ಸಣ್ಣ ನೀರಾವರಿ ಗಣತಿಗೆ ಸಹಕರಿಸಿ: ಕಂಬಾಳಿಮಠ
Team Udayavani, Oct 9, 2020, 5:14 PM IST
ಗಜೇಂದ್ರಗಡ: ಕೇಂದ್ರ ಜಲ ಸಂಪನ್ಮೂಲ ಇಲಾಖೆಯ ಸಣ್ಣ ನೀರಾವರಿ ಅಂಕಿ ಅಂಶಗಳ ಸಮನ್ವಯೀಕರಣ ಯೋಜನೆ ಅಡಿಯಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆಸಣ್ಣ ನೀರಾವರಿ ಗಣತಿ ಕೈಗೊಳ್ಳಲಾಗುತ್ತದೆ. ಈ ವರ್ಷದಲ್ಲಿ ನಡೆಯುವ ಆ ಗಣತಿಗೆ ಸಾರ್ವಜನಿಕರು,ರೈತರು ಸಹಕರಿಸಬೇಕು. ಜೊತೆಗೆ ಅಧಿ ಕಾರಿಗಳುಸಮರ್ಪಕ ಮಾಹಿತಿ ಕಲೆಹಾಕಬೇಕಿದೆ ಎಂದು ಜಿಲ್ಲಾಸಂಖ್ಯಾ ಸಂಗ್ರಹಣಾಧಿ ಕಾರಿ ಎ.ಎ. ಕಂಬಾಳಿಮಠ ಹೇಳಿದರು.
ಪುರಸಭೆ ಸಭಾ ಭವನದಲ್ಲಿ ಜಿಲ್ಲಾ ಸಣ್ಣ ನೀರಾವರಿ ಇಲಾಖೆಯಿಂದ ಗಜೇಂದ್ರಗಡ ತಾಲೂಕು ಗ್ರಾಮ ಲೆಕ್ಕಾಧಿಕಾರಿಗಳಿಗಾಗಿ ಗುರುವಾರ ನಡೆದ 6ನೇ ಸಣ್ಣನೀರಾವರಿ ಗಣತಿ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಈಗಾಗಲೇ ಜಗತ್ತಿನಲ್ಲಿಎರಡು ಮಹಾಯುದ್ಧಗಳು ನಡೆದಿವೆ. ಇನ್ನೇನಾದರೂ ಮೂರನೇ ಮಹಾಯುದ್ಧ ನಡೆದರೆ, ಅದು ಜಲಮೂಲಗಳಿಗಾಗಿಯೇ ನಡೆಯಬಹುದು. ಅಷ್ಟರಮಟ್ಟಿಗೆ ಜಲ ಮೂಲಗಳು ಕ್ಷೀಣಿಸುವ ಹಂತದಲ್ಲಿವೆ. ಇದನ್ನು ಸಂರಕ್ಷಣೆ ಮತ್ತು ಸದ್ವಿನಿಯೋಗ ಆಗುವಂತೆ ನೋಡಿಕೊಳ್ಳುವ ಉದ್ದೇಶದಿಂದ ಈ ಗಣತಿ ಮಾಡಲಾಗುತ್ತದೆ.
0-200 ಹೆಕ್ಟೇರ್ ಅಚ್ಚುಕಟ್ಟು ಎಲ್ಲ ನೀರಾವರಿ ಯೋಜನೆಗಳು ಸಣ್ಣ ನೀರಾವರಿ ಯೋಜನೆಗಳೆಂದು ಪರಿಗಣಿಸಿದ್ದು, ಅಂತರ್ಜಲ ಯೋಜನೆಗಳು ಹಾಗೂ ಮೇಲ್ಮೈ ಹರಿಯುವ ಜಲ ಯೋಜನೆಗಳು ಎಂದುವಿಧಗಳಾಗಿ ವರ್ಗೀಕರಿಸಲಾಗಿದೆ. ಅಂತರ್ಜಲ ಯೋಜನೆಗಳಡಿ ಅಗೆದ ಬಾವಿ, ಕೊಳವೆ ಬಾವಿಗಳು ನಮೂನೆ 1ರಲ್ಲಿ ಹಾಗೂ ಮೇಲ್ಮೈ ಹರಿಯುವ ಜಲ ಯೋಜನೆಗಳಡಿ ಏತ ನೀರಾವರಿ ಯೋಜನೆಗಳನ್ನು ನಮೂನೆ 2ರಲ್ಲಿ ಭರ್ತಿ ಮಾಡಿ ಗಣತಿ ಕಾರ್ಯ ಕೈಗೊಂಡು ಮಾಹಿತಿ ಸಂಗ್ರಹಿಸಬೇಕು ಎಂದು ಗ್ರಾಮ ಲೆಕ್ಕಾಧಿಕಾರಿಗಳಿಗೆ ತಿಳಿಸಿದರು.
ಸಹಾಯಕ ಸಾಂಕಿಕ ಅಧಿಕಾರಿ ಟಿ.ಎಸ್. ಬೆಳ್ಳಟ್ಟಿ ಮಾತನಾಡಿ, ಈ ಗಣತಿಯಿಂದ ಎಲ್ಲ ವಿಧದ ಸಣ್ಣ ನೀರಾವರಿ ಯೋಜನೆಗಳ ಸಮಗ್ರವಾದ ಮಾಹಿತಿ ಕ್ರೂಢೀಕರಿಸಲಾಗುತ್ತದೆ. ಗಣತಿದಾರರು, ಗ್ರಾಮ ಲೆಕ್ಕಾಧಿಕಾರಿಗಳು ರೈತರಿಂದ ಮಾಹಿತಿ ಪಡೆಯುವಜತೆಗೆ ಜಲಮೂಲಗಳ ಭೌತಿಕ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಬೇಕಿದೆ ಎಂದರು. ಶಿರಸ್ತೇದಾರ ವೀರಣ್ಣ ಅಡಗತ್ತಿ, ಗಣಪತಸಿಂಗ್, ಎಂ.ಜಿ. ಸಂತೋಷ, ಜಿ.ಬಿ. ಆನಂದಪ್ಪನವರ, ಶಬ್ಬೀರ್ ನಿಶಾನದಾರ, ಉಮೇಶ ಅರಳಿಗಿಡದ ಇತರರು ಪಾಲ್ಗೊಂಡಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು