ಪಠ್ಯ-ಪುಸ್ತಕ ಪರಿಷ್ಕರಣಾ ಸಮಿತಿ ನಿರ್ಧಾರಕ್ಕೆ ಖಂಡನೆ
Team Udayavani, May 21, 2022, 6:32 PM IST
ಗದಗ: ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ತೀರ್ಮಾನಗಳು ದೇಶದ ಸಮಗ್ರತೆ, ಸೌಹಾರ್ದತೆ ತತ್ವಗಳಿಗೆ ವ್ಯತಿರಿಕ್ತವಾಗಿದ್ದು, ತಕ್ಷಣ ಅಂತಹ ನಿರ್ಧಾರ ಕೈಬಿಡಬೇಕೆಂದು ಬಂಡಾಯ ಸಾಹಿತಿ ಬಸವರಾಜ ಸೂಳಿಭಾವಿ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 9 ಮತ್ತು 10 ನೇ ತರಗತಿ ಪಠ್ಯಕ್ರಮದಲ್ಲಿ ಭಾರೀ ಬದಲಾವಣೆ ತರಲಾಗುತ್ತಿದೆ. ದೇಶಕ್ಕಾಗಿ ತ್ಯಾಗ, ಬಲಿದಾನ ನೀಡಿರುವ ಮಹನೀಯರ ಅಧ್ಯಾಯಗಳನ್ನು ಕೈಬಿಡುವ ಹುನ್ನಾರ ನಡೆಸಿದೆ. ದೇಶ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಧುಮುಕಲು ಯುವಜನರಿಗೆ ಪ್ರೇರಣಾ ಶಕ್ತಿಯಾಗಿದ್ದ ಭಗತ್ ಸಿಂಗ್ರಂತಹ ಕ್ರಾಂತಿ ಚೇತನಗಳ ಅಧ್ಯಾಯಗಳನ್ನು ಕೈಬಿಡುವ ಬಗ್ಗೆ ಪಠ್ಯ ಪರಿಷ್ಕರಣಾ ಸಮಿತಿಯಿಂದಲೇ ಪ್ರಸ್ತಾಪಿಸಪಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಭಗತ್ ಸಿಂಗ್, ನಾರಾಯಣಗುರು ಪೆರಿಯಾರ್, ಸಾರಾ ಅಬೂಬಕರ್ ಅವರ ಕುರಿತಾದ ಪಾಠಗಳನ್ನು ತೆಗೆದು ಹಾಕಿ, ಆರ್ಎಸ್ಎಸ್ ಸಂಸ್ಥಾಪಕರಲ್ಲಿ ಒಬ್ಬರಾದ ಕೇಶವ ಹೆಡಗೆವಾರ್ ಅವರ ಭಾಷಣಗಳನ್ನು ಸೇರ್ಪಡೆಗೊಳಿಸುತ್ತಿರುವುದು ಸರಿಯಲ್ಲ ಎಂದು ಎಚ್ಚರಿಸಿದರು.
ಬಸವ ಅನುಯಾಯಿ ನಿವೃತ್ತ ಇಂಜಿನಿಯರ್ ಅಶೋಕ ಬರಗುಂಡಿ ಮಾತನಾಡಿ, 12ನೇ ಶತಮಾನದಲ್ಲಿ ಸಮ ಸಮಾಜ ನಿರ್ಮಾಣಕ್ಕೆ ಕಾರಣರಾದ ವಿಶ್ವಗುರು ಬಸವಣ್ಣನೇ ಈ ದೇಶದ ಲೋಕತಂತ್ರದ ದೇಗುಲ ಸಂಸತ್ತಿಗೆ ಅಡಿಪಾಯ ಹಾಕಿದ್ದಾರೆ ಎಂದು ಪ್ರಧಾನಿ ಮೋದಿ ಬಣ್ಣಿಸುತ್ತಾರೆ. ಮತ್ತೊಂದೆಡೆ ಅವರದ್ದೇ ಪಕ್ಷ ಆಡಳಿತದಲ್ಲಿರುವ ಕರ್ನಾಟಕದಲ್ಲಿ ಬಸವಣ್ಣನ ಅಧ್ಯಾಯವನ್ನೂ ಕೈಬಿಡುವ ದುಸ್ಸಾಹಸ ನಡೆದಿದೆ. ಈ ಮೂಲಕ ಜನಮಾನಸದಿಂದ ಶರಣರು, ಅವರ ವಚನಗಳನ್ನು ದೂರ ಮಾಡುವ ಪ್ರಯತ್ನ ನಡೆದಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಬಸವಣ್ಣ ಹಾಗೂ ಶರಣರ ವಚನಗನ್ನು ಪಠ್ಯದಿಂದ ಕೈಬಿಟ್ಟಲ್ಲಿ ರಾಜ್ಯಾದ್ಯಂತ ಹೋರಾಟ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ಕಾರ್ಯದರ್ಶಿ ಶೇಖಣ್ಣ ಕವಳಿಕಾಯಿ, ಮುತ್ತು ಬಿಳಿಯಲಿ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ
Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