ಮನುಷ್ಯನ ಹವ್ಯಾಸಗಳ ಮೇಲೆ ಹತೋಟಿ ಅಗತ್ಯ; ಕಲ್ಲಯ್ಯಜ್ಜನವರು
ನಿರಂತರವಾಗಿ ಮಾದರಿಯಾಗಿ ನಡೆಸಿಕೊಂಡು ಬಂದಿರುವುದು ಮಾದರಿ
Team Udayavani, Feb 23, 2023, 6:34 PM IST
ಹೊಳೆಆಲೂರ: ಭವಿಷ್ಯ ಬದಲಾಗಬೇಕಾದರೆ ಹವ್ಯಾಸದ ಮೇಲೆ ಹತೋಟಿ ಕಾಪಾಡಿಕೊಳ್ಳಬೇಕು. ಇಂದಿನ ಸಂಸ್ಕಾರ ರಹಿತ ಶಿಕ್ಷಣ ವ್ಯವಸ್ಥೆ ಹಾಗೂ ನೈತಿಕ ಮೌಲ್ಯಗಳ ಕುಸಿತದಿಂದ ಇಡೀ ಸಾಮಾಜಿಕ ವ್ಯವಸ್ಥೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ.ಹಾಗಾಗಿ, ಮನೆಯಲ್ಲಿ ಮಾತಾ-ಪಿತರು, ಶಾಲೆಯಲ್ಲಿ ಶಿಕ್ಷಕರು, ಸಮಾಜದಲ್ಲಿ ಧಾರ್ಮಿಕ ಸಾಧು, ಸಂತರು, ಗುರು, ಹಿರಿಯರು ಕೆಟ್ಟ ಮಾರ್ಗದಲ್ಲಿರುವವರನ್ನು ತಿದ್ದಿ ತೀಡಿ ಸುಸಂಸ್ಕೃತರನ್ನಾಗಿ ಮಾಡಿದಾಗ ಸರ್ವ ಸಮಾಜ ಸುಂದರವಾಗುತ್ತದೆ ಎಂದು ಗದಗ ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು ಹೇಳಿದರು.
ಬಿ.ಎಸ್.ಬೇಲೇರಿ ಗ್ರಾಮದ ಸುಖಮುನೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಜರುಗಿದ ಸುಖಮುನೇಶ್ವರ ಸ್ವಾಮಿಗಳ 62ನೇ ಪುಣ್ಯಸ್ಮರಣೋತ್ಸವ, ಶರಣಬಸವೇಶ್ವರರ ಪುರಾಣ ಮಂಗಲೋತ್ಸವ, ಗ್ರಾಮದ ಸುಮಂಗಲೆಯರಿಗೆ ಉಡಿ ತುಂಬುವ ಕಾರ್ಯಕ್ರಮದ ನಂತರ ಬೃಹತ್ ಧಾರ್ಮಿಕ ಸಮಾರಂಭದಲ್ಲಿ ಗ್ರಾಮಸ್ಥರಿಂದ ತಮ್ಮ 1984, 1985ನೇ ತುಲಾಭಾರ ಸ್ವೀಕರಿಸಿ ಮಾತನಾಡಿದರು.
ಮಕ್ಕಳು ಹಾಗೂ ಮಹಿಳೆಯರಿಗೆ ಇಂದು ಶಿಕ್ಷಣ ಹಾಗೂ ಸ್ವಾತಂತ್ರ್ಯಕ್ಕೆ ಕೊರತೆ ಇಲ್ಲ. ಆದರೆ, ಅದರ ಸದ್ಬಳಕೆ ಸಮಾಜಕ್ಕೆ ಆಗುತ್ತಿಲ್ಲ. ಸುಸಂಸ್ಕೃತ ವ್ಯಕ್ತಿ ಸಮಾಜ ಹಾಗೂ ದೇಶಕ್ಕೆ ಎಂದೂ ಹೊರೆಯಾಗಲಾರ. ಕಾರಣ ನೈತಿಕ ಮೌಲ್ಯಗಳನ್ನು ಶಿಕ್ಷಣ ನೀಡಿದರೆ, ಸಂಸ್ಕಾರ ಹೆತ್ತವರವರಿಂದ ಹರಿದು ಬರಬೇಕು ಎಂದು ಹೇಳಿದರು.
