ಹಣ್ಣು ಬೆಳೆಗಾರರಿಗೆ ಹುಣ್ಣಾಯ್ತು ಕೋವಿಡ್ 19


Team Udayavani, Mar 31, 2020, 5:48 PM IST

gadaga-tdy-1

ಗದಗ: ಬಯಲು ಸೀಮೆ ಗದಗ ಜಿಲ್ಲೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ತೋಟಗಾರಿಕೆ ಬೆಳೆಗಳನ್ನು ಹೆಚ್ಚು ಬೆಳೆಯಲಾಗುತ್ತಿದೆ. ಇಲ್ಲಿ ಬೆಳೆಯುವ ವಿವಿಧ ಹಣ್ಣುಗಳು ಅಂತಾರಾಷ್ಟ್ರೀಯ ಗುಣಮಟ್ಟ ಹೊಂದಿವೆ. ಆದರೆ ಇತ್ತೀಚೆಗೆ ಆವರಿಸಿರುವ ಕೋವಿಡ್ 19 ವೈರಸ್‌ ಕಾರ್ಮೋಡದಿಂದ ಸರಕು ಸಾಗಾಟ ಸ್ಥಗಿತಗೊಂಡ ಕಾರಣ ಜಿಲ್ಲೆಯ ತೋಗಾರಿಕಾ ಬೆಳೆಗಾರರು ಕಣ್ಣೀರಿಡುವಂತಾಗಿದೆ.

ಜಿಲ್ಲೆ ಬಹುತೇಕ ಮಳೆ ಆಶ್ರಿತ ಪ್ರದೇಶವಾಗಿದ್ದರೂ ತುಂಗಭದ್ರಾ ನದಿ, ಸಿಂಗಟಾಲೂರು ಏತ ನೀರಾವರಿ ಯೋಜನೆ ಹಾಗೂ ಕೊಳವೆಬಾವಿಯ ನೀರನ್ನು ಅವಲಂಬಿಸಿ ವಿವಿಧೆಡೆ ಹಣ್ಣು ಬೆಳೆಯಲಾಗುತ್ತಿದೆ. ಜಿಲ್ಲೆಯಲ್ಲಿ ಮಾವು, ಕಲ್ಲಂಗಡಿ, ಪೇರಲ, ದಾಳಿಂಬೆ, ದ್ರಾಕ್ಷಿ ಹಾಗೂ ಚಿಕ್ಕು ಬೆಳೆಯಲಾಗುತ್ತಿದೆ. ಕಲ್ಲಂಗಡಿಯನ್ನು ಜಿಲ್ಲೆಯ ರೋಣ ತಾಲೂಕಿನ ಬೆಣ್ಣೆಹಳ್ಳದುದ್ದಕ್ಕೆ ಹೆಚ್ಚು ಬೆಳೆಯಲಾಗುತ್ತದೆ. ಆ ಪೈಕಿ ಗದಗ ತಾಲೂಕಿನ ಹುಲಕೋಟಿ ಭಾಗದಲ್ಲಿ ಬೆಳೆಯಲಾಗುವ ವಿವಿಧ ತಳಿಯ ಮಾವು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆ ಹೊಂದಿದೆ. ಹೀಗಾಗಿ ಪ್ರತಿ ವರ್ಷ ಕೈತುಂಬ ಆದಾಯ ಪಡೆಯುತ್ತಿದ್ದ ಇಲ್ಲಿನ ರೈತರನ್ನು ಕೋವಿಡ್ 19  ಕಂಗಾಲಾಗಿಸಿದೆ.

ಬೇಡಿಕೆ ಕುಸಿತ: ಜಿಲ್ಲೆಯಲ್ಲಿ ಬೆಳೆಯಲಾಗುವ ಮಾವು, ಚಿಕ್ಕು, ದಾಳಿಂಬೆ ಹಣ್ಣುಗಳು ದುಬೈ, ಅಮೆರಿಕ, ಸಿಂಗಾಪುರ, ಶ್ರೀಲಂಕಾ, ಮಲೇಷಿಯಾಕ್ಕೆ ರಫ್ತಾಗುತ್ತವೆ. ಜಿಲ್ಲೆಯ ಬೆಳೆಗಳನ್ನು ಮುಂಬೈ ಮಾರುಕಟ್ಟೆ ಮೂಲಕ ವಿದೇಶಕ್ಕೆ ರಫ್ತು ಮಾಡಲಾಗುತ್ತದೆ. ಆದರೆ ಮಹಾಮಾರಿ ಕೊರೊನಾ ಸೃಷ್ಟಿಸಿರುವ ಆತಂಕದಿಂದ ವಿದೇಶಕ್ಕೆ ಹಣ್ಣುಗಳ ರಫ್ತು ಸ್ಥಗಿತಗೊಂಡಿವೆ. ಲಾಕ್‌ಡೌನ್‌ನಿಂದ ಸ್ಥಳೀಯ ಮಾರುಕಟ್ಟೆಯೂ ಬಾಗಿಲು ಮುಚ್ಚಿದ್ದರಿಂದ ಹಣ್ಣು ಬೆಳೆಗಾರರು ಲಕ್ಷಾಂತರ ರೂ. ನಷ್ಟ ಅನುಭವಿಸುವಂತಾಗಿದೆ.

