ಹೆಸರು ಬೆಳೆಗೆ ಹಳದಿ ನಂಜಾನು ರೋಗ
ಹಚ್ಚ ಹಸಿರಿನಿಂದ ಕಂಗೊಳಿಸಬೇಕಿದ್ದ ಬೆಳೆ ಸಂಪೂರ್ಣ ನಾಶವಾಗುವ ಆತಂಕ-ಅನ್ನದಾತರಿಗೆ ಸಂಕಷ್ಟ
Team Udayavani, Jun 29, 2022, 4:07 PM IST
ಗಜೇಂದ್ರಗಡ: ಪಟ್ಟಣ ಸೇರಿದಂತೆ ಸುತ್ತಲಿನ ಪ್ರದೇಶಗಳಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ಹೆಸರು ಬೆಳೆಗೆ ಹಳದಿ ನಂಜಾನು ರೋಗ ಕಾಣಿಸಿಕೊಂಡಿದ್ದು, ರೈತರನ್ನು ಚಿಂತೆಗೀಡು ಮಾಡಿದೆ.
ಮುಂಗಾರು ಹಂಗಾಮಿನ ಮಳೆಗಳು ಉತ್ತಮವಾಗಿ ಸುರಿಯುತ್ತಿರುವ ಪರಿಣಾಮ ಈ ಬಾರಿ ಉತ್ತಮ ಫಸಲು ಬರುತ್ತದೆಂಬ ಹಿಗ್ಗಿನಲ್ಲಿ ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದರು. ಆದರೆ, ಬೆಳೆದು ನಿಂತಿರುವ ಹೆಸರು ಬೆಳೆಗೆ ಹಳದಿ ರೋಗ ಕಾಣಿಸಿಕೊಂಡಿರುವುದು ರೈತರನ್ನು ಚಿಂತೆಗೀಡು ಮಾಡಿದಂತಾಗಿದೆ.
ನಿರಂತರ ಬರಗಾಲಕ್ಕೆ ತುತ್ತಾಗಿರುವ ತಾಲೂಕಿನಲ್ಲಿ ಕಳೆದ ಎರಡು-ಮೂರು ವರ್ಷಗಳಿಂದ ಮುಂಗಾರು ಅಷ್ಟಕಷ್ಟೇ ಸುರಿದಿದೆ. ಆದರೆ ಈ ಬಾರಿ ಮೇ ತಿಂಗಳಲ್ಲಿಯೇ ಬಿತ್ತನೆ ಮಾಡಿ ಹುಲುಸಾಗಿ ಬೆಳೆದ ಹೆಸರು ಬೆಳೆಗೆ ತೇವಾಂಶ ಹೆಚ್ಚಾದ ಹಿನ್ನೆಲೆಯಲ್ಲಿ ಬೆಳೆಗೆ ಹಳದಿ ರೋಗ ಶುರುವಾಗಿದೆ. ಆದರೂ, ರೈತರು ಭೂ ತಾಯಿಯನ್ನು ನಂಬಿ ಕೃಷಿ ಕಾರ್ಯದಲ್ಲಿ ತೊಡಗುತ್ತಿದ್ದಾರೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಬೆಳೆಯ ಕುರಿತು ಸೂಕ್ತ ಮಾರ್ಗದರ್ಶನ ಮಾಡಬೇಕಾದ ಅವಶ್ಯಕತೆ ಇದೆ.
ಹಳದಿ ರೋಗಕ್ಕೆ ತುತ್ತಾದ ಹೆಸರು: ಪ್ರತಿ ವರ್ಷ ತೊಂದರೆಗೆ ಸಿಲುಕಿ ಸಾಲದ ಕೂಪಕ್ಕೆ ಒಳಗಾಗುತ್ತಿದ್ದ ರೈತ ಸಮೂಹಕ್ಕೆ ಈ ಬಾರಿ ನಿರೀಕ್ಷೆಗೂ ಮೀರಿ ಫಸಲು ಬರುವ ಆಶಾಭಾವನೆಯನ್ನು ಹೊಂದಿದ್ದಾರೆ. ಆದರೆ ಫಸಲು ಬರುವ ಮುನ್ನವೇ ಬೆಳೆಗೆ ಹಳದಿ ರೋಗ ಕಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬೆಳೆ ಹಸಿ ಇರುವಾಗಲೇ ಹಳದಿ ರೋಗ ಹರಡಿದ್ದು, ಹಚ್ಚ ಹಸಿರಿನಿಂದ ಕಂಗೊಳಿಸಬೇಕಿದ್ದ ಬೆಳೆ ಹಳದಿ ಬಣ್ಣಕ್ಕೆ ತಿರುಗಿರುವುದು ಸಂಪೂರ್ಣ ಬೆಳೆ ನಾಶಕ್ಕೆ ಕಾರಣವಾಗುತ್ತಿದೆ.
ಈ ಬಾರಿ ಮುಂಗಾರು ಹುಮ್ಮಸ್ಸಿನಿಂದ ಸಾವಿರಾರು ರೂಪಾಯಿ ಖರ್ಚು ಮಾಡಿ ಹೆಸರು ಬಿತ್ತನೆ ಮಾಡಿದ್ದ ರೈತರಿಗೆ ಹಳದಿ ರೋಗ ಕಾಡುತ್ತಿದೆ. ಹೀಗಾಗಿ, ಮತ್ತೆ ಸಂಕಷ್ಟಕ್ಕೆ ಸಿಲುಕುವ ಆತಂಕ ಅನ್ನದಾತರದ್ದಾಗಿದೆ.
ತಾಲೂಕಿನಲ್ಲಿ ಹೆಸರು ಬೆಳೆ ಮುಂಗಾರು ಹಂಗಾಮಿನ ಪ್ರಮುಖ ಬೆಳೆಯಾಗಿದೆ. ಆದರೆ ಈಗ ಬಿಳಿ ನೊಣದಿಂದಾಗಿ ಹಳದಿ ರೋಗಬಾಧೆ ಗಿಡದಿಂದ ಗಿಡಕ್ಕೆ ಹರಡುತ್ತಿದೆ. ಇದನ್ನು ನಿಯಂತ್ರಣ ಮಾಡಲು ಹೊಲದಲ್ಲಿ ಪ್ರಾರಂಭ ಹಂತದಲ್ಲಿ ಕಂಡುಬರುವ ಗಿಡಗಳನ್ನು ಕಿತ್ತು ನಾಶಪಡಿಸಬೇಕು. ರೋಗದ ತೀವ್ರತೆ ಅಧಿ ಕವಿದ್ದಲ್ಲಿ ಕೀಟನಾಶಕಗಳ ಸಿಂಪಡಣೆಯಿಂದ ಬಿಳಿ ನೊಣ ಹತೋಟಿ ಮಾಡಬಹುದು. –ರವೀಂದ್ರ ಪಾಟೀಲ, ತಾಲೂಕು ಸಹಾಯಕ ಕೃಷಿ ಅಧಿಕಾರಿ
-ಡಿ.ಜಿ. ಮೋಮಿನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