ಕೇಂದ್ರದ ವಿರುದ್ಧ ಕೈ ಬೃಹತ್‌ ಟ್ರ್ಯಾಕ್ಟರ್‌ ರ್ಯಾಲಿ

ರೈತ ವಿರೋಧಿ  ಕಾನೂನು ಹಿಂಪಡೆಯಲು ಆಗ್ರಹ ­ತೈಲ ಬೆಲೆ ಇಳಿಕೆಗೆ ಒತ್ತಾಯ

Team Udayavani, Feb 26, 2021, 4:15 PM IST

Congress Protest Gadag

ಗದಗ: ಮೂರು ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು. ತೈಲ ಬೆಲೆ ಇಳಿಸಬೇಕೆಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಜಿ.ಎಸ್‌.ಪಾಟೀಲ ಮತ್ತು ಸ್ಥಳೀಯ ಶಾಸಕ ಎಚ್‌.ಕೆ.ಪಾಟೀಲ ನೇತೃತ್ವದಲ್ಲಿ ಶಹರ ಕಾಂಗ್ರೆಸ್‌ ಹಾಗೂ ಮುಳಗುಂದ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ನಗರದಲ್ಲಿ ಬೃಹತ್‌ ಟ್ರ್ಯಾಕ್ಟರ್‌ ರ್ಯಾಲಿ ನಡೆಸಲಾಯಿತು.

ನಗರದ ಕಾಟಲ್‌ ಸೇಲ್‌ ಸೊಸೈಟಿ ಆವರಣದಲ್ಲಿರುವ ಜಿಲ್ಲಾ ಕಾಂಗ್ರೆಸ್‌ ಕಚೇರಿಯಿಂದ ಆರಂಭಗೊಂಡ ಟ್ರ್ಯಾಕ್ಟರ್‌ ರ್ಯಾಲಿ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಿಲ್ಲಾಡಳಿತ ಭವನದ ಬಳಿ ತೆರಳಿತು. ಬಳಿಕ ಜಿಲ್ಲಾ ಧಿಕಾರಿಗಳ ಮೂಲಕ ರಾಜ್ಯಪಾಲ ಹಾಗೂ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಮುಖಂಡರು, ದೇಶದ 62 ಕೋಟಿ ರೈತರು ತಮ್ಮ ಜೀವ ಮತ್ತು ಜೀವನಕ್ಕಾಗಿ ಕೃಷಿಯನ್ನೇ ಅವಲಂಬಿಸಿದ್ದಾರೆ. ತಮ್ಮ ಉಪಜೀವನದೊಂದಿಗೆ ದೇಶಕ್ಕೆ ಅನ್ನ ನೀಡುವ ಕೆಲಸ ಮಾಡುತ್ತಿದ್ದಾರೆ. ಆದರೆ, ಸುಗ್ರೀವಾಜ್ಞೆ ಮೂಲಕ ಕೇಂದ್ರ ಸರಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳು ರೈತರ ಪಾಲಿಗೆ ಮರಣ ಶಾಸನವಾಗಿವೆ. ಕರಾಳ ಶಾಸನಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಕಳೆದ 75 ದಿನಗಳಿಂದ ಲಕ್ಷಾಂತರ ರೈತರ ಹೋರಾಟ ನಡೆಸಿದ್ದಾರೆ ಎಂದರು.

