ಕೋವಿಡ್ ದಿಂದ ವಿಶ್ವವೇ ತಲ್ಲಣ: ಡಾ| ತೋಂಟದ ಶ್ರೀ
Team Udayavani, Dec 15, 2020, 3:56 PM IST
ಗದಗ: ಕೋವಿಡ್ ಮಾನವ ಸಂಕುಲಕ್ಕೆ ತೀವ್ರ ಹಾನಿಯನ್ನುಂಟು ಮಾಡಿದ್ದಲ್ಲದೇ, ಅನೇಕರು ಬಲಿಯಾಗಿದ್ದಾರೆ. ಕೊರೊನಾದಿಂದ ವಿಶ್ವವೇ ತಲ್ಲಣಿಸಿದೆ ಎಂದು ಡಾ| ತೋಂಟದ ಸಿದ್ಧರಾಮ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.
ಜಿಲ್ಲಾ ಗೃಹರಕ್ಷಕ ದಳ ಅಖೀಲ ಭಾರತ ಗೃಹರಕ್ಷಕ ದಿನಾಚರಣೆ ಅಂಗವಾಗಿ ಕೋವಿಡ್ ವೈರಸ್ ಹರಡುವಿಕೆ ತಡೆಗಟ್ಟಲು ಏರ್ಪಡಿಸಿದ್ದ ಜನಜಾಗೃತಿ ಅಭಿಯಾನಕ್ಕೆ ತೋಂಟದಾರ್ಯ ಮಠದ ಮುಂಭಾಗದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.
ಕೋವಿಡ್ ಸೋಂಕಿನಿಂದಾಗಿ ಭಯಭೀತಿಯಿಂದ ಜನರು ಕೆಲ ತಿಂಗಳುಗಳ ಕಾಲ ಮನೆಯಲ್ಲಿ ಖಾಲಿ ಕುಳಿತುಕೊಳ್ಳಬೇಕಾಯಿತು. ದುಡಿಮೆ ಇಲ್ಲದೆ ಜನಜೀವನ ಅನ್ನಕ್ಕಾಗಿ ಪರಿತಪಿಸುವಂತಾಯಿತು. ಸಣ್ಣ ಕೈಗಾರಿಕೆಗಳು ಸೇರಿದಂತೆ ಬೃಹತ್ ಉದ್ಯಮಗಳು ಕಾರ್ಖಾನೆ ಬಂದ್ ಮಾಡಿ ಉತ್ಪಾದನೆ ನಿಲ್ಲಿಸಿದವು. ಪರಿಣಾಮದೇಶ ಹಾಗೂ ವಿಶ್ವದ ಆರ್ಥಿಕ ಪರಿಸ್ಥಿತಿಯೇ ಅಲ್ಲೋಲ- ಕಲ್ಲೋಲವಾಯಿತು ಎಂದರು.
ಕೋವಿಡ್ ಸೋಂಕಿನ ತೀವ್ರತೆ ಕಡಿಮೆಯಾಗಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದರೂ, ಸೋಂಕು ಇನ್ನೂ ನಿವಾರಣೆಯಾಗಿಲ್ಲ. ಸಾರ್ವಜನಿಕರು ಮನೆಯಿಂದ ಹೊರಬರುವಾಗ ಮಾಸ್ಕ್, ಸ್ಯಾನಿಟೈಸರ್ ಬಳಸಬೇಕು. ಜನ ಸಂದಣಿಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಎಚ್ಚರಿಸಿದರು.
