ಕಲಿಗಳ ಭವಿಷ್ಯ ಬಹಿರಂಗಕ್ಕೆ ಕ್ಷಣಗಣನೆ


Team Udayavani, May 23, 2019, 10:08 AM IST

gadaga-tdy-1..

ಹಾವೇರಿ: ಬರೋಬರಿ ಒಂದು ತಿಂಗಳ ಕಾಲ ಮತಯಂತ್ರದಲ್ಲಿ ಭದ್ರವಾಗಿದ್ದ ಹಾವೇರಿ ಲೋಕ ಸಮರ ಕಲಿಗಳ ಭವಿಷ್ಯ ಬಹಿರಂಗಗೊಳ್ಳಲು ಕ್ಷಣಗಣನೆ ಶುರುವಾಗಿದೆ. ಗುರುವಾರ ಮಧ್ಯಾಹ್ನವೇ ಕ್ಷೇತ್ರದಲ್ಲಿ ವಿಜಯಮಾಲೆ ಯಾರ ಕೊರಳಿಗೆ ಎಂಬ ಕುತೂಹಲಕ್ಕೆ ತೆರೆಬೀಳಲಿದೆ.

ಕಣದಲ್ಲಿ 10 ಅಭ್ಯರ್ಥಿಗಳಿದ್ದು ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಡಿ.ಆರ್‌. ಪಾಟೀಲ ನಡುವೆ ನೇರ ಪೈಪೋಟಿ ಏರ್ಪಟ್ಟಿತ್ತು. ಈ ಪೈಪೋಟಿಯಲ್ಲಿ ಯಾರ ಕೈ ಮೇಲಾಗಲಿದೆ ಎಂಬುದು ಬಹಿರಂಗಗೊಳ್ಳುವ ಜತೆಗೆ ಇತರ ರಾಜಕೀಯ ಪಕ್ಷಗಳ ಬಲ, ಪಕ್ಷೇತರ ಅಭ್ಯರ್ಥಿಗಳ ಸಾಮರ್ಥ್ಯ ಪ್ರದರ್ಶನವೂ ಆಗಲಿದೆ.

ಕಳೆದ 2014ರ ಚುನಾವಣೆಯಲ್ಲಿ ನಡೆದಂತೆ ಈ ಬಾರಿಯೂ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. ಕಾಂಗ್ರೆಸ್‌ ಇದೇ ಮೊದಲ ಬಾರಿಗೆ ಕ್ಷೇತ್ರದಲ್ಲಿ ಮುಸ್ಲಿಮೇತರ ಅಭ್ಯರ್ಥಿಯಾಗಿ ಡಿ.ಆರ್‌. ಪಾಟೀಲ ಅವರನ್ನು ಕಣಕ್ಕಿಳಿಸಿತ್ತು. ಡಿ.ಆರ್‌. ಪಾಟೀಲ ಮೊದಲ ಜಯಕ್ಕಾಗಿ ಕಾಯುತ್ತಿದ್ದರೆ, ಬಿಜೆಪಿಯ ಶಿವಕುಮಾರ ಉದಾಸಿ ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

2014ರ ಚುನಾವಣೆಯಲ್ಲಿ ಒಟ್ಟು 19 ಅಭ್ಯರ್ಥಿಗಳು ಕಣದಲ್ಲಿದ್ದರು. ಶಿವಕುಮಾರ ಉದಾಸಿ (ಬಿಜೆಪಿ) 5,66,790 ಮತ ಗಳನ್ನು ಪಡೆದು, 87571 ಮತಗಳ ಅಂತರದಿಂದ ಉದಾಸಿ ಎರಡನೇ ಬಾರಿ ಆಯ್ಕೆಯಾಗಿದ್ದರು. ಸಲೀಂ ಅಹ್ಮದ್‌ (ಕಾಂಗ್ರೆಸ್‌) 4,79,219 ಮತ ಪಡೆದು ಪರಾಭವಗೊಂಡಿದ್ದರು. ಈ ಬಾರಿ ಕಣದಲ್ಲಿ 10 ಅಭ್ಯರ್ಥಿಗಳಿದ್ದು ಬಿಜೆಪಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿಗಳ ನಡುವೆಯೇ ಸೆಣಸಾಟ ನಡೆದಿತ್ತು. ಸೆಣಸಾಟದಲ್ಲಿ ಗೆದ್ದವರಾರು ಎಂಬ ಕೌತುಕಕ್ಕೆ ಗುರುವಾರ ಮಧ್ಯಾಹ್ನವೇ ತೆರೆಬೀಳಲಿದೆ.

