ತೋಂಟದ ಶ್ರೀ ಪುಸ್ತಕದ ಸ್ವಾಮೀಜಿ

ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಡಾ|ಎಂ.ಎನ್‌.ನಂದೀಶ ಹಂಚೆ ಅಭಿಮತ

Team Udayavani, Apr 18, 2022, 4:08 PM IST

19

ಗದಗ: ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಸರ್ಕಾರಗಳಿಗೆ ಸಮನಾಗಿ ಪುಸ್ತಕ ಪ್ರಕಟಣೆ ಮಾಡಿರುವ ತೋಂಟದಾರ್ಯ ಮಠ, ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ|ಎಂ.ಎನ್‌. ನಂದೀಶ ಹಂಚೆ ಹೇಳಿದರು.

ನಗರದ ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಜರುಗಿದ ಪುಸ್ತಕೋತ್ಸವದಲ್ಲಿ ಡಾ|ಎಂ.ಎಂ.ಕಲಬುರ್ಗಿ ಅಧ್ಯಯನ ಸಂಸ್ಥೆಯಿಂದ ಪ್ರಕಟಗೊಂಡ ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಲಿಂಗಾಯತ ಮಠ-ಮಾನ್ಯಗಳು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿವೆ. ಸಾಹಿತ್ಯ ಕೃಷಿಯಲ್ಲೂ ಅವುಗಳ ಸಾಧನೆ ದೊಡ್ಡದಿದೆ. ಜಾತ್ರೆಯಲ್ಲೂ ಪುಸ್ತಕ ಬಿಡುಗಡೆಗೆ ವಿಶೇಷ ಆದ್ಯತೆ ನೀಡಿರುವುದು ಅಭಿನಂದನೀಯ. ಲಿಂ|ತೋಂಟದ ಸಿದ್ಧಲಿಂಗ ಶ್ರೀಗಳು ಪುಸ್ತಕದ ಸ್ವಾಮೀಜಿಗಳೆಂದೇ ಹೆಸರಾಗಿದ್ದರು ಎಂದರು.

ಲೇಖಕರು ಸಾಮಾಜಿಕ ಜವಾಬ್ದಾರಿಯನ್ನು ಅರಿತುಕೊಂಡು ಕೃತಿಗಳನ್ನು ರಚಿಸಬೇಕಿದೆ. ಅಕ್ಷರ ಲೋಕಕ್ಕೆ ಚ್ಯುತಿ ಬರುವಂಥ ಕೃತಿ ರಚನೆಗೆ ಮುಂದಾಗಬಾರದೆಂದು ಕಿವಿಮಾತು ಹೇಳಿದರು.

ಭಾಲ್ಕಿಯ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದ್ದೇವರು ಸಮ್ಮುಖ ವಹಿಸಿ ಮಾತನಾಡಿ, ಭಾಲ್ಕಿಯ ಹಿರೇಮಠಕ್ಕೂ ಗದುಗಿನ ತೋಂಟದಾರ್ಯ ಮಠಕ್ಕೂ ಅವಿನಾಭಾವ ಸಂಬಂಧವಿದೆ. ಲಿಂಗೈಕ್ಯ ಸಿದ್ಧಲಿಂಗ ಮಹಾಸ್ವಾಮಿಗಳು ನಮಗೆ ಮಾರ್ಗದರ್ಶಿಯಾಗಿದ್ದರು. ಬಸವಣ್ಣನವರ ವಿಚಾರಧಾರಗಳನ್ನು ಗಟ್ಟಿಯಾಗಿ ನಂಬಿದ್ದ ಲಿಂಗೈಕ್ಯ ಗುರುಗಳು ಅಭಿನವ ಬಸವಣ್ಣ, ದ್ವೀತಿಯ ಅಲ್ಲಮ ಎಂದೇ ಖ್ಯಾತಿ ಪಡೆದಿದ್ದರು. ಪುಸ್ತಕಗಳನ್ನು ಬಿಡುಗಡೆಗೊಳಿಸಿ ಜ್ಞಾನಾರ್ಜನೆಗೈಯುತ್ತಿರುವ ಇಂಥ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ನಮ್ಮ ಸುಕೃತವಾಗಿದೆ ಎಂದರು.

ಸಂಡೂರ ವಿರಕ್ತಮಠದ ಪ್ರಭು ಮಹಾಸ್ವಾಮಿಗಳು, ಆಲಮೇಲದ ಜಗದೇವ ಮಲ್ಲಿಬೊಮ್ಮಯ್ಯ ಮಹಾಸ್ವಾಮಿಗಳು, ಅತ್ತಿವೇರಿಯ ಬಸವೇಶ್ವರಿ ಮಾತಾಜಿ ಸಮ್ಮುಖ ವಹಿಸಿದ್ದರು.

ಸಾನ್ನಿಧ್ಯ ವಹಿಸಿದ್ದ ಡಾ|ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹಾಗೂ ಶಿವಾನಂದ ಮಠದ ಸದಾಶಿವಾನಂದ ಭಾರತೀ ಸ್ವಾಮಿಗಳು ಆಶೀರ್ವಚನ ನೀಡಿದರು. ಇದೇ ವೇಳೆ ಡಾ|ಎಂ.ಎಂ.ಕಲಬುರ್ಗಿ ಅಧ್ಯಯನ ಸಂಸ್ಥೆಯಿಂದ ಪ್ರಕಟಗೊಂಡ ಗ್ರಂಥಗಳನ್ನು ಬಿಡುಗಡೆಗೊಳಿಸಲಾಯಿತು. ಡಾ| ರಮೇಶಕಲ್ಲನಗೌಡರ ಗ್ರಂಥಗಳನ್ನು ಪರಿಚಯಿಸಿದರು.

ರೇವಣಸಿದ್ಧಯ್ಯ ಮರಿದೇವರ ಮಠ ವಚನ ಸಂಗೀತ ನೀಡಿದರು. ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಅಮರೇಶ ಅಂಗಡಿ, ಉಪಾಧ್ಯಕ್ಷ ದಾನಯ್ಯ ಗಣಾಚಾರಿ, ಮೈಲಾರಪ್ಪ ಅರಣಿ, ಬಸವರಾಜ ಹಿರೇಹಡಗಲಿ, ಶಿವಲೀಲಾ ಅಕ್ಕಿ, ಕಾರ್ಯದರ್ಶಿ ಕೊಟ್ರೇಶ ಮೆಣಸಿನಕಾಯಿ, ಮಲ್ಲಿಕಾರ್ಜುನ ಚಂದಪ್ಪನವರ, ಚಂದ್ರಕಾಂತ ಚವ್ಹಾಣ, ಅಶೋಕ ಕುಡತಿನಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.