಕೆರಳಿದ ಬಿಜೆಪಿ ಮುಖಂಡ ಅನಿಲ್‌ ಮೆಣಸಿನಕಾಯಿ, ಇಲ್ಲಿಗೆ ಗೂಂಡಾಗಿರಿ ಮಾಡಲು ಬಂದಿಲ್ಲ. ನಿಮ್ಮ ಗೂಂಡಾಗಿರಿಯೂ ನಡೆಯಲ್ಲ. ಕಿಡಿಗೇಡಿಗಳನ್ನು ತಕ್ಷಣವೇ ಪೊಲೀಸರು ಬಂಧಿ ಸಬೇಕು ಎಂದು ಒತ್ತಾಯಿಸಿದರು. ಇದರಿಂದ ಕ್ಷಣಕಾಲ ಬಿಗುವಿನ ವಾತಾವರಣ ನಿರ್ಮಾಣಗೊಂಡಿತ್ತು. ಈ ವೇಳೆ ಪೊಲೀಸರ ಮಧ್ಯ ಪ್ರವೇಶದಿಂದ ಪರಿಸ್ಥಿತಿ ತಿಳಿಗೊಂಡಿತು ಎಂದು ತಿಳಿದು ಬಂದಿದೆ. ಹುಲಕೋಟಿಯಲ್ಲಿ ಬಿಜೆಪಿ ಪ್ರಚಾರಕ್ಕೆ ಅಗತ್ಯ ಪೊಲೀಸ್‌ ಬಂದೋಬಸ್ತ್ ಒದಗಿಸಲಾಗಿತ್ತು.

ಟಾಪ್ ನ್ಯೂಸ್

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.