ಗ್ರಾಮ ಸ್ಥಳಾಂತರ ಬಿಜೆಪಿ ಸರ್ಕಾರದ ಕೊಡುಗೆ

ಬೂದಿಹಾಳ ನವಗ್ರಾಮಕ್ಕೆ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಸಚಿವ ಸಿ.ಸಿ. ಪಾಟೀಲ ಚಾಲನೆ

Team Udayavani, Mar 21, 2022, 3:46 PM IST

18

ನರಗುಂದ: 2007, 2009ರಲ್ಲಿ ಉಂಟಾದ ಭೀಕರ ಪ್ರವಾಹ ಸ್ಥಿತಿ ಎದುರಿಸಿದ ಮಲಪ್ರಭೆ ಮತ್ತು ಬೆಣ್ಣಿಹಳ್ಳ ದಂಡೆಯ ಗ್ರಾಮಗಳನ್ನು ಸ್ಥಳಾಂತರಗೊಳಿಸುವಲ್ಲಿ ಬಿಜೆಪಿ ಸರ್ಕಾರದ ಸಾಧನೆ ಬಹುದೊಡ್ಡ ಕೊಡುಗೆಯಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ. ಪಾಟೀಲ ಹೇಳಿದರು.

ಬೂದಿಹಾಳ ನವಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ 2021-22ನೇ ಸಾಲಿನ ಎಸ್‌ಸಿಪಿ ಯೋಜನೆಯಡಿ 70 ಲಕ್ಷ ರೂ. ವೆಚ್ಚದಲ್ಲಿ ಎಸ್‌ಸಿ ಕಾಲೋನಿಗೆ ತಡೆಗೋಡೆ ಮತ್ತು ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು.

ನರಗುಂದ ತಾಲೂಕಿನ 3 ಗ್ರಾಮ ಸೇರಿ ಮತಕ್ಷೇತ್ರದ 14 ಗ್ರಾಮಗಳ ಸ್ಥಳಾಂತರಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಅವಧಿ ಯಲ್ಲಿ ಸರ್ಕಾರದ ಕೊಡುಗೆ ಮಹತ್ವದ್ದಾಗಿದೆ. ನವಗ್ರಾಮಕ್ಕೆ ಬಂದರೂ ಬೂದಿಹಾಳ ಗ್ರಾಮಸ್ಥರಿಗೆ ಪ್ರವಾಹ ಬಾ ಧಿಸುತ್ತಲೇ ಇತ್ತು. ಇದೀಗ ಗ್ರಾಮಸ್ಥರಿಗೆ ಭರವಸೆ ನೀಡಿದಂತೆ ನವಗ್ರಾಮಕ್ಕೆ ತಡೆಗೋಡೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದರು.

ಅಭಿವೃದ್ಧಿಗೆ ಒತ್ತು: ಬೂದಿಹಾಳ ಗ್ರಾಮಕ್ಕೆ 1 ಕೋಟಿ ರೂ. ವೆಚ್ಚದಲ್ಲಿ ಸಿ.ಸಿ ರಸ್ತೆ ನಿರ್ಮಿಸಲಾಗಿದೆ. 24 ಲಕ್ಷ ವೆಚ್ಚದಲ್ಲಿ ಸ್ಮಶಾನ ನಿರ್ಮಾಣಕ್ಕೆ ಟೆಂಡರ್‌ ಕರೆಯಲಾಗಿದೆ. 36 ಲಕ್ಷ ವೆಚ್ಚದ ಜೆಜೆಎಂ ಯೋಜನೆ, 12 ಲಕ್ಷ ವೆಚ್ಚದಲ್ಲಿ ಶಾಲಾ ದುರಸ್ತಿ ಮಾಡಲಾಗಿದ್ದು, ಇದೀಗ 70 ಲಕ್ಷ ವೆಚ್ಚದಲ್ಲಿ ಸಿ.ಸಿ ರಸ್ತೆ, ತಡೆಗೋಡೆ ನಿರ್ಮಾಣಕ್ಕೆ ಚಾಲನೆ ನೀಡಿ, 36 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಶಾಲಾ ಕೊಠಡಿಗಳನ್ನು ಉದ್ಘಾಟಿಸಲಾಗಿದೆ ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ದಂಡಿನ ಮಾತನಾಡಿ, ಪ್ರವಾಹ ಸಂದರ್ಭದಲ್ಲಿ ತೊಂದರೆ ಎದುರಿಸಿದ ಬೂದಿಹಾಳ ಸ್ಥಳಾಂತರಕ್ಕೆ ಸಚಿವರ ಪರಿಶ್ರಮ ಬಹಳವಿದೆ. ಕೊಣ್ಣೂರ, ಶಿರೋಳ ಮಾರ್ಗದ ಮುಖ್ಯರಸ್ಥೆ 45.5 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದ್ದು ಪ್ರಗತಿಯಲ್ಲಿದೆ ಎಂದರು.