ಕಾರ್ಮಿಕರು ಸಿಗದೇ ಕೊಳೆಯುತ್ತಿವೆ: ಒಂದೆಡೆ ಹಣ್ಣಿನ ಉತ್ಪನ್ನಗಳು ಅಗತ್ಯ ವಸ್ತುಗಳ ಪಟ್ಟಿಯಲ್ಲಿ ಬರುತ್ತವೆ. ಮತ್ತೂಂದೆಡೆಗೆ ಹಣ್ಣು, ತರಕಾರಿ ವಾಹನಗಳ ಸಾಗಾಟಕ್ಕೆ ಯಾವುದೇ ನಿರ್ಬಂಧವಿಲ್ಲ ಎನ್ನಲಾಗುತ್ತದೆ. ಆದರೆ ವಿವಿಧೆಡೆ ಕೊರೊನಾ ಸೋಂಕಿನ ಭೀತಿಯಿಂದಾಗಿ ತೋಟಗಳಲ್ಲಿ ಕೆಲಸಕ್ಕೆ ಕಾರ್ಮಿಕರೇ ಸಿಗುತ್ತಿಲ್ಲ. ಜೊತೆಗೆ ಜಿಲ್ಲಾವಾರು ಚೆಕ್‌ ಪೋಸ್ಟ್‌ಗಳಲ್ಲಿ ಎದುರಾಗುವ ಕಿರಿಕಿರಿಯಿಂದಾಗಿ ಹಣ್ಣುಗಳನ್ನು ಸಾಗಿಸಲು ಸರಕು ಸಾಗಾಣಿಕೆ ವಾಹನಗಳ ಮಾಲೀಕರು, ಚಾಲಕರೂ ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ವರ್ತಕರೂ ಹೊರತಾಗಿಲ್ಲ. ಆದರೆ ವರ್ಷವಿಡೀ ಬೆಳೆ ಕಾದು, ಆದಾಯ ನೀಡುವ ಸಮಯದಲ್ಲೇ ಕೋವಿಡ್ 19  ಭೀತಿ ಆವರಿಸಿದ್ದರಿಂದ ಹಣ್ಣಿನ ಬೆಳೆಗಳು ಬೇಡಿಕೆ ಕಳೆದುಕೊಂಡಿವೆ. ಬೆಳೆಗಾಗಿ ಮಾಡಿದ ಸಾಲ ತೀರಿಸುವುದು ಹೇಗೆ ಎಂಬುದು ರೈತರ ಅಳಲು.

ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳು ಬೇಡಿಕೆ ಇಲ್ಲದೇ, ನೆಲಕ್ಕಚ್ಚಿವೆ. ರೈತರನ್ನು ಸಂಕಷ್ಟದಿಂದ ಪಾರು ಮಾಡಲು ಸರಕಾರ ಮುಂದಾಗಬೇಕು. ಹಾಪ್‌ಕಾಮ್ಸ್‌ ಅಥವಾ ತೋಗಾರಿಕೆ ಇಲಾಖೆ ಮೂಲಕವೇ ಬೆಂಬಲ ಬೆಲೆ ಮಾದರಿಯಲ್ಲಿ ಹಣ್ಣಿನ ಉತ್ಪನ್ನಗಳನ್ನು ಖರೀದಿಸಬೇಕು. ಇದರಿಂದ ಮಧ್ಯ ವರ್ತಿಗಳ ಹಾವಳಿ ತಪ್ಪಿ, ರೈತರು, ಗ್ರಾಹಕರೊಂದಿಗೆ ಸರಕಾರಕ್ಕೂ ನೆರವಾಗುತ್ತದೆ.-ಕರಿಯಪ್ಪ ರವಳ್ಳೋಜಿ, ಹುಲಕೋಟಿ ರೈತ

ಹಣ್ಣು ಬೆಳೆಗಾರರ ಸಮಸ್ಯೆಯನ್ನು ಇಲಾಖೆ ಕಾರ್ಯದರ್ಶಿಗಳ ಗಮನಕ್ಕೆ ತಂದಿದ್ದೇವೆ. ಈ ಬಗ್ಗೆ ಅವರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರವೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು. -ಶಶಿಕಾಂತ ಕೋಟಿಮನಿ, ಉಪನಿರ್ದೇಶಕ, ತೋಟಗಾರಿಕೆ ಇಲಾಖೆ

 

-ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.