ಗೋವಿನ ಜೋಳಕ್ಕೆ ಲದ್ದಿಹುಳು ಕಾಟ

ಎಲ್ಲ ಬೆಳೆಗಳಿಗೂ ಕೀಟಬಾಧೆ ಸಮಸ್ಯೆ­ಬೆಳೆ ಸಂರಕ್ಷಣೆಗೆ ಕ್ರಿಮಿನಾಶಕ ಸಿಂಪಡಣೆ ಅನಿವಾರ್ಯ

Team Udayavani, Jul 14, 2021, 8:54 PM IST

page

ಲಕ್ಷ್ಮೇಶ್ವರ: ಇತ್ತೀಚಿನ ದಿನಗಳಲ್ಲಿ ರೈತರ ಎಲ್ಲ ಬೆಳೆಗಳೂ ಬೆನ್ನಿಗೆ ಬಿಡದ ಬೇತಾಳದಂತೆ ಕೀಟಬಾಧೆ, ರೋಗಬಾಧೆಗೆ ತುತ್ತಾಗುತ್ತಿದ್ದು, ಬೆಳೆ ಸಂರಕ್ಷಣೆಗೆ ಕ್ರಿಮಿನಾಶಕ ಸಿಂಪಡಣೆಯೇ ಅನಿವಾರ್ಯವಾಗಿದೆ.

ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ತಾಲೂಕಿನಲ್ಲಿನ ಹೆಸರು ಬೆಳೆಗೆ ಹಳದಿ ರೋಗಬಾಧೆ, ಶೇಂಗಾಕ್ಕೆ ಸುರುಳಿಪೂಚಿ, ಇದೀಗ ಗೋವಿನ ಜೋಳಕ್ಕೆ ಲದ್ದಿಹುಳು ಕಾಟ ಶುರುವಾಗಿದೆ. ಆಳಿನ ಸಮಸ್ಯೆಯಾಗದು, ಕಡಿಮೆ ಖರ್ಚು, ನಿರ್ವಹಣೆ ಸುಲಭ ಎಂಬ ಕಾರಣದಿಂದ ತಾಲೂಕಿನ ಬಹುತೇಕ ರೈತರು ಗೋವಿನಜೋಳ ಬೆಳೆಗೆ ಮಾರು ಹೋಗಿದ್ದಾರೆ. ಪರಿಣಾಮ ಲಕ್ಷ್ಮೇಶ್ವರ ತಾಲೂಕಿನ ಲಕ್ಷ್ಮೇಶ್ವರ, ದೊಡೂxರ, ಶಿಗ್ಲಿ, ಸೂರಣಗಿ, ಬಡ್ನಿ, ಅಡರಕಟ್ಟಿ, ಬಾಲೆಹೊಸೂರ, ಉಂಡೇನಹಳ್ಳಿ, ಯಲ್ಲಾಪುರ ಸೇರಿ ಒಟ್ಟು 9000 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ.

ಒಟ್ಟು 30 ಸಾವಿರ ಹೆಕ್ಟೇರ್‌ ಪ್ರದೇಶದ ಬಿತ್ತನೆ ಕ್ಷೇತ್ರದಲ್ಲಿ ಗೋವಿನಜೋಳದ್ದೇ ಸಿಂಹಪಾಲು. ಜೂನ್‌ ಮೊದಲ ವಾರದಲ್ಲಿ ಬಿತ್ತನೆಯಾಗಿರುವ ಬೆಳೆ ಈಗ 40 ದಿನಗಳ ಕಾಲಾವಧಿಯದ್ದಾಗಿದೆ . ಹದವರ್ತಿ ಮಳೆ, ಎಡೆ ಹೊಡೆದು ರಸಗೊಬ್ಬರ ಹಾಕಿರುವ ಬೆಳೆಗೆ ಲದ್ದು ಹುಳುವಿನ ಬಾಧೆ ಆವರಿಸಿರುವುದು ಉತ್ತಮ ಫಸಲಿನ ನಿರೀಕ್ಷೆಯಲ್ಲಿರುವ ರೈತರ ನಿರೀಕ್ಷೆ ಹುಸಿಗೊಳಿಸಿದೆ. ಕಳೆದ ವರ್ಷ ಕೃಷಿಯಲ್ಲಿ ಹಾನಿ ಅನುಭವಿಸಿದ್ದರೂ ಹೊಸ ಭರವಸೆಯೊಂದಿಗೆ ಸಾಲಶೂಲ ಮಾಡಿ ಮತ್ತೇ ಭೂಮಿತಾಯಿಗೆ ಉಡಿ ತುಂಬಿರುವ ರೈತರು ಚಿಂತೆಗೀಡಾಗಿದ್ದಾರೆ. ಬೆಳೆ ಉಳಿಸಿಕೊಳ್ಳಲು ಸಾವಿರಾರು ರೂ. ಖರ್ಚು ಮಾಡಿ ಕ್ರಿಮಿನಾಕಶಕ ಸಿಂಪಡಣೆಗೆ ಮೊರೆ ಹೋಗಿದ್ದಾರೆ.

