ಸಿಸಿ ರಸ್ತೆ ಕಾಮಗಾರಿಗೆ ಚಾಲನೆ
Team Udayavani, Jan 20, 2020, 3:59 PM IST
ಶಿರಹಟ್ಟಿ: ಶಿರಹಟ್ಟಿ ಮತ ಕ್ಷೇತ್ರದಾದ್ಯಂತವಾಗಿ ಅತಿವೃಷ್ಟಿಯಿಂದಾಗಿ ರಸ್ತೆಗಳ ಸುಧಾರಣೆಗೆ ಕ್ರಮ ಜರುಗಿಸುವುದ ಅವಶ್ಯವಿದ್ದು, ಈಗಾಗಲೇ ಮುಂಡರಗಿ ಮತ್ತು ಲಕ್ಷ್ಮೇಶ್ವರ ಭಾಗದಲ್ಲಿನ ರಸ್ತೆಗಳ ಸುಧಾರಣೆಗಾಗಿ ಅನುದಾನ ಬಿಡಗಡೆಯಾಗಿದೆ. ಮುಂದಿನ ದಿನಗಳಲ್ಲಿ ಮತಕ್ಷೇತ್ರದ ಎಲ್ಲ ರಸ್ತೆಗಳನ್ನು ಸುಧಾರಣೆ ಮಾಡಲಾಗುವುದು ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.
ತಾಲೂಕಿನ ಕಡಕೋಳ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ಕಡಕೋಳದಿಂದ 14.50 ಕಿ.ಮೀ ರಸ್ತೆ ವರೆಗೆ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ರಸ್ತೆಗಳ ಗುಣಮಟ್ಟವನ್ನು ಗುತ್ತಿಗೆದಾರರು ಕಾಯ್ದುಕೊಳ್ಳಬೇಕು. ಜೊತೆಗೆ ಕಡಕೋಳ ಗ್ರಾಮಸ್ಥರು ಗುತ್ತಿಗೆದಾರರಿಗೆ ಸಹಕಾರವನ್ನು ನೀಡಿದರೆ ಅವರು ಉತ್ತಮವಾದ ರಸ್ತೆಯನ್ನು ನಿರ್ಮಿಸಲು ಅನುಕೂಲವಾಗುತ್ತದೆ.ಕೃಷಿಕರಿಗೆ ಅನುಕೂಲ ಕಲ್ಪಿಸುವುದಕ್ಕಾಗಿ ತುಂಗಭದ್ರ ನದಿಯನ್ನು ಸಮರ್ಪಕವಾಗಿಬಳೆಕ ಮಾಡಿಕೊಳ್ಳಲು ಉತ್ತಮವಾದ ಯೋಜನೆಯನ್ನು ರೂಪಿಸಲುಕಾರ್ಯಪ್ರವೃತ್ತರಾಗಿದ್ದು, ಮುಂದಿನ ದಿನಮಾನದಲ್ಲಿ ಹಂತ ಹಂತವಾಗಿ ಅಬಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪಣ್ಣ ಕೊಂಚಿಗೇರಿ, ಗ್ರಾಪಂ ಅಧ್ಯಕ್ಷ ವಿರುಪಾಕ್ಷಪ್ಪ ಗೌಳಿ, ಅಂದಪ್ಪ ಕೋರಿ, ಮಲ್ಲಿಕಾರ್ಜುನ ಅಂಗಡಿ, ಬಸವರಾಜ ಪೂಜಾರ, ಶರಣಪ್ಪ ಹೂಗಾರ, ಅಪ್ಪಣ್ಣ ಹರಿಜನ, ಶರಣಪ್ಪ ಹರ್ಲಾಪೂರ, ಮಹದೇವಪ್ಪ ಅಡವಿ ಅಧಿಕಾರಿಗಳಾದ ಎಚ್.ಬಿ. ಹೊಸಮನಿ, ಶಂಭು ಕಾಳಗಿ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