ಕೆಸರು ಗದ್ದೆಯಲ್ಲ, ಕಾಲೋನಿ ರಸ್ತೆ

•ಮನವಿಗೆ ಸ್ಪಂದಿಸದ ನಗರಸಭೆ•ವಾಹನ ಸಂಚಾರಕ್ಕೆ ಪರದಾಟ •ಸ್ಥಳೀಯ ನಾಗರಿಕರ ಹಿಡಿಶಾಪ

Team Udayavani, Jul 28, 2019, 11:22 AM IST

gadaga-tdy-2

ಗದಗ: 24x7 ಒಳಚರಂಡಿ ಕಾಮಗಾರಿಯಿಂದಾಗಿ ಇಲ್ಲಿನ ಹುಡ್ಕೋ ಕಾಲೋನಿ ಪ್ರಮುಖ ರಸ್ತೆಗಳು ಹದಗೆಟ್ಟಿವೆ.

ಗದಗ: ಹೇಳಿಕೊಳ್ಳಲು ಇವು ಪ್ರತಿಷ್ಠಿತರ ಬಡಾವಣೆಗಳಾದರೂ ಅಲ್ಪಸ್ವಲ್ಪ ಮಳೆಯಾದರೆ ಸಾಕು ಇಲ್ಲಿನ ರಸ್ತೆಗಳು ಅಕ್ಷರಶಃ ಕೆಸರು ಗದ್ದೆಯಾಗಿ ಮಾರ್ಪಡುತ್ತವೆ. ಇದರಿಂದಾಗಿ ವಾಹನಗಳು ಹಾಗೂ ಸಾರ್ವಜನಿಕರ ಸಂಚಾರಕ್ಕೆ ತುಂಬ ತೊಂದರೆ ಅನುಭವಿಸುವಂತಾಗಿದೆ. ರಸ್ತೆಗಳನ್ನು ದುರಿಸ್ತಿಗೊಳಿಸುವಂತೆ ಹಲವು ಬಾರಿ ನಗರಸಭೆಗೆ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲವೆಂದು ಸ್ಥಳೀಯ ನಾಗರಿಕರು ಹಿಡಿಶಾಪ ಹಾಕುತ್ತಿದ್ದಾರೆ.

ಸತತ ಬರಗಾಲದ ನಡುವೆ ಇತ್ತೀಚೆಗೆ ಮುಂಗಾರು ಬಿರುಸುಗೊಂಡಿದ್ದು, ಎಲ್ಲಡೆ ಹರ್ಷ ಮೂಡಿಸಿದೆ. ಆದರೆ, ನಗರದ ಹೃದಯ ಭಾಗದ ಮುಳಗುಂದ ನಾಕಾಕ್ಕೆ ಹೊಂದಿಕೊಂಡಿರುವ ಇಲ್ಲಿನ ಸರ್ವೋದಯ ಕಾಲೋನಿ, ಹುಡ್ಕೋ ಕಾಲೋನಿ ಜನರಿಗೆ ಮಳೆ ಎಂಬುದು ಒಂದು ರೀತಿಯ ಶಾಪವಾಗಿ ಪರಿಣಮಿಸಿದೆ.

ರಾಚೋಟೇಶ್ವರ ನಗರ ಹಾಗೂ ಮುಳಗುಂದ ನಾಕಾ ನಡುವೆ ಸಂಪರ್ಕ ಕಲ್ಪಿಸುವ ಸರ್ವೋದಯ ಕಾಲೋನಿ ರಸ್ತೆಗಳಿಂದ ಪಾದಚಾರಿ ಹಾಗೂ ಬೈಕ್‌ ಸವಾರರಿಗೆ ಹೆಚ್ಚಿನ ಅನುಕೂಲವಾಗಿವೆ. ಆದರೆ, ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದಾಗಿ ರಸ್ತೆ ಎಂಬುದು ಕೆಸರು ಗದ್ದೆಯಂತಾಗಿದ್ದು, ಆತಂಕದಲ್ಲೇ ಹೆಜ್ಜೆಯಿಡುವಂತಾಗಿದೆ. ಈಗಾಗಲೇ ನಾಲ್ಕೈದು ಜನರು ಬಿದ್ದು ಗಾಯಗೊಂಡಿದ್ದಾರೆ. ಇನ್ನು, ವೃದ್ಧರು, ಶಾಲಾ ಮಕ್ಕಳು, ಬೈಕ್‌ ಸವಾರರ ಪರಿಸ್ಥಿತಿ ಹೇಳತೀರದು ಎಂಬುದು ಸ್ಥಳೀಯರ ದೂರು.