ಈ ಬಾರಿಯ ಲೋಕಸಭೆ ಚುನಾವಣೆಯ ಮತದಾನ ಶೇ. 74.01ರಷ್ಟಾಗಿದೆ. ಕಳೆದ 2014ರ ಲೋಕಸಭಾ ಚುನಾವಣೆಯಲ್ಲಿ ಶೇ.71.59 ರಷ್ಟು ಮತದಾನವಾಗಿತ್ತು. ಕಳೆದ ಚುನಾವಣೆಗೆ ಹೊಲಿಸಿದರೆ ಈ ಬಾರಿ. ಶೇ. 2.42ರಷ್ಟು ಮತದಾನ ಹೆಚ್ಚಳವಾಗಿದ್ದು, ಮತದಾನ ಹೆಚ್ಚಳ ಯಾರಿಗೆ ಲಾಭ ತಂದುಕೊಟ್ಟಿತು ಎಂಬುದು ಸಹ ಇಂದು ಬಹಿರಂಗಗೊಳ್ಳಲಿದೆ.

ಶಾಸಕರ ಬಲ ಹೀಗಿತ್ತು: ಹಾವೇರಿ ಲೋಕಸಭೆ ಕ್ಷೇತ್ರ ಗದಗ ಹಾಗೂ ಹಾವೇರಿ ಜಿಲ್ಲೆಯ ಎಂಟು ವಿಧಾನಸಭೆ ಕ್ಷೇತ್ರಗಳನ್ನೊಳಗೊಂಡಿದೆ. ಹಾನಗಲ್ಲ, ಹಾವೇರಿ, ಬ್ಯಾಡಗಿ, ರೋಣ, ಶಿರಹಟ್ಟಿ ಹೀಗೆ ಐದು ಕಡೆ ಬಿಜೆಪಿ ಶಾಸಕರಿದ್ದು ಗದಗ ಹಾಗೂ ಹಿರೇಕೆರೂರ ಎರಡು ಕ್ಷೇತ್ರಗಳಲ್ಲಿ ಮಾತ್ರ ಕಾಂಗ್ರೆಸ್‌ ಶಾಸಕರಿದ್ದಾರೆ. ರಾಣಿಬೆನ್ನೂರಿನಲ್ಲಿ ಪಕ್ಷೇತರ ಶಾಸಕ ಆರ್‌. ಶಂಕರ್‌ ಇದ್ದಾರೆ. ಕಳೆದ ಬಾರಿ ಕ್ಷೇತ್ರದಲ್ಲಿ ಹಿರೇಕೆರೂರು ಹೊರತು ಪಡಿಸಿ (ಹಿರೇಕೆರೂರರಲ್ಲಿ ಬಿಜೆಪಿ ಶಾಸಕರಿದ್ದರು) ಕ್ಷೇತ್ರದ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಶಾಸಕರಿದ್ದರು. ಯಾವ ಕ್ಷೇತ್ರದಲ್ಲಿ ಯಾವ ಪಕ್ಷಕ್ಕೆ ಮುನ್ನಡೆಯಾಗಿದೆ ಎಂಬ ಕುತೂಹಲಕ್ಕೂ ಫಲಿತಾಂಶ ತೆರೆ ಎಳೆಯಲಿದೆ.