ದೆಹಲಿಯ ಮೈಕೊರೆಯುವ ಚಳಿಯನ್ನೂ ಲೆಕ್ಕಸಿದೇ ತಿಂಗಳುಗಳಿಂದ ರೈತರು ಧರಣಿ ನಡೆಸುತ್ತಿದ್ದಾರೆ. ಉತ್ತರ ಭಾರತದಲ್ಲಿ ಮೈ ಕೊರೆಯುವ ಚಳಿ, ಅಕಾಲಿಕ ಮಳೆ ಮತ್ತು ಆಲಿಕಲ್ಲು ಮಳೆಯಿಂದಾಗಿ ಸುಮಾರು 155ಕ್ಕೂ ಹೆಚ್ಚು ರೈತರು ಮೃತಪಟ್ಟಿದ್ದಾರೆ. ಆದರೆ, ಅನ್ನದಾತರ ನೋವು, ಅಳಲು, ಕಷ್ಟ ಕಾರ್ಪಣ್ಯಗಳಿಗೆ ಕಿವುಡಾಗಿ ಕೇಂದ್ರ ಸರಕಾರ ರೈತ ಚಳವಳಿಗೆ ಹಲವಾರು ಅಡೆತಡೆಗಳನ್ನೊಡ್ಡಿ ದಾಷ್ಟÂì ಮೆರೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಮಧ್ಯೆ ಸರ್ವೋತ್ಛ ನ್ಯಾಯಾಲಯ ರೈತರ ಚಳವಳಿ ವಿಚಾರವನ್ನು ಕೈಗೆತ್ತಿಕೊಂಡು ಕರಾಳ ಕಾನೂನುಗಳಿಗೆ ತಡೆಯಾಜ್ಞೆ ನೀಡಿ, ವರದಿ ನೀಡಲು ಸಮಿತಿ ರಚಿಸಿದೆ. ಈ ಮೂಲಕ ಸರಕಾರದ ಹಠಮಾರಿ ಧೋರಣೆಗೆ ಛೀಮಾರಿ ಹಾಕಿದಂತಾಗಿದೆ. ಆದರೂ, ಕೇಂದ್ರ ಸರಕಾರ ಕರಾಳ ಕಾಯ್ದೆಗಳನ್ನು ರದ್ದುಗೊಳಿಸುತ್ತಿಲ್ಲ ಎಂದು ದೂರಿದರು.

ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ, ರೈತರ ಕೂಗು ಆಲಿಸಬೇಕು. ಮೂರು ರೈತ ವಿರೋಧಿ  ಕಾಯ್ದೆಗಳನ್ನು ಹಿಂಪಡೆಯಲಾಗಿದೆ ಎಂದು ತಕ್ಷಣವೇ ಪ್ರಧಾನಿ ಮೋದಿ ಅವರು ಘೋಷಿಸಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನದ ಮಾತು ಕಾರ್ಯಕ್ರಮದಲ್ಲಿ ಸಾರ್ವಜನಿಕವಾಗಿ ಈ ಮೂರು ಕರಾಳ ಕಾಯ್ದೆಗಳು ಸರಿಯಾಗಿಯೇ ಇವೆ ಎಂದು ಹೇಳಿದ್ದಕ್ಕೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಚಳವಳಿ ನಿರತ ರೈತರು ಭಯೋತ್ಪಾದಕರು ಎಂದಿರುವ ಹರ್ಯಾಣ ಮುಖ್ಯಮಂತ್ರಿ ಮನೋ ಹರ್‌ ಲಾಲ್‌ ಖಟ್ಟರ್‌ ಅವರೂ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು. ರೈತರ ವಿರುದ್ಧ ದಾಖಲಿಸಿರುವ 12000 ಮೊಕದ್ದಮೆಗಳನ್ನು ವಾಪಾಸ್‌ ತೆಗೆದುಕೊಳ್ಳಬೇಕು. ಜೊತೆಗೆ ಬೆಂಬಲ ಬೆಲೆಯನ್ನು ಕಡ್ಡಾಯವನ್ನಾಗಿಸಿ, ಅದರ ಉಲ್ಲಂಘನೆಯನ್ನು ಶಿಕ್ಷಾರ್ಹ ಅಪರಾಧವನ್ನಾಗಿ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಸುಮಾರು 500 ಕ್ಕೂ ಹೆಚ್ಚು ಟ್ರ್ಯಾಕ್ಟರ್‌ ಗಳೊಂದಿಗೆ ರೈತರು ಪಾಲ್ಗೊಂಡಿದ್ದರು.

