ತಿಂಗಳಿಗೊಮ್ಮೆ ಪ್ರತಿ ಗ್ರಾಮದಲ್ಲಿ ಆಧಾರ್‌ ಕ್ಯಾಂಪ್‌ ನಡೆಸಿ


Team Udayavani, Jul 22, 2019, 10:47 AM IST

gadaga-tdy-2

ರೋಣ: ಸವಡಿಯಲ್ಲಿ ನಡೆದ ತಾಲೂಕು ಮಟ್ಟದ ಜನಸ್ಪಂದನಾ ಸಭೆಯಲ್ಲಿ ತಹಶೀಲ್ದಾರ್‌ ಶರಣಮ್ಮ ಕಾರಿ ಅವರ ಎದುರು ಸಮಸ್ಯೆ ಹೇಳಿಕೊಂಡ ಗ್ರಾಮಸ್ಥರು.

ರೋಣ: ಸರ್ಕಾರದ ಯೋಜನೆ, ಶಿಕ್ಷಣ, ಬ್ಯಾಂಕ್‌ ವ್ಯವಹಾರ, ಉದ್ಯೋಗ ಸೇರಿದಂತೆ ಪ್ರತಿಯೊಂದು ಕೆಲಸಕ್ಕೂ ಆಧಾರ್‌ ಕಾರ್ಡ್‌ ಕಡ್ಡಾಯವಾಗಿದೆ. ಆಧಾರ್‌ಗಾಗಿ ಹೋಬಳಿ, ತಾಲೂಕು ಕೇಂದ್ರಕ್ಕೆ ತೆರಳಿ ಎರಡರಿಂದ ಮೂರು ದಿನ ಸರದಿ ನಿಲ್ಲಬೇಕಾಗುತ್ತದೆ. ಆದ್ದರಿಂದ ಕನಿಷ್ಠ ಪಕ್ಷ ತಿಂಗಳಿಗೊಮ್ಮೆ ಪ್ರತಿ ಗ್ರಾಮದಲ್ಲಿ ಆಧಾರ್‌ ಕ್ಯಾಂಪ್‌ ನಡೆಸಬೇಕು ಎಂದು ತಾಲೂಕಿನ ಸವಡಿ ಗ್ರಾಮದ ರೈತರು ಹಾಗೂ ಮುಖಂಡರು ಆಗ್ರಹಿಸಿದರು.

ತಾಲೂಕಿನ ಸವಡಿ ಗ್ರಾಪಂ ಆವರಣದಲ್ಲಿ ನಡೆದ ತಾಲೂಕು ಮಟ್ಟದ ಜನಸ್ಪಂದನಾ ಸಭೆಯಲ್ಲಿ ಆಗ್ರಹಿಸಿದ ಅವರು, ಪ್ರತಿಯೊಬ್ಬರಿಗೂ ಆಧಾರ್‌ ಅತಿ ಅವಶ್ಯವಾಗಿದೆ. ಆದ್ದರಿಂದ ಆಧಾರ್‌ ಕಾರ್ಡ್‌ ಹೊಂದಲು ಅಥವಾ ಆಧಾರ್‌ ಕಾರ್ಡ್‌ನಲ್ಲಿ ಹೆಸರು, ವಿಳಾಸ ತಿದ್ದುಪಡಿ ಅಥವಾ ಸೇರ್ಪಡೆ ಮಾಡಲು ತಾಲೂಕು ಕೇಂದ್ರದಲ್ಲಿ ತೆರೆಯಲಾದ ಆಧಾರ್‌ ಕೇಂದ್ರದಲ್ಲಿ ಎರಡರಿಂದ ಮೂರು ದಿನ ಉದ್ಯೋಗ ಬಿಟ್ಟು ಸರದಿ ನಿಲ್ಲಬೇಕು. ಜತೆಗೆ ಸಣ್ಣ ಸಣ್ಣ ಮಕ್ಕಳು, ವೃದ್ದರನ್ನು ಸರದಿಯಲ್ಲಿ ನಿಲ್ಲಿಸಬೇಕು. ಬೇರಡೆ ಹೋಗಿ ದಿನವಿಡಿ ನಿಂತು ಆಧಾರ್‌ ಪಡೆಯುವುದು ತೀವ್ರ ತೊಂದರೆಯಾಗುತ್ತಿದೆ. ಅಲ್ಲದೇ ಕೆಲ ಆಧಾರ್‌ ಕೇಂದ್ರದಲ್ಲಿ ಮಧ್ಯವರ್ತಿಗಳ ಹಾವಳಿಯಿದ್ದು, ಮಧ್ಯವರ್ತಿಗಳು ಕಾರ್ಡ್‌ವೊಂದಕ್ಕೆ 500ರಿಂದ 1000 ರೂ. ಪಡೆಯುತ್ತಿದ್ದಾರೆ. ಆದ್ದರಿಂದ ಜನತೆ ಪರದಾಟ ಮತ್ತು ತೊಂದರೆ ತಪ್ಪಿಸಲು

