ತಾಲೂಕಾ ವೈದ್ಯಾಧಿಕಾರಿಗೆ ಕೋವಿಡ್ ಸೋಂಕಿಗೆ ಬಲಿ
Team Udayavani, Sep 3, 2020, 1:57 AM IST
ಮುಂಡರಗಿ (ಗದಗ): ಕೋವಿಡ್ 19 ಸೋಂಕಿಗೆ ಒಳಗಾಗಿದ್ದ ತಾಲೂಕು ವೈದ್ಯಾಧಿಕಾರಿ ಡಾ| ಬಸವರಾಜ ಕೆ. (45) ಅವರು ಚಿಕಿತ್ಸೆ ಫಲಿಸದೇ ಬುಧವಾರ ನಿಧನರಾಗಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರರು, ತಂದೆ-ತಾಯಿ ಹಾಗೂ ಸಹೋದರರನ್ನು ಅಗಲಿದ್ದಾರೆ.
ಕಳೆದ ಕೆಲ ದಿನಗಳಿಂದ ಕೋವಿಡ್ 19 ಸೋಂಕಿನಿಂದ ನಿಂದ ಬಳಲುತ್ತಿದ್ದ ಡಾ| ಬಸವರಾಜ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಕಳೆದ ಮಾರ್ಚ್ ಮಾರ್ಚ್ನಿಂದ ತಾಲೂಕಿನಲ್ಲಿ ಕೋವಿಡ್ 19 ಸೋಂಕು ತಡೆಯುವಲ್ಲಿ ಅಪ್ಪಟ ಯೋಧರಂತೆ ಹಗಲಿರುಳು ಶ್ರಮಿಸಿದ್ದರು.
ತಾಲೂಕಿನಲ್ಲಿ ವೈದ್ಯಕೀಯ ಸಿಬ್ಬಂದಿಗಳ ಕೊರತೆ ಮಧ್ಯೆಯೂ ಸಾರ್ವಜನಿಕರಿಗೆ ಅತ್ಯತ್ತಮವಾಗಿ ವೈದ್ಯಕೀಯ ಸೇವೆ ಒದಗಿಸುತ್ತಿದ್ದರು.
ಈ ನಡುವೆ, ಆಗಸ್ಟ್ 2ರಂದು ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಡಾ| ಬಸವರಾಜ್ ಅವರಿಗೆ ಆ.9ರಂದು ಕೋವಿಡ್ ಸೋಂಕು ದೃಢ ಪಟ್ಟಿತ್ತು.
ಹುಬ್ಬಳ್ಳಿಯ ಕಿಮ್ಸ್ಗೆ ದಾಖಲಾಗಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ಆದರೆ, ಚಿಕಿತ್ಸೆ ಫಲಿಸದೇ, ಬುಧವಾರ ಸಂಜೆ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಡಾ|ಬಸವರಾಜ ಅವರು ಮೂಲತಃ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಯಡ್ರಾಮಿ ಗ್ರಾಮದವರಾಗಿದ್ದು, ಕೆಲ ವರ್ಷಗಳಿಂದ ಮುಂಡರಗಿ ತಾಲೂಕು ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