ಮಹಿಳೆಯರಿಗೆ ಶೌಚಾಲಯ ವ್ಯವಸ್ಥೆ ಕಲ್ಪಿಸಿ
ಬಯಲು ಶೌಚಾಲಯ ತೆರವಿಗೆ ಆಕ್ರೋಶ! ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಜಾಗದ ಕೊರತೆ! ಗೋಡೆ ಕಟ್ಟಲು ಮನವಿ
Team Udayavani, Apr 29, 2021, 7:11 PM IST
ಗಜೇಂದ್ರಗಡ: ಹಿಂದುಳಿದ ಸಮುದಾಯ ವಾಸಿಸುವ ಬಡಾವಣೆಯಲ್ಲಿನ ಮಹಿಳೆಯರಿಗೆ ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ನಿವಾಸಿಗಳು ಪುರಸಭೆ ಮುಂಭಾಗದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಪಟ್ಟಣದ 18 ಮತ್ತು 21ನೇ ವಾರ್ಡ್ಗೆ ಹೊಂದಿಕೊಂಡ ಸಾರ್ವಜನಿಕ ಬಯಲು ಶೌಚಾಲಯವನ್ನು ಪುರಸಭೆಯವರು ಏಕಾಏಕಿ ತೆರವುಗೊಳಿಸಿದ್ದಾರೆ.
ಇದೇ ಶೌಚಾಲಯವನ್ನು ಸುತ್ತಲಿನ ನಾಲ್ಕು ವಾರ್ಡ್ನ ಮಹಿಳೆಯರು ಅವಲಂಬಿಸಿದ್ದಾರೆ. ಇಲ್ಲಿನ ನಿವಾಸಿಗಳು ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಜಾಗದ ಕೊರತೆಯಿದೆ ಎಂದರು. ಮಹಿಳೆಯರ ಮಾನ ಕಾಪಾಡಬೇಕಾದ ಆಡಳಿತವೇ ಇಂತಹ ಕೆಲಸ ಮಾಡಿರುವುದು ಸಮಂಜಸವಲ್ಲ. ಹಿಂದುಳಿದ ಸಮುದಾಯ ವಾಸಿಸುವ ಬಡಾವಣೆ ನಿವಾಸಿಗಳಿಗೆ ತೊಂದರೆಯಾದರೂ ಪುರಸಭೆ ಆಡಳಿತ ಸ್ಪಂದಿಸುತ್ತಿಲ್ಲ. ಕೂಡಲೇ ತೆರವುಗೊಳಿಸಿದ ಗೋಡೆ ಪುನಃ ನಿರ್ಮಾಣಕ್ಕೆ ಮುಂದಾಗಬೇಕು. ಇಲ್ಲದಿದ್ದರೆ ಪುರಸಭೆಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.
ಇದೇ ವೇಳೆ ಪ್ರತಿಭಟನಾ ಸ್ಥಳಕ್ಕೆ ಪುರಸಭೆ ಅಧ್ಯಕ್ಷ ವೀರಣ್ಣ ಪಟ್ಟಣಶೆಟ್ಟಿ, ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ ಆಗಮಿಸಿ, ಮಹಿಳೆಯರ ಅಹವಾಲು ಆಲಿಸಿ ಮಾತನಾಡಿದರು.
ಕಾನೂನಿನಲ್ಲಿ ಬಯಲು ಶೌಚ ನಿಷೇಧಿಸಲಾಗಿದೆ. ಹಾಗಿದ್ದಾಗ್ಯೂ ಇಷ್ಟು ವರ್ಷ ಜಾರಿಯಲ್ಲಿರುವುದು ಕಾನೂನು ಬಾಹೀರ ಕೃತ್ಯವಾಗಿದೆ. ವೈಯಕ್ತಿಕ ಶೌಚ ನಿರ್ಮಾಣಕ್ಕೆ ಮುಂದಾಗಿ, ಇಲ್ಲವಾದರೆ ಸಾರ್ವಜನಿಕ ಸುಲಭ ಶೌಚಾಲಯ ಬಳಕೆ ಮಾಡಿಕೊಳ್ಳಿ ಎಂದರು. ಇದಕ್ಕೊಪ್ಪದ ಪ್ರತಿಭಟನಾಕಾರರು ತೆರವುಗೊಳಿಸಿದ ಗೋಡೆ ನಿರ್ಮಿಸಬೇಕು. ಇಲ್ಲವೇ ಶೌಚಾಲಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಪಟ್ಟುಹಿಡಿದರು. ನಂತರ ಆಡಳಿತ ಮಂಡಳಿ ಜೊತೆ ಚರ್ಚಿಸಿ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