ಮತ್ತೆ 195 ಜನರಿಗೆ ಸೋಂಕು
Team Udayavani, Sep 6, 2020, 3:25 PM IST
ಗದಗ: ಜಿಲ್ಲೆಯಲ್ಲಿ ಶನಿವಾರ ಹೊಸದಾಗಿ 195 ಜನರಿಗೆ ಕೋವಿಡ್ ಸೋಂಕು ಕಂಡುಬಂದಿದೆ. ಜೊತೆಗೆ 199 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 6303ಕ್ಕೆ ಏರಿಕೆಯಾಗಿದ್ದು, 4523 ಜನರು ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇನ್ನುಳಿದಂತೆ 1688 ಪ್ರಕರಣಗಳು ಸಕ್ರಿಯವಾಗಿದ್ದು, ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯ ಗದಗ-101, ಮುಂಡರಗಿ-27, ನರಗುಂದ-16, ರೋಣ-28, ಶಿರಹಟ್ಟಿ-10 ಹಾಗೂ ಹೊರ ಜಿಲ್ಲೆಯ 13 ಜನರಿಗೆ ಕೋವಿಡ್ ಸೋಂಕು ಖಚಿತವಾಗಿದೆ.
92 ಜನರು ಕೋವಿಡ್ಗೆ ಬಲಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್ನಿಂದ ಸಾಯುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಮತ್ತೆ ನಾಲ್ವರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದು, ಈ ವರೆಗೆ 92 ಜನರು ಕೋವಿಡ್ ಗೆ ಬಲಿಯಾದಂತಾಗಿದೆ. ಗದಗ ನಗರದ ಪುಟ್ಟರಾಜನಗರ ನಿವಾಸಿ 62 ವರ್ಷದ ವೃದ್ಧ(ಪಿ-315299)ನಿಗೆ ಆ.26 ರಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಹೃದಯ ಸಂಬಂಧಿತ ಕಾಯಿಲೆ, ನಿಮೋನಿಯಾಯಿಂದಾಗಿ ಸೆ.1 ರಂದು ಮೃತಪಟ್ಟಿದ್ದಾರೆ. ನರಗುಂದ ತಾಲೂಕಿನ ಜಗಾಪುರ ಗ್ರಾಮದ ನಿವಾಸಿ 72 ವರ್ಷದ ವೃದ್ಧ(ಪಿ-374865)ನಿಗೆ ಸೆ. 2ರಂದು ಕೋವಿಡ್ ಸೋಂಕು ಖಚಿತವಾಗಿದ್ದು, ಹೃದಯ ಸಂಬಂಧಿ ಕಾಯಿಲೆ, ನಿಮೋನಿಯಾ, ಮಧುಮೇಹದಿಂದ ಸೆ. 2ರಂದು ಕೊನೆಯುಸಿರೆಳೆದರು.
ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದ ನಿವಾಸಿ 62 ವರ್ಷದ ವೃದ್ಧ(ಪಿ-361429)ನಿಗೆ ಸೆ.1 ರಂದು ಸೋಂಕು ಪತ್ತೆಯಾಗಿದ್ದು, ನಿಮೋನಿಯಾ, ಶ್ವಾಸಕೋಶ ತೊಂದರೆಯಿಂದಾಗಿ ಸೆ. 2ರಂದು ಸಾವನ್ನಪ್ಪಿದ್ದಾರೆ. ಗದಗ ತಾಲೂಕಿನ ಕುರ್ತಕೋಟಿ ಗ್ರಾಮದ ನಿವಾಸಿ 24 ವರ್ಷದ ವ್ಯಕ್ತಿ(ಪಿ-347664)ಗೆ ಆ.30 ರಂದು ಸೋಂಕು ಕಂಡು ಬಂದಿದ್ದು, ಹೃದಯ ಸಂಬಂಧಿ ಕಾಯಿಲೆಯಿಂದಾಗಿ ಆ. 30ರಂದು ಕೋವಿಡ್-19 ಅಲ್ಲದ ಅನ್ಯ ಕಾರಣದಿಂದ ನಿಧನರಾದರು ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ
ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ
Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್
Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್