ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ಗೆ ಚಾಲನೆ
Team Udayavani, Aug 15, 2020, 3:18 PM IST
ಸಾಂದರ್ಭಿಕ ಚಿತ್ರ
ಲಕ್ಷ್ಮೇಶ್ವರ: ರೈತರು ಬೆಳೆವಿಮೆ, ಬೆಳೆನಷ್ಟ ಪರಿಹಾರ, ಬೆಳೆಸಾಲ, ಸಹಾಯಧನ ಸೇರಿ ಸರ್ಕಾರದಿಂದ ಸಿಗುವ ಸೌಲಭ್ಯ ಪಡೆಯಲು ರೈತರೇ ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳ ವಿವರವನ್ನು ಸ್ವಯಂ ದಾಖಲಿಸಿಕೊಳ್ಳುವ ಮೊಬೈಲ್ ಆ್ಯಪ್ ವ್ಯವಸ್ಥೆ ಮಾಡಿದೆ. ಆ. 24ರೊಳಗೆ ರೈತರು ಆ್ಯಂಡ್ರಾಯ್ಡ ಮೊಬೈಲ್ ಮೂಲಕ ಬೆಳೆ ದೃಢೀಕರಣ ಮಾಡಿಕೊಳ್ಳಬೇಕು ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.
ಅವರು ಶುಕ್ರವಾರ ರೈತರ ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್(2020-21) ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದರು. ಬಿಜೆಪಿ ಸರ್ಕಾರ ಬಡವರು, ಕೂಲಿಕಾರರು, ರೈತರು ಸೇರಿ ಎಲ್ಲ ವರ್ಗದ ಜನರಿಗೂ ಯೋಜನೆಗಳು ನೇರವಾಗಿ ತಲುಪಬೇಕು ಎಂಬ ದೃಢ ನಿಲುವು ತಾಳಿದೆ. ಈ ನಿಟ್ಟಿನಲ್ಲಿ ಅನೇಕ ಮಹತ್ತರ ಯೋಜನೆಗಳನ್ನು ಜಾರಿಗೊಳಿಸಿದ್ದು, ಜನರುಸೌಲಭ್ಯಕ್ಕಾಗಿ ಸರ್ಕಾರಿ ಕಚೇರಿಗೆ ಅಲೆಯುವುದು ತಪ್ಪಿದೆ. ಕೃಷಿಕರ ಏಳ್ಗೆಗಾಗಿ ಬೆಂಬಲ ಬೆಲೆ, ಬೆಳೆವಿಮೆ, ಕೃಷಿ ಸಮ್ಮಾನ ಸಹಾಯಧನದಂತಹ ಯೋಜನೆಗನ್ನು ಜಾರಿಗೊಳಿಸಿದೆ. ರೈತರೇ ತಮ್ಮ ಮೊಬೈಲ್ ಮೂಲಕ ಬೆಳೆಗಳ ವಿವರಣೆ ದಾಖಲಿಸುವುದರಿಂದ ಯಾರಿಗೂ ಕಾಯಬೇಕಾದ ಅವಶ್ಯಕತೆ ಇರುವುದಿಲ್ಲ. ತಪ್ಪು ಮಾಹಿತಿ ದಾಖಲಾಗುವುದಿಲ್ಲ. ಆದ್ದರಿಂದ ಸರ್ಕಾರ ರೈತರ ಅನುಕೂಲಕ್ಕಾಗಿ ನೀಡುವ ಸೌಲಭ್ಯ ಪಡೆಯಲು ತಪ್ಪದೇ ಎಲ್ಲರೂ ಬೆಳೆ ವಿವರ ದಾಖಲಿಸಬೇಕು. ಇದರಿಂದಾಗಿ ರೈತರು ಸೌಲಭ್ಯದಿಂದ ವಂಚಿತರಾಗುವುದು ತಪ್ಪುತ್ತದೆ ಎಂದು ಹೇಳಿದರು.
ಸಹಾಯಕ ಕೃಷಿ ನಿರ್ದೇಶಕ ಚಂದ್ರಶೇಖರ ನರಸಮ್ಮನವರ ಅವರು ಆ್ಯಪ್ ಕುರಿತು ಮಾಹಿತಿ ನೀಡಿದರು. ಶುಕ್ರವಾರ ಕುಂದ್ರಳ್ಳಿ, ಗೊಜನೂರ, ಅಕ್ಕಿಗುಂದ ಭಾಗದಲ್ಲಿ ರೈತರಿಗೆ ಮಾಹಿತಿ ನೀಡಲಾಯಿತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