ಡಿಸಿ ವಿರುದ್ಧ “ಕೈ’ ನಾಯಕರು ಗರಂ: ಕಾಂಗ್ರೆಸ್‌ ಟ್ರ್ಯಾಕ್ಟರ್‌ ರ್ಯಾಲಿಯ ಭಾಗವಾಗಿ ಮನವಿ ಸಲ್ಲಿಕೆಗೆ ತೆರಳಿದ್ದ ಪ್ರತಿಭಟನಾಕಾರರನ್ನು ಪ್ರವೇಶ ದ್ವಾರದಲ್ಲೇ ತಡೆದಿದ್ದು ಮತ್ತು ಜಿಲ್ಲಾ ಧಿಕಾರಿಗಳು ಊಟಕ್ಕೆ ತೆರಳಿದ್ದರಿಂದ ಕೆರಳಿದ ಕಾಂಗ್ರೆಸ್‌ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಟ್ರ್ಯಾಕ್ಟರ್‌ ರ್ಯಾಲಿ

ಜಿಲ್ಲಾಡಳಿತಕ್ಕೆ ತಲುಪುತ್ತಿದ್ದಂತೆ ಮೇನ್‌ ಗೇಟ್‌  ಬಳಿಯೇ ತಡೆದ ಪೊಲೀಸರು, ಜಿಲ್ಲಾಧಿಕಾರಿಗಳನ್ನು ಗೇಟ್‌ ಬಳಿಗೇ ಕರೆತರುತ್ತೇವೆ ಎಂದು ತಿಳಿಸಿದರು. ಅದಕ್ಕೆ ಒಪ್ಪದ ಕಾಂಗ್ರೆಸ್‌ ನಾಯಕರು, ಒಳಗೆ ತೆರಳಿ ಮನವಿ ಸಲ್ಲಿಸುವು ದಾಗಿ ಪಟ್ಟು ಹಿಡಿದರು. ಇದರಿಂದಾಗಿ ಗೇಟ್‌ ತೆರೆಯುತ್ತಿದ್ದಂತೆ ಶಾಸಕ ಎಚ್‌.ಕೆ.ಪಾಟೀಲ ಮತ್ತಿತರರು ಟ್ರ್ಯಾಕ್ಟರ್‌ಗಳನ್ನು ಒಳಗೆ ನುಗ್ಗಿಸಿ ದರು. ಬಳಿಕ ಮನವಿ ಸಲ್ಲಿಸಲು ತೆರಳು ವೇಳೆಗೆ ಜಿಲ್ಲಾ ಧಿಕಾರ ಎಂ.ಸುಂದರೇಶ ಬಾಬು ಮಧ್ಯಾಹ್ನ ಊಟದ ವಿರಾಮಕ್ಕೆ ತೆರಳಿದ್ದರು. ಇದರಿಂದ ತೀವ್ರ ಅಸಮಾಧಾನಗೊಂಡ ಕೈ ನಾಯಕರು ಡಿಸಿ‌ ಕಚೇರಿಯಲ್ಲಿ ಕಾದು ಕುಳಿತು, ಮನವಿ ಸಲ್ಲಿಸಿದರು. ಅಲ್ಲದೇ, ಜಿಲ್ಲಾ ಧಿಕಾರಿ ಗಳ ನಡೆಯನ್ನು ತೀವ್ರವಾಗಿ ಖಂಡಿಸಿದರು.

ಟ್ರ್ಯಾಕ್ಟರ್‌ ಓಡಿಸಿದ ಎಚ್ಕೆ: ರ್ಯಾಲಿಯಲ್ಲಿ ಮಹಾತ್ಮಗಾಂಧಿ  ವೃತ್ತದಿಂದ ಜಿಲ್ಲಾಡಳಿತ ಭವನದ ವರೆಗೆ ಶಾಸಕ ಎಚ್‌.ಕೆ.ಪಾಟೀಲ ರೈತರೊಂದಿಗೆ ಟ್ರ್ಯಾಕ್ಟರ್‌ ಚಲಾಯಿಸುವ ಮೂಲಕ ಗಮನ ಸೆಳೆದರು. ಸುಮಾರು 4 ಕಿ.ಮೀ. ದೂರದ ವರೆಗೆ ರೈತರ ಜೊತೆ ಜೊತೆಗೆ ಟ್ರ್ಯಾಕ್ಟರ್‌ ಓಡಿಸಿ ರ್ಯಾಲಿಗೆ ಬಲ ತುಂಬಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.