ಮಕ್ಕಳ ಸೃಜನಶೀಲತೆ ಪೋಷಣೆ ಅಗತ್ಯ

ಉಚಿತ ಬೇಸಿಗೆ ಶಿಬಿರಕ್ಕೆ ಚಿತ್ತಾರ ಬಿಡಿಸುವ ಮೂಲಕ ಚಾಲನೆ

Team Udayavani, May 27, 2022, 2:33 PM IST

16

ಮುಂಡರಗಿ: ರಾಜ್ಯ ಸರಕಾರ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಎಸ್‌.ಎಂ. ಭೂಮರಡ್ಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗಾಗಿ ಹಮ್ಮಿಕೊಂಡ ಉಚಿತ ಬೇಸಿಗೆ ಶಿಬಿರವನ್ನು ಸಿಡಿಪಿಒ ಮಹದೇವ ಇಸರನಾಳ ಮಕ್ಕಳೊಂದಿಗೆ ಚಿತ್ತಾರ ಬಿಡಿಸುವ ಮೂಲಕ ಉದ್ಘಾಟಿಸಿದರು.

ನಂತರ ಮಾತನಾಡಿದ ಸಿಡಿಪಿಒ ಮಹದೇವ ಇಸರನಾಳ ಅವರು, ಬಾಲಭವನವು ಪ್ರತಿವರ್ಷ ಮಕ್ಕಳಿಗಾಗಿ ಉಚಿತ ಬೇಸಿಗೆ ಶಿಬಿರಗಳನ್ನು ಸಂಘಟಿಸುತ್ತಿದ್ದು, ಮಕ್ಕಳು ಇದರ ಲಾಭ ಪಡೆಯಲಿದ್ದಾರೆ. ಇಲಾಖೆ ಸಹಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆ ಉಸ್ತುವಾರಿಯಲ್ಲಿ ಈ ಶಿಬಿರ ನಡೆಯಲಿದ್ದು ಮಕ್ಕಳಲ್ಲಿ ಕಲೆ ಸಾಹಿತ್ಯ ಸಂಸ್ಕೃತಿಯ ಬಗ್ಗೆ ಆಸಕ್ತಿ ಮೂಡುವಂತೆ ಮಾಡಲು ನೃತ್ಯ, ಸಂಗೀತ, ಸಾಹಿತ್ಯ, ಚಿತ್ರಕಲೆ, ಕಾಗದ ಕುಸರಿಕಲೆ, ಯೋಗ, ನಾಟಕ ಮೊದಲಾದ ಚಟುವಟಿಕೆಗಳಲ್ಲಿ ತೊಡಗಿಸಲಾಗುತ್ತಿದೆ. ಆಯಾ ಕ್ಷೇತ್ರದಲ್ಲಿ ನುರಿತ ಸಂಪನ್ಮೂಲವ್ಯಕ್ತಿಗಳು ಮಕ್ಕಳಿಗೆ ತರಬೇತಿ ನೀಡಲಿದ್ದಾರೆ. ಒಂದು ದಿನ ಹೊರಸಂಚಾರ ಕೂಡ ಶಿಬಿರದಲ್ಲಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಡಾ| ನಿಂಗು ಸೊಲಗಿ ಮಾತನಾಡಿ, ಮಕ್ಕಳ ಸೃಜನಶೀಲತೆ ಪೋಷಿಸಲು ಇಂಥ ಶಿಬಿರಗಳ ಅಗತ್ಯತೆ ಇದ್ದು, ಬೇಸಿಗೆ ಅವಧಿಯಲ್ಲಿ ಹಲವೆಡೆ ಶಿಬಿರಗಳು ನಡೆಯುತ್ತವೆಯಾದರೂ ಉಚಿತವಾಗಿ ಇರುವುದಿಲ್ಲ. ಈ ಹಿನ್ನೆಲೆಯಲ್ಲಿ ಬಾಲಭವನ ಸೊಸೈಟಿ ಉಚಿತ ಶಿಬಿರಗಳನ್ನು ಹಮ್ಮಿಕೊಂಡಿದ್ದು, ಬಡ ಮಕ್ಕಳಿಗೂ ಇದರ ಲಾಭ ತಟ್ಟುವಂತೆ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಇದರ ಔಚಿತ್ಯವನ್ನರಿತೇ ಸಾರ್ವಜನಿಕ ಶಿಕ್ಷಣ ಇಲಾಖೆ ಬೇಸಿಗೆ ರಜಾ ಅವಧಿಯ ನಂತರ ಹದಿನೈದು ದಿನ ಬೇಗನೇ ಶಾಲೆ ಆರಂಭಿಸಿ ಮಳೆಗಾಲದ ಮುನ್ನ ಮಕ್ಕಳಿಗೆ ಮಳೆಬಿಲ್ಲು ಹೆಸರಿನಲ್ಲಿ ಸೃಜನಶೀಲ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಹೊಸ ಹೆಜ್ಜೆ ಇರಿಸಿದೆ ಎಂದರು.

ಬಿಆರ್‌ಸಿ ಸಂಪನ್ಮೂಲವ್ಯಕ್ತಿ ಬಿ.ಎಚ್‌. ಸೂಡಿ, ಸಿಆರ್‌ಪಿ ಎಸ್‌.ಡಿ. ಬಸೆಗೌಡರ ಮಾತನಾಡಿದರು. ಶಿಬಿರ ಸಂಚಾಲಕ ಸತ್ಯಪ್ಪ ಸತ್ಯಮ್ಮನಗುಡಿ, ಆರ್‌. ಎಸ್‌. ಚವಡಿ, ಎಂ.ಪಿ. ಶೀರನಹಳ್ಳಿ, ಎಸ್‌.ಎನ್‌. ಪಾಟೀಲ, ಕೆ.ಎಂ. ರತ್ನಕಟ್ಟಿ, ಡಿ.ಎಚ್‌. ಭಜಂತ್ರಿ ಉಪಸ್ಥಿತರಿದ್ದರು.

ಸುಜಾತಾ ಬೆಟಗೇರಿ ಸ್ವಾಗತಿಸಿದರು. ಎಸ್‌.ಎಚ್‌. ಪೂಜಾರ ನಿರೂಪಿಸಿದರು. ಬಿ.ಕೆ. ಮಾದರ ವಂದಿಸಿದರು.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.