ಸಾನ್ನಿಧ್ಯ ವಹಿಸಿದ್ದ ನವಲಗುಂದ ಗವಿ ಮಠದ ಬಸವಲಿಂಗ ಸ್ವಾಮಿಗಳು ಗ್ರಾಮಸ್ಥರಿಂದ ಜೋಡಿ ತುಲಾಭಾರ ಸ್ವೀಕರಸಿ ಮಾತನಾಡಿ, ಸರ್ವಧರ್ಮ ಸಂಗಮವಾಗಿರುವ ಭಾರತೀಯರ ಸಾಮಾಜಿಕ, ರಾಜಕೀಯ ವ್ಯವಸ್ಥೆ ಸೇರಿದಂತೆ ಸಕಲ ಸಮಸ್ಯೆಗಳು ನಿವಾರಣೆಯಾಗಬೇಕಾದರೆ ಗುರುವಿನ ಪಾತ್ರ ಪ್ರಮುಖವಾದುದು. ಕಳೆದ 62 ವರ್ಷಗಳಿಂದ ಬಿ.ಎಸ್.ಬೇಲೇರಿ ಗ್ರಾಮಸ್ಥರು ಜಾತ್ಯತೀತ ಮನೋಭಾವದಿಂದ ಈ ಭಾಗದಲ್ಲಿ ಪುರಾಣ ಪ್ರವಚನದಂತಹ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಮಾದರಿಯಾಗಿ ನಡೆಸಿಕೊಂಡು ಬಂದಿರುವುದು ಮಾದರಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಸುಖಮುನೇಶ್ವರ ಭಜನಾ ಸಂಘದ ಬಸವಣ್ಣನಿಗೆ ಸಕ್ಕರೆ ಮತ್ತು ಬಾಳೆಹಣ್ಣಿನ ತುಲಾಭಾರ ಮಾಡಿ ಸಂಭ್ರಮಿಸಿದರು.
ಬೆದವಟ್ಟಿಯ ಸಂಗಮೇಶ್ವರ ಸ್ವಾಮಿಗಳು, ಹಾವೇರಿ ಹುಕ್ಕೇರಿ ಮಠದ ಸದಾಶಿವ ಸ್ವಾಮಿಗಳು, ಹುಬ್ಬಳ್ಳಿ ರುದ್ರಾಕ್ಷಿ ಮಠದ ಬಸವಲಿಂಗ ಸ್ವಾಮಿಗಳು, ರಾಮದುರ್ಗದ ಶಾಂತವೀರ ಸ್ವಾಮಿಗಳು, ಯಲಬುರ್ಗಾದ ಬಸವಲಿಂಗಸ್ವಾಮಿಗಳು, ರಾಯನಾಳದ ರೇವಣಸಿದ್ದ ಸ್ವಾಮಿಗಳು, ಗುಳೇದಗುಡ್ಡದ ಒಪ್ಪತ್ತೇಶ್ವರ ಸ್ವಾಮಿಗಳು, ಬೆನಹಾಳದ ಸದಾಶಿವ ಸ್ವಾಮಿಗಳು, ಭೈರನಹಟ್ಟಿಯ ಶಾಂತಲಿಂಗ ಸ್ವಾಮಿಗಳು, ಅಕ್ಕಿಆಲೂರಿನ ಶಿವಬಸವ ಸ್ವಾಮಿಗಳು, ಬದಾಮಿಯ ಶಿವಪೂಜಾ ಶಿವಾಚಾರ್ಯರರು, ಜಿಗೇರಿಯ ಗುರುಸಿದ್ಧ ಶಿವಾಚಾರ್ಯರರು, ಬಿಜೆಪಿ ಮುಖಂಡ ಉಮೇಶಗೌಡ ಪಾಟೀಲ, ನರಗುಂದ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಪ್ರವೀಣ ಯಾವಗಲ್ಲ, ಕೆಪಿಸಿಸಿ ಮಾಧ್ಯಮ ಸಂಯೋಜಕ ಡಾ|ಸಂಗಮೇಶ ಕೊಳ್ಳಿ, ಹೊಳೆಆಲೂರ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ದಶರಥ ಗಾಣಿಗೇರ, ತಾಪಂ ಮಾಜಿ ಅಧ್ಯಕ್ಷ ವೀರಯ್ಯ ಹಿರೇಮಠ, ಬಸವಂತಪ್ಪ ತಳವಾರ, ಗ್ರಾಮದ ಹಿರಿಯರು, ಸುಖಮುನೇಶ್ವರ ಭಜನಾ ಸಂಘದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…