ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿವಿ ಕುಲಪತಿಯಾಗಿ ಚಟಪಲ್ಲಿ ಅಧಿಕಾರ ಸ್ವೀಕಾರ
Team Udayavani, May 28, 2020, 7:32 AM IST
ಗದಗ: ನಗರದ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಡಾ| ವಿಷ್ಣುಕಾಂತ ಎಸ್. ಚಟಪಲ್ಲಿ ಅವರು ಇತ್ತೀಚೆಗೆ ಬೆಂಗಳೂರಿನ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಗ್ರಾವಿವಿ ವಿಶ್ರಾಂತ ಕುಲಪತಿ ಪ್ರೊ| ಬಿ. ತಿಮ್ಮೇಗೌಡ, ಕುಲಸಚಿವ ಪ್ರೊ| ಸುರೇಶ ವಿ. ನಾಡಗೌಡರ ಮತ್ತಿತರರು ಇದ್ದರು. ನೂತನ ಕುಲಪತಿಗೆ ಪುಷ್ಪಗುತ್ಛ ನೀಡಿ ಶುಭ ಕೋರಿದರು. ಈ ಹಿಂದಿನ ಕುಲಪತಿ ಪ್ರೊ| ಬಿ. ತಿಮ್ಮೇಗೌಡ ಅವರು 2019ರ ಆಗಸ್ಟ್ 7ರಂದು ನಿವೃತ್ತರಾಗಿದ್ದರು. ಬಳಿಕ ಗ್ರಾವಿವಿ ಕುಲಸಚಿವರಾಗಿದ್ದ ಡಾ| ಸುರೇಶ ವಿ. ನಾಡಗೌಡರ್ ಅವರು ಹಂಗಾಮಿ ಕುಲಪತಿಯಾಗಿ ಕಾರ್ಯನಿರ್ವಹಿಸಿದರು. ಇದೀಗ ರಾಜ್ಯಪಾಲರ ಆದೇಶದ ಮೇರೆಗೆ ಡಾ| ವಿಷ್ಣುಕಾಂತ ಚಟಪಲ್ಲಿ ಅವರು ಅಧಿ ಕಾರ ಸ್ವೀಕರಿಸಿದರು. ಚಟಪಲ್ಲಿ ಅವರು ಈ ಹಿಂದೆ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರೊಫೆಸರ್, ನ್ಯಾಕ್ ಕಮಿಟಿ ಸದಸ್ಯ ಸೇರಿದಂತೆ ಹಲವು ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’