ಪ್ರಚಾರ ಪ್ರಭಾವ: ಕ್ಷೇತ್ರದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ಈ ಬಾರಿ ಸ್ಥಳೀಯ ವಿಚಾರಗಳಿಗಿಂತ ರಾಷ್ಟ್ರೀಯ ವಿಚಾರಗಳನ್ನೇ ತಮ್ಮ ಪ್ರಚಾರದ ಪ್ರಮುಖ ಅಸ್ತ್ರಗಳನ್ನಾಗಿಸಿಕೊಂಡಿದ್ದವು. ಮೋದಿ ಹಾಗೂ ರಾಹುಲ್ ಕುರಿತು ಟೀಕೆ, ಕೇಂದ್ರದಲ್ಲಿ ಆಡಳಿತದಲ್ಲಿದ್ದಾಗ ತಮ್ಮ ಪಕ್ಷದ ಸರ್ಕಾರಗಳು ಮಾಡಿದ ಸಾಧನೆ, ರಾಜಕೀಯ ಪಕ್ಷಗಳ ಮೇಲಿರುವ ರಾಷ್ಟ್ರೀಯ ಆಪಾದನೆಗಳೇ ಈ ಬಾರಿ ಪ್ರಚಾರದಲ್ಲಿ ಅಗ್ರಸ್ಥಾನ ಪಡೆದಿದ್ದವು. ಸರ್ಜಿಕಲ್ ಸ್ಟ್ರೈಕ್‌ ಕೂಡ ಸದ್ದು ಮಾಡಿತ್ತು. ಈ ಪ್ರಚಾರಾಸ್ತ್ರಗಳು ಮತದಾರರ ಮೇಲೆ ಯಾವ ರೀತಿಯ ಪರಿಣಾಮ ಬೀರಿರಬಹುದು ಎಂಬುದು ಸಹ ಫಲಿತಾಂಶದೊಂದಿಗೇ ಬಹಿರಂಗಗೊಳ್ಳಲಿದೆ.

ಕಲಿಗಳ ಪ್ರಭಾವ: ಚುನಾವಣೆ ಕಣದಲ್ಲಿರುವ ಎಲ್ಲ 10 ಅಭ್ಯರ್ಥಿಗಳಲ್ಲಿ ಕೂಲಿಕಾರ್ಮಿಕರೂ ಇದ್ದರು. ಉದ್ಯಮಿಗಳೂ ಇದ್ದರು. ಪ್ರಾಥಮಿಕ ಶಿಕ್ಷಣ ಓದಿದವರೂ ಇದ್ದರು. ಪದವೀಧರರೂ ಇದ್ದರು. ಅಷ್ಟೇಅಲ್ಲ ಸಾವಿರಾರು ರೂ. ಆಸ್ತಿ ಹೊಂದಿದವರು, ಕೋಟ್ಯಂತರ ರೂ. ಆಸ್ತಿ ಒಡೆಯರೂ ಇದ್ದರು. ಮಧ್ಯ ವಯಸ್ಕರೂ ಇದ್ದರೂ 70ವರ್ಷ ಮೀರಿದ ಹಿರಿಯರೂ ಇದ್ದರು. ಮತದಾರ ಪ್ರಭು ಅಭ್ಯರ್ಥಿಗಳಲ್ಲಿನ ಯಾವ ಅಂಶ ಆಧರಿಸಿ ಮತ ಹಾಕಿದ್ದಾನೆ ಎಂಬ ಕೌತುಕವನ್ನೂ ಫಲಿತಾಂಶ ತಣಿಸಲಿದೆ.

ಒಟ್ಟಾರೆ ಕ್ಷೇತ್ರದಲ್ಲಿ ಕುತೂಹಲ ಕೆರಳಿಸಿದ ಯಾರು ಗೆದ್ದರು? ಯಾರಿಗೆ ಯಾವ ಅಂಶ ಸಹಕಾರಿಯಾಯಿತು? ಯಾವ ಕ್ಷೇತ್ರದ ಮತದಾರರು ಯಾರ ಬೆಂಬಲಕ್ಕೆ ನಿಂತರು ಎಂಬ ಪ್ರಶ್ನೆಗಳಿಗೆ ಇಂದು ಬಹಿರಂಗಗೊಳ್ಳುವ ಫಲಿತಾಂಶವೇ ಉತ್ತರ ನೀಡಲಿದೆ.

•ಎಚ್.ಕೆ. ನಟರಾಜ

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.