ಬಿಜೆಪಿ ಮುಖಂಡ ಬಾಬು ಹಿರೇಹೊಳಿ ಮಾತನಾಡಿ, 2020ರ ಅಕ್ಟೋಬರ್‌ನಲ್ಲಿ ಪ್ರವಾಹದಿಂದ ನವಗ್ರಾಮಕ್ಕೆ ಸಾಕಷ್ಟು ತೊಂದರೆಯಾಗಿದ್ದು, ಆಗ ಸ್ಥಳಕ್ಕೆ ಭೇಟಿ ನೀಡಿ ಭರವಸೆ ನೀಡಿದಂತೆ ಸಚಿವರು ಇಂದು ತಡೆಗೋಡೆ ನಿರ್ಮಾಣಕ್ಕೆ ಚಾಲನೆ ನೀಡಿ ಗ್ರಾಮಸ್ಥರ ಸಮಸ್ಯೆಗೆ ಸ್ಪಂದಿಸಿದ್ದಾರೆ ಎಂದರು.

ಈ ವೇಳೆ ಎಸ್‌ಡಿಎಂಸಿ ಅಧ್ಯಕ್ಷ ಗೋವಿಂದಗೌಡ ಪಾಟೀಲ, ಕೊಣ್ಣೂರ ಗ್ರಾಪಂ ಅಧ್ಯಕ್ಷ ಗೂಳಪ್ಪ ಹುಜರತ್ತಿ, ಸದಸ್ಯರಾದ ಕೊಟ್ರೇಶ ಕೊಟ್ರಶೆಟ್ಟಿ, ಹನಮಂತಗೌಡ ಪಾಟೀಲ, ಕೃಷ್ಣಪ್ಪ ಚವ್ಹಾಣ, ಲಕ್ಷ್ಮವ್ವ ಪೂಜಾರ, ಬಸವರಾಜ ಮಾನೆ, ಸಿದ್ದಪ್ಪ ನರಗುಂದ, ಸಂಗಪ್ಪ ಹಳೇಹೊಳಿ, ಎಂ.ಎಚ್‌. ತಿಮ್ಮನಗೌಡ್ರ, ಬಾಬು ಹಿರೇಹೊಳಿ, ಉಮೇಶಗೌಡ ಪಾಟೀಲ, ಶಂಕರಗೌಡ ಯಲ್ಲಪ್ಪಗೌಡ್ರ, ನಿಂಗಪ್ಪ ಸೋಮಾಪುರ, ಅಜ್ಜಪ್ಪ ಹುಡೇದ ಇದ್ದರು.

ಕೊರೊನಾ ಪ್ರತಿಯೊಬ್ಬ ಮನುಷ್ಯನಿಗೆ ಪಾಠ ಕಲಿಸಿದೆ. ಸಂಪನ್ಮೂಲ ಕ್ರೋಡೀಕರಣಕ್ಕೆ ಬಹಳ ಪೆಟ್ಟು ನೀಡಿತು. ಪಕ್ಕದ ರಾಜ್ಯಗಳಲ್ಲಿ ಸರ್ಕಾರಿ ನೌಕರರಿಗೆ ಅರ್ಧ ವೇತನ ಮಾತ್ರ ನೀಡಿದರೆ ನಮ್ಮ ಸರ್ಕಾರದಲ್ಲಿ ಯಾವುದೇ ನೌಕರರ ವೇತನ ಕಡಿಮೆ ಮಾಡಲಿಲ್ಲ. ನಮ್ಮ ಸರ್ಕಾರ ಕೊರೊನಾ ಸಮರ್ಥವಾಗಿ ಎದುರಿಸಿದೆ.

∙ಸಿ.ಸಿ. ಪಾಟೀಲ, ಲೋಕೋಪಯೋಗಿ ಸಚಿವ

ಟಾಪ್ ನ್ಯೂಸ್

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.