ಕಾಂಗ್ರೆಸ್ ಇನ್ನೂ 20 ವರ್ಷ ತಮ್ಮ ಅಂಗಿಗೂಟಕ್ಕೆ ತೂಗ ಹಾಕಬೇಕು: ಕಾರಜೋಳ
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಅಪಪ್ರಚಾರ
Team Udayavani, Jan 5, 2020, 6:19 PM IST
ಗದಗ: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ದಲಿತರು, ಅಲ್ಪಸಂಖ್ಯಾತರನ್ನು ಎತ್ತಿ ಕಟ್ಟಿ ತನ್ನ ಓಟ್ ಬ್ಯಾಂಕ್ ಭದ್ರಪಡಿಸಿಕೊಳ್ಳಲು ಯತ್ನಿಸುತ್ತಿದೆ. ಇಂತಹ ತಂತ್ರಗಳಿಗೆ ದೇಶದ ಪ್ರಜ್ಞಾವಂತ ಮತದಾರರು ಸೊಪ್ಪು ಹಾಕುವುದಿಲ್ಲ. ಆದರೂ, ಇದೇ ಧೋರಣೆ ಮುಂದುವರಿಸಿದರೆ ಕಾಂಗ್ರೆಸ್ ನಾಯಕರು ಮುಂದಿನ 20 ವರ್ಷ ತಮ್ಮ ಅಂಗಿ ಗೂಟಕ್ಕೆ ತೂಗ ಹಾಕಬೇಕಾಗುತ್ತದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.
ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಭದ್ರತೆ ಹಾಗೂ ಸಾರ್ವಜನಿಕರ ಹಿತಕ್ಕಾಗಿ ಕೇಂದ್ರ ಸರ್ಕಾರ ಪೌರತ್ವ ಕಾಯ್ದೆಗೆ ತಿದ್ದುಪಡಿ ತಂದಿದೆ. ಕೇಂದ್ರದ ನಡೆಗೆ ಎಲ್ಲೆಡೆ ಮೆಚ್ಚುಗೆಯೂ ವ್ಯಕ್ತವಾಗುತ್ತಿದೆ. ಆದರೆ, ಪ್ರತಿಪಕ್ಷ ಕಾಂಗ್ರೆಸ್ ಮಾತ್ರ ಪೌರತ್ವದ ಬಗ್ಗೆ ಸಾರ್ವಜನಿಕರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದೆ. ಆ ಮೂಲಕ ದಲಿತರು, ಅಲ್ಪಸಂಖ್ಯಾತರನ್ನು ಎತ್ತಿ ಕಟ್ಟಿ ಓಟ್ ಬ್ಯಾಂಕ್ ಭದ್ರಪಡಿಸಿಕೊಳ್ಳಲು ಯತ್ನಿಸುತ್ತಿದ್ದು, ಭಯದ ವಾತಾವರಣ ಮೂಡಿಸುತ್ತಿದೆ ಎಂದರು.
ಪಾಕಿಸ್ತಾನ ಹಾಗೂ ಇನ್ನಿತರೆ ರಾಷ್ಟ್ರಗಳು ಪೌರತ್ವ ಕಾಯ್ದೆ ಜಾರಿ ಮಾಡಿದರೆ ತಪ್ಪಿಲ್ಲ. ಅದನ್ನು ಭಾರತ ಜಾರಿಗೊಳಿಸಬಾರದು ಎಂಬುದು ಯಾವ ನ್ಯಾಯ? ಪೌರತ್ವ ತಿದ್ದಪಡಿ ಕಾಯ್ದೆಯಲ್ಲಿ ಯಾವುದೇ ನ್ಯೂನತೆ ಇಲ್ಲ. ಭಾರತದ ಅಲ್ಪಸಂಖ್ಯಾತರಿಗೆ ಯಾವುದೇ ರೀತಿಯಲ್ಲಿ ಸಮಸ್ಯೆ ಆಗುವುದಿಲ್ಲ. ಭಾರತ ಸ್ವತಂತ್ರವಾಗಿ 70 ವರ್ಷ ಕಳೆದರೂ ದಲಿತ, ಅಲ್ಪಸಂಖ್ಯಾತ ಹಾಗೂ ಶೋಷಿತ ಸಮುದಾಯಗಳು ನಿರೀಕ್ಷಿತ ಅಭಿವೃದ್ಧಿ ಕಂಡಿಲ್ಲ. ದೇಶದಲ್ಲಿ ಸು ದೀರ್ಘ ಆಡಳಿತ ನಡೆಸಿರುವ ಕಾಂಗ್ರೆಸ್ ಕೊಡುಗೆ ಏನು ಎಂಬುದು ಜನರಿಗೆ ಗೊತ್ತಿದೆ. ಹೀಗಾಗಿ ಕಾಂಗ್ರೆಸ್ ತಂತ್ರಗಾರಿಕೆಗೆ ದೇಶದ ವಿದ್ಯಾವಂತ ಹಾಗೂ ಪ್ರಬುದ್ಧ ನಾಗರಿಕರು ಸೊಪ್ಪು ಹಾಕುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