16ರಂದು ನರಗುಂದ ಬಂದ್ಗೆ ಕರೆ
Team Udayavani, Jul 7, 2019, 10:16 AM IST
ನರಗುಂದ: ಮಹದಾಯಿ ಮತ್ತು ಕಳಸಾ-ಬಂಡೂರಿ ಸತ್ಯಾಗ್ರಹದಲ್ಲಿ ರೈತ ಮಹಿಳೆ ಲಕ್ಷ್ಮಿ ಭಾಯಿ ಮಾನೆ ಮಾತನಾಡಿದರು.
ನರಗುಂದ: ಜೀವ ಜಲಕ್ಕಾಗಿ ನಡೆಸಿಕೊಂಡ ಬಂದ ಮಹದಾಯಿ ಹೋರಾಟ ನಾಲ್ಕು ವರ್ಷಗಳನ್ನು ಪೂರೈಸುತ್ತಿದ್ದರೂ ಇದುವರೆಗೆ ಸರ್ಕಾರಗಳ ಕಡೆಗಣನೆ ರೈತರನ್ನು ವಂಚಿಸುತ್ತಿದೆ. ಸರ್ಕಾರಗಳ ನಿರ್ಲಕ್ಸ್ಯ ಧೋರಣೆ ಖಂಡಿಸಿ ಜು.16ರಂದು ನರಗುಂದ ಬಂದ್ ಕರೆ ನೀಡಲಾಗಿದೆ. ಸಮಸ್ತ ರೈತ ಬಾಂಧವರು ಕೈಜೋಡಿಸಬೇಕು ಎಂದು ಮಲಪ್ರಭೆ ಹೋರಾಟ ಸಮನ್ವಯ ಸಮಿತಿ ಕಾರ್ಯದರ್ಶಿ ಫಕೀರಪ್ಪ ಜೋಗಣ್ಣವರ ಹೇಳಿದರು.
ಶನಿವಾರ ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ 1449ನೇ ದಿನ ನಿರಂತರ ಸತ್ಯಾಗ್ರಹ ವೇದಿಕೆಯಲ್ಲಿ ಮಾತನಾಡಿದ ಅವರು, ಕಳೆದ 4 ದಶಕಗಳಿಂದ ಯೋಜನೆ ವಿಷಯದಲ್ಲಿ ರೈತರ ಕಣ್ಣೊರೆಸುತ್ತಲೇ ಬಂದಿರುವ ಜನಪ್ರತಿನಿದಿಗಳು, ಸರ್ಕಾರಗಳು ಯೋಜನೆ ಅನುಷ್ಠಾನಕ್ಕೆ ತಮ್ಮ ನಿರ್ಲಕ್ಸ್ಯ ಧೋರಣೆ ಮುಂದುವರೆಸಿದೆ. ಇದು ಸಮಸ್ತ ರೈತ ಕುಲದಲ್ಲಿ ಅಸಹನೆ ಮೂಡಿಸುತ್ತಿದೆ ಎಂದು ಫಕೀರಪ್ಪ ಜೋಗಣ್ಣವರ ಆಕ್ರೋಶ ವ್ಯಕ್ತಪಡಿಸಿದರು.
ಸತ್ಯಾಗ್ರಹ ನಿರತ ರೈತ ಮಹಿಳೆ ಲಕ್ಷ್ಮಿ ಭಾಯಿ ಮಾನೆ ಮಾತನಾಡಿ, ನೀರಿಗಾಗಿ ಇಷ್ಟು ವರ್ಷಗಳಿಂದ ಹೋರಾಟ ನಡೆಸುತ್ತ ಬಂದರೂ ಆಳುವ ಸರ್ಕಾರಗಳಿಗೆ ಇದರ ಕಾಳಜಿಯಿಲ್ಲ. ಇನ್ನಾದರೂ ಸರ್ಕಾರಗಳು ರೈತರ ನೆರವಿಗೆ ಧಾವಿಸಲಿ ಎಂದು ಆಗ್ರಹಿಸಿದರು. ಮಲಪ್ರಭೆ ಹೋರಾಟ ಸಮನ್ವಯ ಸಮಿತಿ ಉಪಾಧ್ಯಕ್ಷ ರಮೇಶ ನಾಯ್ಕರ, ಯಲ್ಲಪ್ಪ ಗುಡದರಿ, ಲಕ್ಷ ್ಮಣ ಮನೇನಕೊಪ್ಪ, ವೆಂಕಪ್ಪ ಹುಜರತ್ತಿ, ಹನಮಂತಪ್ಪ ಪಡೆಸೂರ, ಮಲ್ಲಪ್ಪ ಐನಾಪೂರ, ವಾಸು ಚವ್ಹಾಣ, ವೆಂಕಟೇಶ ಸಾಬಳೆ, ಈರಣ್ಣ ಗಡಗಿ, ಮಲ್ಲೇಶಪ್ಪ ಬಾಳಿಕಾಯಿ, ಹನುಮಂತ ಸರನಾಯ್ಕರ, ಹನುಮಂತ ಕೋರಿ, ಅನಸಮ್ಮ ಶಿಂಧೆ, ನಾಗರತ್ನ ಸವಳಭಾಯಿ, ದೇವಕ್ಕ ತಾಳಿ, ಮಾಬೂಬಿ ಕೆರೂರ, ಚನ್ನವ್ವ ಕರ್ಜಗಿ ಸೇರಿ ಹೋರಾಟಗಾರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