ಶತ್ರುಗಳ ಧ್ವನಿ ಕದ್ದಾಲಿಸಿ ಸಂಭಾವ್ಯ ದಾಳಿ ತಪ್ಪಿಸಿದ್ದೆ!


Team Udayavani, Jul 26, 2019, 9:34 AM IST

gadaga-tdy-2

ಗದಗ: 1999ರಲ್ಲಿ ಕಾರ್ಗಿಲ್ ಹಿಮ ಶಿಖರದಲ್ಲಿ ಇಂಡೋ-ಪಾಕ್‌ ನಡುವೆ ನಡೆದ ಕಾಳಗದಲ್ಲಿ ಭಾರತ ಜಯಭೇರಿ ಬಾರಿಸಿತು. ಕಾರ್ಗಿಲ್ ವಿಜಯದಲ್ಲಿ ಗದಗಿನ ಹೆಜ್ಜೆ ಗುರುತುಗಳು ಅಚ್ಚೊತ್ತಿವೆ. ತಾಲೂಕಿನ ಲಕ್ಕುಂಡಿಯ ನಿವೃತ್ತ ನಾಯಕ್‌ ದತ್ತಾತ್ರೇಯ ಜೋಶಿ ಕಾರ್ಗಿಲ್ ಯುದ್ಧದಲ್ಲಿನ ತಮ್ಮ ಅನುಭವಗಳ ನೆನಪಿನ ಬುತ್ತಿಯನ್ನು ‘ಉದಯವಾಣಿ’ ಎದುರು ಬಿಚ್ಚಿಟ್ಟಿದ್ದಾರೆ.

ಕಾರ್ಗಿಲ್ ಯುದ್ಧ ಆರಂಭಗೊಂಡಾಗ ನಾನು ಕಮ್ಯೂನಿಕೇಷನ್‌ ರೆಜಿಮೆಂಟ್‌ನ 51 ಡಿವಿಜನ್‌ ಸಿಕಿಂದ್ರಾಬಾದ್‌ನಲ್ಲಿದ್ದೆ. ಮಧ್ಯಪ್ರದೇಶದಲ್ಲಿ ಕಾರ್ಯಾಚರಣೆಗೆ ನಮ್ಮ ತಂಡ ಸಾಗಿತ್ತು. ಪ್ರಯಾಣದ ಮಧ್ಯೆ ನನಗೆ ಅನಿರೀಕ್ಷಿತವಾಗಿ ಮತ್ತೂಂದು ಆದೇಶ ಬಂತು. ಕಾರ್ಗಿಲ್ ಯುದ್ಧದ ಹಿನ್ನೆಲೆಯಲ್ಲಿ ಜಮ್ಮುವಿನಲ್ಲಿರುವ 18ನೇ ವೈರ್‌ಲೆಸ್‌ ರೆಜಿಮೆಂಟ್‌ಗೆ ಬೆಂಬಲಿಸಲು ತೆರಳುವಂತೆ ಆದೇಶಿಸಲಾಯಿತು.

ನಾನು ಕಾರ್ಗಿಲ್ ವಲಯಕ್ಕೆ ತಲುಪುವ ಹೊತ್ತಿಗೆ ಯುದ್ಧ ಕೊನೆ ಹಂತದತ್ತ ಸಾಗಿತ್ತು. ಆದರೂ ನಮ್ಮ ಹಾಗೂ ಶತ್ರು ರಾಷ್ಟ್ರಗಳ ವೈರ್‌ಲೆಸ್‌ ಸಂವಹನದ ಮೇಲೆ ನಿಗಾ ಇರಿಸುವುದು ಮಹತ್ವದ ಕೆಲಸವಾಗಿತ್ತು. ನಾನು ಅಲ್ಲಿದ್ದ 8 ದಿನಗಳೂ ಒಮ್ಮೊಮ್ಮೆ ಮನದಲ್ಲಿ ಭಯ, ದೇಶ ಭಕ್ತಿ, ಶೌರ್ಯ ಮೆರೆಯುವ ಎದೆಗಾರಿಕೆಯೂ ಒಟ್ಟೊಟ್ಟಿಗೆ ಕಾಡುತಿದ್ದವು.