ಗೃಹರಕ್ಷಕರು ವಿಶ್ವಾಸಕ್ಕೆ ಹಾಗೂ ದಕ್ಷತೆಗೆ ಹೆಸರಾದವರು. ಕೋವಿಡ್ ಸೋಂಕು ಹಬ್ಬುತ್ತಿದ್ದಂತೆಯೇ ವಿಧಿ ಸಲಾದ ಲಾಕ್ ಡೌನ್ ಸಂದರ್ಭದಲ್ಲಿ ಸಾರ್ವಜನಿಕರನ್ನು ಜಾಗೃತರನ್ನಾಗಿಸುವ ಹಾಗೂ ಅವರನ್ನು ಜನದಟ್ಟಣೆಯಲ್ಲಿ ಪ್ರವೇಶಿಸದಂತೆ ನಿಯಂತ್ರಿಸುವಲ್ಲಿ ಮಾಡಿದ ಸೇವೆ ಸ್ಮರಣೀಯ ಎಂದು ಬಣ್ಣಿಸಿದರು. ಕೂಡಲಸಂಗಮ ಬಸವಪೀಠದ ಉಪಾಧ್ಯಕ್ಷ ಸದ್ಗುರು ಮಹದೇಶ್ವರ ಸ್ವಾಮೀಜಿ ಸಂದಭೋìಚಿತವಾಗಿ ಮಾತನಾಡಿ, ಇನ್ನೂ ಕೆಲವು ತಿಂಗಳು ಕಾಲ ಸಾರ್ವಜನಿಕರು ಸರ್ಕಾರ ವಿಧಿಸಿರುವ ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಕೊರೊನಾ ಸೋಂಕು ಸಂಪೂರ್ಣ ನಿವಾರಣೆಗೆ ಕೈಜೋಡಿಸುವಂತೆ ಸಲಹೆ ನೀಡಿದರು.
ಇದಕ್ಕೂ ಮುನ್ನ ತೋಂಟದಾರ್ಯ ಮಠದಿಂದ ಆರಂಭಗೊಂಡ ಜನಜಾಗೃತಿ ಅಭಿಯಾನ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಜಿಲ್ಲಾ ಗೃಹ ರಕ್ಷಕ ಕಾರ್ಯಾಲಯಕ್ಕೆ ಬಂದು ಮುಕ್ತಾಯಗೊಂಡಿತು. ಈ ವೇಳೆ ಗೃಹರಕ್ಷಕ ದಳದ ಜಿಲ್ಲಾ ಸಮಾಜೇಷ್ಠ ವಿಶ್ವನಾಥ ಯಳಮಲಿ, ಜಿಲ್ಲಾ ಗೃಹರಕ್ಷಕ ದಳದ ಹಿರಿಯ ಅಧಿಕಾರಿಗಳಾದ ಕೆ.ಸಿ. ವಕ್ಕಳದ, ಸುರೇಶ ದೊಡ್ಡಮನಿ ಇದ್ದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ಖ್ಯಾತ ಹಿಂದೂಸ್ತಾನಿ ಗಾಯಕ, ಪದ್ಮವಿಭೂಷಣ ಉಸ್ತಾದ್ ಗುಲಾಂ ಮುಸ್ತಾಫಾಖಾನ್ ವಿಧಿವಶ
ಭದ್ರಾವತಿ ಕಾರ್ಯಕ್ರಮದಲ್ಲಿ ಕನ್ನಡ ಭಾಷೆ ಕಡೆಗಣನೆ; ತೀವ್ರವಾಗಿ ಖಂಡಿಸುತ್ತೇನೆ ಎಂದ ಸಿದ್ದು
ವಿದೇಶದಲ್ಲಿ ಬಸವಣ್ಣನಿಂದ ಗೌರವ, ಕಾಲ್ಪನಿಕ ರಾಮನಿಂದಲ್ಲ: ಶ್ರೀ ನಿಜಗುಣಾನಂದ ಸ್ವಾಮೀಜಿ
ಕೋವಿಡ್ ವಾಸಿಯಾಗಬಲ್ಲ ಸೋಂಕು
ಬಂಟ್ವಾಳ: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯ ಮೇಲೆ ಪೊಲೀಸ್ ದಾಳಿ; ಆರೋಪಿಗಳು ವಶಕ್ಕೆ