ಈಗಾಗಲೇ ಪ್ರತಿ ಎಕರೆಗೆ ಬೀಜ, ಗೊಬ್ಬರ, ಆಳು, ಗಳೆ ಸೇರಿ ಹತ್ತಾರು ಸಾವಿರ ರೂ. ಖರ್ಚು ಮಾಡಿದ್ದು, ಇದು ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಒಟ್ಟಿನಲ್ಲಿ ಮಳೆ ಕೊರತೆ, ಬೆಳೆಹಾನಿ, ಬೆಲೆ ಕುಸಿತ, ಕೀಟಬಾಧೆ ಹೀಗೆ ಹತ್ತಾರು ಸಮಸ್ಯೆಗಳು ರೈತರ ಪಾಲಿಗೆ ತಪ್ಪದ ಗೋಳಾಗಿದೆ. ಹೀಗಾದರೆ ರೈತ ಬದುಕುವುದಾದರೂ ಹೇಗೆ ಎಂಬುದು ರೈತರಾದ ದೇವಣ್ಣ ತೋಟದ, ಶಿವಾನಂದ ಮೂಲಿಮನಿ, ಹಾಲಪ್ಪ ಹಂಗನಕಟ್ಟಿ, ನಿಂಗಪ್ಪ ಟೋಕಾಳಿ ಅವರ ಅಳಲಾಗಿದೆ.

ಟಾಪ್ ನ್ಯೂಸ್

Viral:ಮೇಡಂ ನೀವು ತುಂಬಾ ಬುದ್ಧಿವಂತರು…ಓದಿ ಇದು ಎಂಜಿನಿಯರಿಂಗ್ ವಿದ್ಯಾರ್ಥಿ ಉತ್ತರಪತ್ರಿಕೆ!

Viral:ಮೇಡಂ ನೀವು ತುಂಬಾ ಬುದ್ಧಿವಂತರು…ಓದಿ ಇದು ಎಂಜಿನಿಯರಿಂಗ್ ವಿದ್ಯಾರ್ಥಿ ಉತ್ತರಪತ್ರಿಕೆ!