ಪ್ರತಿಯೊಂದು ಗ್ರಾಮದಲ್ಲಿ ಕನಿಷ್ಠ ಪಕ್ಷ ತಿಂಗಳಿಗೊಮ್ಮೆ ಆಧಾರ್‌ ಕ್ಯಾಂಪ್‌ ನಡೆಸಲು ತಾಲೂಕು ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಆಗ ತಹಶೀಲ್ದಾರ್‌ ಶರಣಮ್ಮ ಕಾರಿ ಮಾತನಾಡಿ, ಈಗಾಗಲೇ ರೋಣ, ಹೊಳೆಆಲೂರು, ಗಜೇಂದ್ರಗಡ, ನರೇಗಲ್ಲ, ಸೂಡಿ ಸೇರಿದಂತೆ 9 ಕಡೆಗಳಲ್ಲಿ ಆಧಾರ್‌ ಕೇಂದ್ರ ತೆರೆಯಲಾಗಿದೆ. ಯಾವದೇ ಕೇಂದ್ರದಲ್ಲಾದರೂ ಆಧಾರ್‌ ಪಡೆಯಲು ಅಥವಾ ತಿದ್ದುಪಡಿ ಮಾಡಿಸಲು ಅವಕಾಶವಿದೆ. ಆದ್ದರಿಂದ ಜನರು ಕೇವಲ ಒಂದೇ ಕೇಂದ್ರದಲ್ಲಿ ಸರದಿ ಸಾಲಲ್ಲಿ ನಿಲ್ಲುವುದು ಬೇಡ. ಆಧಾರ್‌ ಕ್ಯಾಂಪ್‌ ನಡೆಸುವ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಹೇಳಿದರು.

ಬೇರೆಡೆ ಗುಳೆ ಹೋಗದಂತೆ ತಡೆಯಲು ಸರ್ಕಾರ ಉದ್ಯೋಗ ಖಾತ್ರಿ ಯೋಜನೆ ಜಾರಿಗೆ ತಂದಿದೆ. ಈ ಮೂಲಕ ದುಡಿಯುವ ಕೈಗಳಿಗೆ ಕೆಲಸ ನೀಡಬೇಕು ಎಂಬ ನಿಯಮವಿದೆ. ಆದರೆ ಸವಡಿ ಗ್ರಾಮದಲ್ಲಿ ಈ ವರ್ಷ ಕೇವಲ 2 ದಿನ ಮಾತ್ರ ಕೆಲಸ ನೀಡಲಾಗಿದೆ. ಗ್ರಾಮದಲ್ಲಿ 11 ಸಾವಿರ ಎಕರೆ ಜಮೀನು, 7 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದೆ. ಆದರೆ ಸಮರ್ಪಕವಾಗಿ ಉದ್ಯೋಗ ನೀಡುವಲ್ಲಿ ಗ್ರಾಪಂ ಮುಂದಾಗಿಲ್ಲ ಎಂದು ಮೇಘರಾಜ ಬಾವಿ ಆರೋಪಿಸಿದರು. ಆಗ ಪಿಡಿಒ ಅನೀಲ ಬೇವಿನಮರದ ಮಾತನಾಡಿ, ಉದ್ಯೋಗ ಅರಸಿ ಬಂದವರಿಗೆ ಕೆಲಸ ನೀಡುತ್ತ ಬರಲಾಗಿದೆ. ಅಲ್ಲದೇ ಖಾತ್ರಿ ಯೋಜನೆಯಡಿ ಅನೇಕ ಕಾಮಗಾರಿ ಕೈಗೊಳ್ಳಲಾಗಿದೆ. ಈಗಲೂ ಯಾರಾದರೂ ಉದ್ಯೋಗ ಅರಸಿ ಬಂದಲ್ಲಿ ತಕ್ಷಣವೇ ಕೆಲಸ ನೀಡಲಾಗುವುದು ಎಂದು ಹೇಳಿದರು. ಗ್ರಾಮದ ಸುತ್ತ ಹಳ್ಳಗಳಿವೆ. ಪ್ರತಿಯೊಂದು ಹಳ್ಳಕ್ಕೂ ಚೆಕ್‌ ಡ್ಯಾಂ ನಿರ್ಮಿಸಬೇಕು. ಗ್ರಾಪಂ ಕಚೇರಿಯಲ್ಲಿಯೇ ಪಹಣಿ ಪತ್ರ ವಿತಸುವಂತೆ ಕ್ರಮ ಕೈಗೊಳ್ಳಬೇಕು. ಶಾಲಾ ಅವಧಿ ಪ್ರಾರಂಭ ಮತ್ತು ಬಿಡುವಿನ ವೇಳೆಯಲ್ಲಿ ಗ್ರಾಮಕ್ಕೆ ಸಾರಿಗೆ ಬಸ್‌ ಬಂದು ಹೋಗುವಂತೆ ಸರಿಯಾದ ಸಮಯ ನಿಗದಿ ಮಾಡಬೇಕು. ಶಾಲೆ ಆಗಮಿಸಿ ತೆರಳುವ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕು. ಸಕಾಲಕ್ಕೆ ರೇಷನ್‌ ಕಾರ್ಡ್‌ ವಿತರಿಸಬೇಕು. ಹೀಗೆ ವಿವಿಧ ರೀತಿಯ ಬೇಡಿಕೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.ಗ್ರಾಪಂ ಅಧ್ಯಕ್ಷೆ ಅಕ್ಕಮಹಾದೇವಿ ತಳವಾರ, ತಾಪಂ ಸದಸ್ಯ ಎಂ.ಎ. ತರಪದಾರ, ಉಪ ತಹಶೀಲ್ದಾರ್‌ ಎಸ್‌.ಎ. ನದಾಫ, ಕಂದಾಯ ನಿರೀಕ್ಷಕ ಜೆ.ಟಿ. ಕೊಪ್ಪದ, ಸಿಡಿಪಿಒ ನಾಗನಗೌಡ ಪಾಟೀಲ, ಪಿಡಿಒ ಅನೀಲ ಬೇವಿನಮರದ ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.