ಗ್ರಾಪಂಗಳಲ್ಲಿ ಮಕ್ಕಳ ಗ್ರಾಮ ಸಭೆ ನಡೆಯಲಿ: ರಾಘವೇಂದ್ರ


Team Udayavani, Apr 27, 2019, 2:08 PM IST

gad-2

ಗದಗ: ಮಕ್ಕಳು ತಮ್ಮ ಬೇಡಿಕೆಗಳನ್ನು ಮಂಡಿಸಲು, ಅವರಿಗೆ ಸಂಬಂಧಪಟ್ಟ ವಿಷಗಳನ್ನು ಚರ್ಚಿಸಲು ಗ್ರಾ.ಪಂ.ಗಳಲ್ಲಿ ನಿಯಮಿತವಾಗಿ ಮಕ್ಕಳ ಗ್ರಾಮ ಸಭೆಗಳನ್ನು ಆಯೋಜಿಸುವುದು ಅಗತ್ಯವೆಂದು ಕೊಪ್ಪಳ ಯುನಿಸೆಫ್‌ ಮಕ್ಕಳ ರಕ್ಷಣಾ ಕಚೇರಿಯ ಪ್ರಾದೇಶಿಕ ಸಂಯೋಜಕ ರಾಘವೇಂದ್ರ ಭಟ್ ಅಭಿಪ್ರಾಯಪಟ್ಟರು.

ಕರ್ನಾಟಕ ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ವಿಶ್ವವಿದ್ಯಾಲಯ ಗದಗ ಮತ್ತು ಯುನಿಸೆಫ್‌ ಹೈದರಾಬಾದ್‌ ಸಹಯೋಗದೊಂದಿಗೆ ‘ಸ್ಥಳೀಯ ಸ್ವಯಂ ಸರ್ಕಾರ ಮತ್ತು ಮಕ್ಕಳ ಹಕ್ಕುಗಳ ಒಡಂಬಡಿಕೆ’ ಕುರಿತು ವಿದ್ಯಾರ್ಥಿಗಳಿಗೆ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಮಕ್ಕಳ ಹಕ್ಕುಗಳು, ಅವುಗಳನ್ನು ರಕ್ಷಿಸಬೇಕಾದ ಅಗತ್ಯ, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಅದರ ಪಾತ್ರ, ಈ ನಿಟ್ಟಿನಲ್ಲಿ ಸ್ಥಳೀಯ ಸರ್ಕಾರಗಳು ನಿರ್ವಹಿಸಬೇಕಾದ ಕಾರ್ಯಗಳ ಕುರಿತು ವಿವರಗಳನ್ನು ನೀಡಿದ ಅವರು, ಮಾನವ ಅಭಿವೃದ್ಧಿ ಸೂಚ್ಯಾಂಕಗಳಲ್ಲಿ 68 ಸೂಚ್ಯಾಂಕಗಳು ಮಕ್ಕಳ ಅಭಿವೃದ್ಧಿಗೆ ಸಂಬಂಧಪಟ್ಟಿವೆ. ಆದ್ದರಿಂದ ಮಕ್ಕಳ ಅಭಿವೃದ್ಧಿಯಾಗದೇ ದೇಶ ಅಭಿವೃದ್ಧಿ ಸಾಧ್ಯವಿಲ್ಲ. ಪ್ರತಿಯೊಬ್ಬರೂ ಇದರ ಬಗ್ಗೆ ತಿಳಿದುಕೊಳ್ಳಬೇಕು. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಯಾವುದೇ ಮಗು ಸಂಕಷ್ಟದ ಪರಿಸ್ಥಿತಿಯಲ್ಲಿದ್ದರೆ, ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಿದರೆ, ಆ ಮಗುವನ್ನು ಸಂಕಷ್ಟದ ಪರಿಸ್ಥಿತಿಯಿಂದ ಕಾಪಾಡಬಹುದು. ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣಾ) ಕಾಯ್ದೆ, 2015 ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ, ಗ್ರಾಮ ಪಂಚಾಯತಿಯ ಸ್ಥಾಯಿ ಸಮಿತಿಗಳು, ಅವುಗಳು ನಿರ್ವಹಿಸ ಬೇಕಾದ ಕಾರ್ಯಚಟುವಟಿಕೆಗಳ ಕುರಿತು ಸವಿಸ್ತಾರವಾದ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ರಾವಿವಿ ಕುಲಸಚಿವ ಪ್ರೊ| ಡಾ| ಸುರೇಶ. ವಿ. ನಾಡಗೌಡರ, ಯುನಿಸೆಫ್‌ ಸಹಯೋಗದೊಂದಿಗೆ ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸಲಾದ ಕೆಎಸ್‌ಆರ್‌ಡಿಪಿಆರ್‌ಯು, ಮಕ್ಕಳ ಹಕ್ಕುಗಳು ಮತ್ತು ಆಡಳಿತ ಕೋಶ, ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಈ ಕೋಶದಿಂದ ಕೈಗೊಳ್ಳಲು ಯೋಜಿಸಲಾದ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.

ವಿಶ್ವವಿದ್ಯಾಲಯವು ದತ್ತು ಪಡೆದುಕೊಂಡಿರುವ ಗ್ರಾಮಗಳಲ್ಲಿ, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮಕ್ಕಳ ಹಕ್ಕುಗಳ ರಕ್ಷಣಾ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ. ಅದರೊಂದಿಗೆ ಪಂಚಾಯತ್‌ ರಾಜ್‌ ಕಾಯ್ದೆಗೆ 2015ರಲ್ಲಿ ತಂದ ತಿದ್ದುಪಡಿಗಳು, ಮಾನವ ಅಭಿವೃದ್ಧಿ ಹಾಗೂ ಮಕ್ಕಳ ಅಭಿವೃದ್ಧಿ ಸೂಚ್ಯಾಂಕಗಳನ್ನು ಸವಿಸ್ತಾರವಾಗಿ ವಿವರಿಸಿದರು.

ಕೊಪ್ಪಳದ ಯುನಿಸೆಫ್‌ ಮಕ್ಕಳ ರಕ್ಷಣಾ ಕಚೇರಿಯ ಹರೀಶ ಜೋಗಿ ಮಾತನಾಡಿ, ಬಾಲ್ಯ ವಿವಾಹ ನಿಷೇಧ ಕಾಯ್ದೆಯನ್ನು ಅನುಷ್ಠಾನಗೊಳಿಸುವ ಕುರಿತು ಮಾಹಿತಿ ನೀಡಿದರು. ಗೌರವ ಪ್ರಾಧ್ಯಾಪಕ ಶಿವಣ್ಣ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಭಾರತಿ ಶೆಟ್ಟರ್‌ ಭಾಗವಹಿಸಿದ್ದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.