bhavana rao is in Gray Games

ಭಾವನಾ ಹೊಸ ಗೇಮ್‌! ಗ್ರೇ ಗೇಮ್ಸ್ ನಲ್ಲಿ ಪೊಲೀಸ್‌ ಆಫೀಸರ್‌

DKShi

ಡಿಕೆಶಿ ವಿರುದ್ಧದ ಸಿಬಿಐ ವಿಚಾರಣೆಗೆ ಎಪ್ರಿಲ್ 6ರವರೆಗೆ ತಡೆ ನೀಡಿ ಹೈಕೋರ್ಟ್ ಆದೇಶ

ಹೊಸ ನಾಯಕರ ಹೋರಾಟ: ಕೆಕೆಆರ್ ಗೆ ಪಂಜಾಬ್ ಸವಾಲು; ಟಾಸ್ ಗೆದ್ದ ನಿತೀಶ್ ರಾಣಾ

ಹೊಸ ನಾಯಕರ ಹೋರಾಟ: ಕೆಕೆಆರ್ ಗೆ ಪಂಜಾಬ್ ಸವಾಲು; ಟಾಸ್ ಗೆದ್ದ ನಿತೀಶ್ ರಾಣಾ

1-errwrweewr

ತಮ್ಮಯ್ಯ ಬೇಡ ಬೇಡ..; ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಆರ್ಭಟ

Health Tips: ಏನಿದು ಪಿತ್ತಜನಕಾಂಗದ ಕೊಬ್ಬು? ಈ ಸಮಸ್ಯೆ ಎಷ್ಟು ಗಂಭೀರ

Health Tips: ಏನಿದು ಪಿತ್ತಜನಕಾಂಗದ ಕೊಬ್ಬು? ಈ ಸಮಸ್ಯೆ ಎಷ್ಟು ಗಂಭೀರ

1-sadsaa-sd

ಕಾರವಾರದಲ್ಲಿ ಗೋವಾದಿಂದ ತಂದಿದ್ದ ಭಾರಿ ಪ್ರಮಾಣದ ಮದ್ಯ ವಶ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-18

ರಾಮನವಮಿ ಮೆರವಣಿಗೆ ವೇಳೆ ಗುಂಪು ಘರ್ಷಣೆ

tdy-17

ಕಮಲ ಅಭ್ಯರ್ಥಿಯತ್ತ , ಕೈ-ದಳ ಅಭ್ಯರ್ಥಿಗಳ ಚಿತ್ತ

1-errwrweewr

ತಮ್ಮಯ್ಯ ಬೇಡ ಬೇಡ..; ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಆರ್ಭಟ

TDY-16

ಬಿಜೆಪಿ ಸಭೆಯಲ್ಲಿ ಗದ್ದಲ

ಬೈಲಹೊಂಗಲ ರಾಣಿ ಚನ್ನಮ್ಮ ಸೊಸೈಟಿಯಲ್ಲಿ ಐಟಿ ಅಧಿಕಾರಿಗಳ ಪರಿಶೀಲನೆ

ಬೈಲಹೊಂಗಲ ರಾಣಿ ಚನ್ನಮ್ಮ ಸೊಸೈಟಿಯಲ್ಲಿ ಐಟಿ ಅಧಿಕಾರಿಗಳ ಪರಿಶೀಲನೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

Viral:ಮೇಡಂ ನೀವು ತುಂಬಾ ಬುದ್ಧಿವಂತರು…ಓದಿ ಇದು ಎಂಜಿನಿಯರಿಂಗ್ ವಿದ್ಯಾರ್ಥಿ ಉತ್ತರಪತ್ರಿಕೆ!

Viral:ಮೇಡಂ ನೀವು ತುಂಬಾ ಬುದ್ಧಿವಂತರು…ಓದಿ ಇದು ಎಂಜಿನಿಯರಿಂಗ್ ವಿದ್ಯಾರ್ಥಿ ಉತ್ತರಪತ್ರಿಕೆ!

bhavana rao is in Gray Games

ಭಾವನಾ ಹೊಸ ಗೇಮ್‌! ಗ್ರೇ ಗೇಮ್ಸ್ ನಲ್ಲಿ ಪೊಲೀಸ್‌ ಆಫೀಸರ್‌

DKShi

ಡಿಕೆಶಿ ವಿರುದ್ಧದ ಸಿಬಿಐ ವಿಚಾರಣೆಗೆ ಎಪ್ರಿಲ್ 6ರವರೆಗೆ ತಡೆ ನೀಡಿ ಹೈಕೋರ್ಟ್ ಆದೇಶ

tdy-18

ರಾಮನವಮಿ ಮೆರವಣಿಗೆ ವೇಳೆ ಗುಂಪು ಘರ್ಷಣೆ

tdy-17

ಕಮಲ ಅಭ್ಯರ್ಥಿಯತ್ತ , ಕೈ-ದಳ ಅಭ್ಯರ್ಥಿಗಳ ಚಿತ್ತ