ಮಳೆಗೆ ಕೊಚ್ಚಿ ಹೋಯ್ತು ಬಯಲು ಸೀಮೆ ಬೆಳೆ


Team Udayavani, Oct 26, 2019, 12:56 PM IST

gadaga-tdy-1

ಗದಗ: ಸತತ ಬರಗಾಲದಿಂದ ಕಂಗೆಟ್ಟಿರುವ ರೈತರು ಈ ಬಾರಿ ಅಲ್ಪಸ್ವಲ್ಪ ಸುರಿದ ಮಳೆಯಲ್ಲೇ ಬೆಳೆದಿದ್ದ ಗೋವಿನ ಜೋಳ, ಶೇಂಗಾ ಸೇರಿದಂತೆ ವಿವಿಧ ಬೆಳೆಗಳು ಕಟಾವಿಗೆ ಬಂದಿದ್ದವು. ಇನ್ನೇನು ಹತ್ತು-ಹದಿನೈದು ದಿನಗಳಲ್ಲಿ ಕಟಾವು ಮಾಡಿ ಮಾರುಕಟ್ಟೆಗೆ ಸಾಗಿಸಬೇಕು, ಹಿಂದೆ ಮಾಡಿದ್ದ ಸಾಲ ತೀರಿಸಬೇಕು ಎಂಬ ಲೆಕ್ಕಾಚಾರದಲ್ಲಿದ್ದ ರೈತರಿಗೆ ಪ್ರಕೃತಿ ಮಾತೆ ಗಾಯದ ಮೇಲೆ ಬರೆ ಎಳೆದಿದ್ದಾಳೆ.

ಕಳೆದ ನಾಲೈದು ವರ್ಷಗಳಿಂದ ಮುಂಗಾರು-ಹಿಂಗಾರು ಮಳೆ ಕೈಕೊಟ್ಟಿದ್ದರಿಂದ ಜಿಲ್ಲೆಯ ರೈತರು ಸತತ ಬರಗಾಲದ ಕಹಿ ಉಂಡಿದ್ದಾರೆ. ಈ ಬಾರಿ ಮುಂಗಾರು ವಿಳಂಬವಾಗಿಯಾದರೂ ಚುರುಕುಗೊಂಡಿದ್ದರಿಂದ ತಕ್ಕಮಟ್ಟಿಗೆ ಇಳುವರಿ ಬರಲಿದೆ. ಅಲ್ಪಸ್ವಲ್ಪ ಹಿಂದಿನ ಸಾಲ ತೀರಲಿದೆ ಎಂದು ನಿರೀಕ್ಷಿಸಿದ್ದರು.

ಆದರೆ, ರೈತರ ಲೆಕ್ಕಾಚಾರ ಸಂಪೂರ್ಣ ತಲೆ ಕೆಳಗಾಗಿದೆ. ಕಳೆದ ಎರಡು ತಿಂಗಳಿಂದೆ ನರಗುಂದ, ರೋಣ ಭಾಗದಲ್ಲಿ ಮಲಪ್ರಭಾ ನದಿ, ಬೆಣ್ಣೆಹಳ್ಳ ಉಕ್ಕಿ ಹರಿದಿದ್ದರಿಂದ ನದಿ ಪಾತ್ರದ ಬಹುತೇಕ ಬೆಳೆಗಳು ಕೊಚ್ಚಿ ಹೋಗಿದ್ದವು. ಅದರಂತೆ ತುಂಗಭದ್ರೆಯೂ ಮೈದುಂಬಿ ಹರಿದಿದ್ದರಿಂದ ಶಿರಹಟ್ಟಿ ತಾಲೂಕಿನಲ್ಲಿ ನೆರೆ ಆವರಿಸಿ, ಅಪಾರ ಪ್ರಮಾಣದ ಬೆಳೆ ಹಾನಿಗೀಡಾಗಿದ್ದವು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ.