ಅಭಿವೃದ್ಧಿ ನೆಪದಲ್ಲಿ ರಸ್ತೆ ಹಾಳು: ನಗರದಲ್ಲಿ ನಡೆಯುತ್ತಿರುವ ಒಳಚರಂಡಿ ಹಾಗೂ 24×7 ಕುಡಿಯುವ ನೀರಿನ ಕಾಮಗಾರಿ ಕಳೆದ ನಾಲ್ಕೈದು ವರ್ಷಗಳಿಂದ ಪೂರ್ಣಗೊಳ್ಳುತ್ತಿಲ್ಲ. ಒಮ್ಮೆ 24×7 ನೀರಿನ ಪೈಪ್‌ಲೈನ್‌ಗಾಗಿ ರಸ್ತೆಗಳನ್ನು ಅಗೆದರೆ, ಇನ್ನೊಮ್ಮೆ ಒಳಚರಂಡಿಗಾಗಿ ರಸ್ತೆಗಳಲ್ಲಿ ತಗ್ಗು ತೋಡಲಾಗುತ್ತದೆ. ಬಡಾವಣೆಯಲ್ಲಿ ಉಭಯ ಕಾಮಗಾರಿಗಳಿಗಾಗಿ ಸುಸ್ಥಿತಿಯಲ್ಲಿ ಡಾಂಬರ್‌ ರಸ್ತೆಯಲ್ಲಿ ಪೈಪ್‌ಲೈನ್‌ಗಾಗಿ ಬೇಕಾಬಿಟ್ಟಿಯಾಗಿ ತೆಗ್ಗು ಅಗೆಯಲಾಗಿದೆ. ಬಳಿಕ ಸಮಪರ್ಕವಾಗಿ ಮಣ್ಣು ಮುಚ್ಚದಿರುವುದೇ ಈ ಎಲ್ಲ ಸಮಸ್ಯೆಗೆ ಕಾರಣ ಎನ್ನುತ್ತಾರೆ ಅಂಬಾಸಾ ಚವ್ಹಾಣ್‌.

ಕಾಲೋನಿಯಲ್ಲೇ 24×7 ಕುಡಿಯುವ ನೀರಿನ ಬೃಹತ್‌ ಓವರ್‌ ಹೆಡ್‌ ಟ್ಯಾಂಕ್‌ ಇದೆ. ಮುಖ್ಯರಸ್ತೆಯಿಂದ ಟ್ಯಾಂಕ್‌ಗೆ ಇದೇ ಮಾರ್ಗವಾಗಿ ಸಂಪರ್ಕ ಕಲ್ಪಿಸಲಾಗಿದೆ. ಅದಕ್ಕಾಗಿ ಬೃಹತ್‌ ಗಾತ್ರದ ಪೈಪ್‌ ಅಳವಡಿಸಲು ಬಹುತೇಕ ರಸ್ತೆಯನ್ನೇ ತೋಡಿದ್ದಾರೆ. ಹೀಗಾಗಿ ರಸ್ತೆ ಸಂಪೂರ್ಣ ಹಾಳಾಗಿದೆ. ದುರಸ್ತಿಗೊಳಿಸುವಂತೆ ಹಲವು ಬಾರಿ ನಗರಸಭೆ ಅಧಿಕಾರಿಗಳು ಹಾಗೂ ಹಿಂದಿನ ನಗರಸಭೆ ಸದಸ್ಯರಾಗಿದ್ದ ಎಂ.ಸಿ. ಶೇಖ್‌ ಅವರ ಗಮನಕ್ಕೆ ತಂದರೂ ಸ್ಪಂದಿಸುತ್ತಿಲ್ಲ ಎಂಬುದು ಸ್ಥಳೀಯರ ಆರೋಪ.

ಇನ್ನು, ಹುಡ್ಕೋ ಕಾಲೋನಿಯ ಜಾಗೃತ ಆಂಜನೇಯ ದೇವಸ್ಥಾನದ ರಸ್ತೆ, ಸಿದ್ಧಲಿಂಗ ನಗರದ ಸರಕಾರಿ ಕನ್ನಡ ಗಂಡು ಮಕ್ಕಳ ಶಾಲೆ ಹಾಗೂ ನಗರಸಭೆ ಮಾಜಿ ಸದಸ್ಯೆ ವಂದನಾ ವರ್ಣೇಕರ ಮನೆ ಸಮೀಪ, ಎಂಐಜಿ ಮನೆಗಳ ಭಾಗದ ಹಲವು ರಸ್ತೆಗಳ ಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಲ್ಲ.

ಮೂಲಗಳ ಪ್ರಕಾರ, ರಸ್ತೆ ಹದಗೆಡಲು ಕಾರಣರಾದವರೇ ರಸ್ತೆಯನ್ನು ನಿರ್ಮಿಸಿ ಕೊಡಬೇಕು. ಆದರೆ, ಈ ಭಾಗದಲ್ಲಿ 24×7 ಹಾಗೂ ಒಳಚರಂಡಿ ಕಾಮಗಾರಿಗಳು ನಡೆದಿದ್ದರಿಂದ ಉಭಯ ಗುತ್ತಿಗೆದಾರರು, ಪರಸ್ಪರ ಬೊಟ್ಟು ಮಾಡಿ ಜಾರಿಕೊಳ್ಳುತ್ತಿದ್ದಾರೆ. ಹೀಗಾಗಿ ರಸ್ತೆಗಳು ದುರಸ್ತಿಕಾಣದೇ ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಗಿರುವುದು ವಿಪರ್ಯಾಸ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.