ಜಿಲ್ಲೆಯೆಲ್ಲೆಡೆ ಕೊರೊನಾ ಕರಿನೆರಳು


Team Udayavani, Mar 15, 2020, 3:36 PM IST

gadaga-tdy-1

ಗದಗ: ಕೊರೊನಾ ವೈರಸ್‌ ಆತಂಕದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರ ಒಂದು ವಾರ ಬಂದ್‌ ಘೋಷಿಸಿದ್ದು, ಜಿಲ್ಲೆಯಲ್ಲಿ ಶನಿವಾರದಿಂದಲೇ ಶಾಲಾ-ಕಾಲೇಜುಗಳು ಬಂದ್‌ ಆಗಿದ್ದವು. ಉಳಿದಂತೆ ವ್ಯಾಪಾರ-ವ್ಯವಹಾರ, ಸಾರಿಗೆ ಪ್ರಯಾಣ, ಎಲ್ಲೆಡೆ ಜನದಟ್ಟಣೆ ಎಂದಿನಿಗಿಂತ ಕಡಿಮೆಯಾಗಿತ್ತು.

ಗದಗ-ಬೆಟಗೇರಿ ಅವಳಿ ನಗರದಲ್ಲಿ ಶುಕ್ರವಾರ ಹೋಳಿ ಆಚರಿಸಿದ್ದರಿಂದ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಒಂದು ವಾರ ರಜೆ ಘೋಷಿಸಿರುವ ಬಗ್ಗೆ ಹೇಳದೇ ಇರುವುದರಿಂದ ಕೆಲ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಶನಿವಾರ ಬಂದು ಮನೆಗೆ ವಾಪಸ್ಸಾದರು. 1ರಿಂದ 7ನೇ ತರಗತಿ ವರೆಗೆ ಪರೀಕ್ಷೆ ಆರಂಭಿಸಿರುವ ಶಾಲೆಗಳಲ್ಲಿ ಪರೀಕ್ಷೆಯನ್ನು ಶುಕ್ರವಾರಕ್ಕೇ ಮೊಟಕುಗೊಳಿಸಿದ್ದಾರೆ. ಇನ್ನುಳಿದ ವಿಷಯಗಳ ಪರೀಕ್ಷೆಗಳ ದಿನಾಂಕಗಳನ್ನು ಮುಂದೂಡಿದ್ದಾರೆ ಎನ್ನಲಾಗಿದೆ.

ಪ್ರಯಾಣಿಕರ ಸಂಖ್ಯೆ ಇಳಿಮುಖ: ಕೊರೊನಾ ಭೀತಿ ಜಿಲ್ಲೆಯ ಜನರನ್ನು ಯಾವುದೇ ರೀತಿಯಲ್ಲಿ ಬಾಧಿಸುತ್ತಿಲ್ಲ. ಆದರೂ, ಮುಂಜಾಗ್ರತಾ ಕ್ರಮವಾಗಿ ಸರಕಾರ ಒಂದು ವಾರದ ರಜೆ ಘೋಷಿಸಿರುವುದು ಹಾಗೂ ಬಿರು ಬಿಸಿಲಿನಿಂದಾಗಿ ದಿನದಿಂದ ದಿನಕ್ಕೆ ಸಾರ್ವಜನಿಕರ ಸಂಚಾರ ಕಡಿಮೆಯಾಗುತ್ತಿದೆ. ಶನಿವಾರದಿಂದ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದರಿಂದ ಬೆಳಗ್ಗೆಯಿಂದಲೇ ಸಂಚಾರ ದಟ್ಟಣೆ ಕಡಿಮೆಯಾಗಿತ್ತು. ಗದಗ ಕೇಂದ್ರ ಬಸ್‌ ನಿಲ್ದಾಣದಿಂದ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆ ವರೆಗೆ ಗದಗ- ಹುಬ್ಬಳ್ಳಿ, ಗದಗ- ಹಾವೇರಿ, ಗದಗ- ಕೊಪ್ಪಳ ಮಾರ್ಗದಲ್ಲಿ ಕಾರ್ಯಾಚರಣೆ ನಡೆಸಿದ ಬಸ್‌ಗಳಲ್ಲಿ ಬಹುತೇಕ 25ಕ್ಕಿಂತ ಹೆಚ್ಚು ಪ್ರಯಾಣಿಕರಿರಲಿಲ್ಲ. ಇನ್ನು, ಗದಗದಿಂದ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಸಂಚರಿಸಿದ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಒಂದಂಕಿ ಮೀರಲಿಲ್ಲ. ಕೆಲ ಮಾರ್ಗಗಳಲ್ಲಿ ಬಸ್‌ ಗಳು ಖಾಲಿಯಾಗಿ ಸಂಚರಿಸಿವೆ ಎಂದು ಸಾರಿಗೆ ಇಲಾಖೆ ಮೂಲಗಳು ತಿಳಿಸಿವೆ. ಹೀಗಾಗಿ ಪ್ರಯಾಣಿಕರ ಕೊರತೆಯಿಂದಾಗಿ ನಗರದ ಕೇಂದ್ರ ಬಸ್‌ ನಿಲ್ದಾಣದಲ್ಲಿ ಭಾಗಶಃ ಬಣಗೊಡುತ್ತಿತ್ತು.

