ಒಕ್ಕಲೆಬ್ಬಿಸುವುದರಿಂದ ಆದಿವಾಸಿಗಳ ಜೀವನ ಶೈಲಿ ನಾಶ
Team Udayavani, May 5, 2019, 2:28 PM IST
ಗದಗ: ಅಭಿವೃದ್ಧಿ ಹೆಸರಲ್ಲಿ ಆದಿವಾಸಿಗಳನ್ನು ಒಕ್ಕಲೆಬ್ಬಿಸಲಾಗುತ್ತಿದೆ. ಹೀಗಾಗಿ ವಿಕಾಸ್ ಎಂಬ ಶಬ್ದವನ್ನು ಕೇಳುತ್ತಿದ್ದಂತೆ ಆದಿವಾಸಿ ಜನರು ಬೆಚ್ಚಿ ಬೀಳುವಂತಾಗಿದೆ ಎಂದು ಮಧ್ಯ ಪ್ರದೇಶದ ಜಾಗೃತ ಆದಿವಾಸಿ ದಲಿತ ಸಂಘಟನೆಯ ಮಾಧುರಿ ಕಳವಳ ವ್ಯಕ್ತಪಡಿಸಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆದ ಮೇ ಸಾಹಿತ್ಯ ಮೇಳದಲ್ಲಿ ಅಭಿವೃದ್ಧಿ ಮತ್ತು ಆದಿವಾಸಿಗಳು ಕುರಿತ ವಿಚಾರ ಗೋಷ್ಠಿಯಲ್ಲಿ ವಿಷಯ ಮಂಡಿಸಿದ ಅವರು, ಈಗಾಗಲೇ ಮಧ್ಯಪ್ರದೇಶ, ಛತ್ತೀಸಗಡ, ಜಾರ್ಖಂಡ ಮತ್ತು ಒರಿಸಾದಲ್ಲಿ ಅಭಿವೃದ್ಧಿ ಹೆಸರಲ್ಲಿ ಲಕ್ಷಾಂತರ ಎಕರೆ ಭೂಮಿಯನ್ನು ಅದಾನಿ, ಅಂಬಾನಿಯಂತವರ ಕೈಗೀಡುತ್ತಿದ್ದಾರೆ. ಆದಿವಾಸಿಗಳು, ಬಡವರು ನೆಲೆ ಕಳೆದುಕೊಳ್ಳುತ್ತಿದ್ದಾರೆ. ಮೋದಿ ಅವರು ಹಗಲಿರುಳು ಪಠಿಸುವ ‘ಸಬ್ ಕಾ ಸಾಥ್- ಸಬ್ ಕಾ ವಿಕಾಸ್’ ಇದೇನಾ ಎಂದು ಹರಿಹಾಯ್ದರು.
ಆದಿವಾಸಿಗಳನ್ನು ಒಕ್ಕಲೆಬ್ಬಿಸುವುದರಿಂದ ಅವರ ಸಂಸ್ಕೃತಿ, ಜೀವನ ಶೈಲಿ ನಾಶವಾಗುತ್ತದೆ. ಇವತ್ತಿಗೂ ಎಷ್ಟೋ ಆದಿವಾಸಿಗಳು ತಮ್ಮ ಜಿಲ್ಲಾ ಕೇಂದ್ರಗಳನ್ನು ಕಂಡಿಲ್ಲ. ಅಂಥವರನ್ನು ಬೀದಿಗೆ ತಳ್ಳುವುದರಿಂದ ತುತ್ತಿನ ಚೀಲಕ್ಕಾಗಿ ಬೆಂಗಳೂರು, ದೆಹಲಿ, ಮುಂಬೈಗಳಲ್ಲಿ ಕಟ್ಟಡ ಕಾರ್ಮಿಕರಾಗಿ ದುಡಿಯುವಂತಾಗುತ್ತದೆ. ತಮ್ಮ ಪರಂಪರಾಗತ ನೆಲೆಯಿಂದ ಹೊರಬಿದ್ದ ಆದಿವಾಸಿಗಳು ನಗರಗಳಲ್ಲಿ ನಿತ್ಯ ಸತ್ತು ಬದುಕುತ್ತಿದ್ದಾರೆ ಎಂದು ಅವರ ಬದುಕಿನ ಕರಾಳತೆಯನ್ನು ಬಿಚ್ಚಿಟ್ಟರು.
ಇಂತಹ ಸಂದರ್ಭದಲ್ಲಿ ಸಂಘ ಪರಿವಾರ ತನ್ನ ಕುತಂತ್ರದಿಂದ ಆದಿವಾಸಿಗಳ ಮೇಲೆ ಹಿಂದುತ್ವವನ್ನು ಹೇರಲು ಪ್ರಯತ್ನಿಸುತ್ತಿದೆ. ಆದಿವಾಸಿಗಳ ನಡುವೆ ದುರ್ಗಾಮಾತೆಯನ್ನು ತಂದು ದಾರಿ ತಪ್ಪಿಸುತ್ತಿದೆ. ಆದಿವಾಸಿಗಳಿಗೆ ನೆಲ, ಜಲ, ಅರಣ್ಯವೇ ದೇವರು. ಅವರು ಮಾನವೀಯ ಗುಣಗಳ, ಪ್ರಕೃತಿ ಸ್ನೇಹಿ ಸಂಸ್ಕೃತಿಯ ಮೇಲೆ ಹಿಂದೂತ್ವದ ಮಾನವ ವಿರೋಧಿ ಸಂಸ್ಕೃತಿಯನ್ನು ಹೇರಲಾಗುತ್ತಿದೆ.
ಮತ್ತೂಂದೆಡೆ ಈ ದೇಶದ ಖನಿಜ ಸಂಪತ್ತನ್ನು ಖಾಸಗಿಯವರಿಗೆ ಲೂಟಿ ಮಾಡಲು ಅವಕಾಶ ಕೊಟ್ಟು ಆದಿವಾಸಿಗಳನ್ನು ಒಕ್ಕಲೆಬ್ಬಿಸುವುದನ್ನು ಅದ್ಯಾವ ಅರ್ಥದಲ್ಲಿ ಅಭಿವೃದ್ಧಿ ಎನ್ನಲು ಸಾಧ್ಯ ಎಂದು ಮಾಧುರಿ ಮಾರ್ಮಿಕವಾಗಿ ಪ್ರಶ್ನಿಸಿದರು. ಕುಮುದಾ ಸುಶೀಲಪ್ಪ, ಕಾವೇರಿ ಎಚ್.ಎಂ. ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…