ರೈತರಿಗೆ ಅತಿವೃಷ್ಟಿ ಬಿಸಿ: ಕಳೆದ ಒಂದು ವಾರದಿಂದ ಜಿಲ್ಲೆಯಾದ್ಯಂತ ಮಳೆ ಅಬ್ಬರಿಸುತ್ತಿದ್ದರಿಂದ ಬಯಲು ಸೀಮೆಯ ಬೆಳೆಗಳೂ ನೆಲಕಚ್ಚಿವೆ. ನಿರೀಕ್ಷೆಗೂ ಮೀರಿ ಮಳೆಯಾಗಿದ್ದರಿಂದ ಹಲವು ಜಮೀನುಗಳಲ್ಲಿ ನೀರು ನಿಂತು ಕೆರೆಗಳಂತೆ ಗೋಚರಿಸುತ್ತಿದ್ದು, ಅಲ್ಲಲ್ಲಿ ಜಮೀನುಗಳ ಒಡ್ಡು ಹೊಡೆದಿವೆ. ಎಲ್ಲೆಡೆ ಕೃಷಿ ಹೊಂಡಗಳು ತುಂಬಿ ತುಳುಕುತ್ತಿವೆ. ಪರಿಣಾಮ ರೈತರು ಜಮೀನುಗಳಲ್ಲಿ ಸಾವಿರಾರು ರೂ. ಖರ್ಚು ಮಾಡಿ ಬೆಳೆದಿದ್ದ ಬೆಳೆಗಳೂ ನೀರಿನಲ್ಲಿ ತೇಲಾಡುತ್ತಿವೆ.

ಈ ಬಾರಿ ಮುಂಗಾರು ಮಳೆ ಕೊರತೆಯಿಂದಾಗಿ ಜಿಲ್ಲೆಯಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಪ್ರಮಾಣದಲ್ಲಿ ಬಿತ್ತನೆಯಾಗಿತ್ತು. ಆ ಪೈಕಿ ಪ್ರಮುಖ ಬೆಳೆಗಳಾದ ಶೇಂಗಾ, ಹತ್ತಿ, ಗೋವಿನಜೋಳ ತಲಾ 20 ಸಾವಿರ ಹೆಕ್ಟೇರ್‌, 3- 5 ಸಾವಿರ ಹೆಕ್ಟೇರ್‌ನಷ್ಟು ಸಜ್ಜೆ, ಸೂರ್ಯಕಾಂತಿ ಮತ್ತಿತರೆ ಬೆಳೆಗಳನ್ನು ಬಿತ್ತನೆ ಆಗಿತ್ತು. ಅದರಲ್ಲಿ ಕೆಲವರು ವಿಳಂಬವಾಗಿ ಬಿತ್ತನೆ ಮಾಡಿದ್ದರಿಂದ ಕಟಾವಿಗೆ ಇನ್ನೂ 10-15 ದಿನಗಳು ಕಾಯಬೇಕಿತ್ತು ಎನ್ನುತ್ತಾರೆ ರೈತರು.

ಈ ನಡುವೆ ಕಳೆದ ಸೆಪ್ಟೆಂಬರ್‌ 1ರಿಂದ ಮಳೆ ಚುರುಕುಗೊಂಡಿತ್ತು. ಅಕ್ಟೋಬರ್‌ 19ರ ನಂತರ ಜೋರಾಗಿತ್ತು. ದಿನದಿಂದ ದಿನಕ್ಕೆ ಧಾರಾಕಾರ ವರ್ಷಧಾರೆಯಾಗುತ್ತಿದ್ದು, ಬೆಳೆದು ನಿಂತಿದ್ದ ಎಲ್ಲ ಬೆಳೆಗಳು ಹಾನಿಗೀಡಾಗಿವೆ. ಜಿಲ್ಲೆಯಲ್ಲಿ ಸುರಿದ ಬಿರುಸಿನ ಮಳೆಯಿಂದಾಗಿ ಜಿಲ್ಲೆಯ ಐದೂ ತಾಲೂಕಿನಲ್ಲಿ ಬೆಳೆಯುವ ಮೆಕ್ಕೆಜೋಳ ನೆಲಕ್ಕಚ್ಚಿದೆ. ಅಲ್ಲದೇ, ಮಳೆ ತಡವಾಗಿದ್ದರಿಂದ ಬಿತ್ತನೆಯೂ ವಿಳಂಬ ಮಾಡಿದವರ ಬೆಳೆಗಳು ಹೂ ಬಿಟ್ಟು, ಕಾಯಿ ಕಟ್ಟುವ ಮೊದಲೇ ಕಣ್ಣೆದುರೇ ಕೊಳೆಯ ತೊಡಗಿದ್ದು, ರೈತರು ಕಣ್ಣೀರುಡುವಂತಾಗಿದೆ.

 

-ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.