ಮಂಕಾದ ವ್ಯಾಪಾರ: ಕೊರೊನಾ ಭೀತಿ ಹಾಗೂ ಉರಿ ಬಿಸಿಲಿನಿಂದಾಗಿ ಬೆಳಗ್ಗೆ 11ರ ನಂತರ ಜನರು ಮನೆಯಿಂದ ಹೊರ ಬರಲು ಹಿಂದೇಟು ಹಾಕುತ್ತಿದ್ದಾರೆ. ಪರಿಣಾಮ ಅವಳಿ ನಗರದ ಮಾರುಕಟ್ಟೆ ಪ್ರದೇಶದಲ್ಲಿ ಜನಸಂದಣಿ ಸಾಮಾನ್ಯಕ್ಕಿಂತ ಕಡಿಮೆಯಾಗಿತ್ತು. ಇಲ್ಲಿನ ಪಂಚರಹೊಂಡ ಬಳಿ ಬೀದಿ ಬದಿ ಮಾರುಕಟ್ಟೆ ಯಲ್ಲಿ ಎಂದಿಗಿಂತ ಜನದಟ್ಟಣೆ ಕಡಿಮೆಯಾಗಿದ್ದರೆ, ಗ್ರೇನ್‌ ಮಾರುಕಟ್ಟೆ ಬಹುತೇಕ ಗ್ರಾಹಕರಿಲ್ಲದೇ ಬಣಬಣ ಎನ್ನುತ್ತಿತ್ತು. ಗ್ರಾಹಕರಿಲ್ಲದೇ ಅಂಗಡಿಕಾರರು ಕಾದು ಕೂರುವಂತಾಯಿತು. ಇನ್ನುಳಿದಂತೆ ಕಿರಾಣಿ, ಸಗಟು ವ್ಯಾಪಾರ ಹಾಗೂ ಸರಾಫ್‌ ಬಜಾರ್‌, ಬಟ್ಟೆ ಬಜಾರ್‌ ಪರಿಸ್ಥಿತಿ ಕೂಡಾ ಇದಕ್ಕಿಂತ ಭಿನ್ನವಾಗಿರಲಿಲ್ಲ. ಕರೊನಾ ಭೀತಿಯಿಂದಾಗಿ ಕಳೆದ 15 ದಿನಗಳಿಂದ ಮಾಂಸ ಉದ್ಯಮ ಬಹುತೇಕ ನೆಲಕಚ್ಚಿದೆ.

ಮಾಸ್ಕ್ ಗೆ ಹೆಚ್ಚಿದ ಬೇಡಿಕೆ: ಮುಂಜಾಗ್ರತಾ ಕ್ರಮ ಕೈಗೊಳ್ಳುವ ಭಾಗವಾಗಿ ಸಾರ್ವಜನಿಕರು ಮಾಸ್ಕ್ಗೆ ಮೋರೆ ಹೋಗಿದ್ದು, ಬೇಡಿಕೆ ಹೆಚ್ಚಿದೆ. ಆದರೆ, ಮಾರುಕಟ್ಟೆಯಲ್ಲಿ ಶನಿವಾರವೂ ಮಾಸ್ಕ್ಗಳು ಗ್ರಾಹಕರಿಗೆ ಸುಲಭವಾಗಿ ಸಿಗಲಿಲ್ಲ. ಹಲವು ಅಂಗಡಿಗಳಲ್ಲಿ ವಿಚಾರಿಸಿದರೂ, ದಾಸ್ತಾನು ಇಲ್ಲ. ಇನ್ನೂ ಒಂದೆರಡು ದಿನಗಳಲ್ಲಿ ಸ್ಟಾಕ್‌ ಬರಲಿದೆ ಎಂಬ ಉತ್ತರಗಳು ದೊರೆಯುತ್ತಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.