ನಾವೇ ಟಾರ್ಗೆಟ್ ಆಗಿದ್ದೆವು: ಎಂದಿನಂತೆ ಕಿವಿಗೆ ವೈರ್‌ಲೆಸ್‌ ಉಪಕರಣ ಅಂಟಿಸಿಕೊಂಡಿದ್ದ ನನಗೆ ಪಾಕಿಸ್ತಾನ ಭಾಗದ ಯಾವುದೋ ಫ್ರಿಕೆನ್ಸಿ ಕನೆಕ್ಟ್ ಆಗಿತ್ತು. ಅದರಲ್ಲಿ ಕಾರ್ಗಿಲ್ ದಾಳಿ ಕುರಿತು ಕೋಡೆಡ್‌ ಮಾತುಗಳು ಕೇಳಿ ಬಂದವು. ತಕ್ಷಣ ಅನುಮಾನದಿಂದ ರೆಕಾರ್ಡ್‌ ಹಾಕಿ ಮೇಲಧಿಕಾರಿಗಳಿಗೆ ರವಾನಿಸಿದೆ. ಅದನ್ನು ಡಿಕೋಡಿಂಗ್‌ ಮಾಡಿ, ವಿರೋಧಿಗಳು ನಾವಿರುವ ತಾಣದ ಮೇಲೆ ದಾಳಿಗೆ ಸಂಚು ರೂಪಿಸಿದ್ದನ್ನು ಪತ್ತೆ ಮಾಡಿ ಅದನ್ನು ವಿಫಲಗೊಳಿಸಲಾತು. ಅದಕ್ಕೆ ನಾನೇ ಟ್ಯಾಪ್‌ ಮಾಡಿದ್ದ ಕಾಲ್ ರೆಕಾರ್ಡ್‌ ಕಾರಣ ಎಂಬ ಮಾತಿನಿಂದ ಕ್ಷಣಕಾಲ ಮೂಕವಿಸ್ಮಿತನಾಗಿದ್ದೆ. ಆನಂತರ ದಿನದಿಂದ ದಿನಕ್ಕೆ ಭಾರತದ ಗೆಲುವಿನ ದಿನಗಳು ಹತ್ತಿರವಾಗಿ, ನಮ್ಮ ರೆಜಿಮೆಂಟ್‌ಗೆ ವಾಪಸ್‌ ಕಳುಹಿಸಲಾಯಿತು. ಇದು ನನ್ನ ಸೇನಾ ಬದುಕಿನ ಅತ್ಯಂತ ಮಹತ್ವದ ದಿನಗಳು ಎನ್ನುತ್ತಾರೆ ದತ್ತಾತ್ರೇಯ ಜೋಶಿ.

 

•ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಜಿಲ್ಲಾದ್ಯಂತ ನೀರಿಗಾಗಿ ಹಾಹಾಕಾರ ಶುರು-ಅಂತರ್ಜಲ ಮಟ್ಟ ಕುಸಿತ

ಗದಗ: ಜಿಲ್ಲಾದ್ಯಂತ ನೀರಿಗಾಗಿ ಹಾಹಾಕಾರ ಶುರು-ಅಂತರ್ಜಲ ಮಟ್ಟ ಕುಸಿತ

crime (2)

Gadag: ಜಮೀನು ಮಾರಾಟದ ಹಣಕ್ಕಾಗಿ ತಂದೆಯನ್ನೇ ಕೊಂದ ಮಕ್ಕಳು

7-gadaga

Gadaga ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಕಣ್ಗಾವಲು ಯೋಜನೆ ಜಾರಿ

Mundargi; ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಕೊಲೆಗೈದು ಮರಕ್ಕೆ ನೇತು ಹಾಕಿದ ದುಷ್ಕರ್ಮಿಗಳು!

Mundargi; ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಕೊಲೆಗೈದು ಮರಕ್ಕೆ ನೇತು ಹಾಕಿದ ದುಷ್ಕರ್ಮಿಗಳು!

ಧರ್ಮ ಪಾಲನೆಯಿಂದ ಶಾಂತಿ ಸಾಧ್ಯ; ಸಂಪತ್ತಿನೊಂದಿಗೆ ಶಿವಜ್ಞಾನವು ಮುಖ್ಯ

ಧರ್ಮ ಪಾಲನೆಯಿಂದ ಶಾಂತಿ ಸಾಧ್ಯ; ಸಂಪತ್ತಿನೊಂದಿಗೆ ಶಿವಜ್ಞಾನವು ಮುಖ್ಯ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.