ತರಕಾರಿ ಖರೀದಿಗೆ ಜನಜಂಗುಳಿ


Team Udayavani, Apr 5, 2020, 2:49 PM IST

ತರಕಾರಿ ಖರೀದಿಗೆ ಜನಜಂಗುಳಿ

ಗದಗ: ಲಾಕ್‌ಡೌನ್‌ ಘೋಷಣೆಯಾಗಿ 11ನೇ ದಿನವಾದ ಶನಿವಾರವೂ ನಗರ ಸೇರಿದಂತೆ ಜಿಲ್ಲೆ ಬಹುತೇಕ ಸ್ತಬ್ಧವಾಗಿತ್ತು.ಕಳೆದ ಮೂರು ದಿನಗಳಿಂದ ನಿರಂತರವಾಗಿ ನಗರದಲ್ಲಿ ಜಿಲ್ಲಾ ನ್ಯಾಯಾಧಿಧೀಶರು ಪರ್ಯಟನೆ ನಡೆಸುತ್ತಿದ್ದಾರೆ. ಆದರೂ ಎಪಿಎಂಸಿಯಲ್ಲಿ ತರಕಾರಿ, ಸಗಟು ಖರೀದಿ ವೇಳೆ ಜನಜಂಗುಳಿ ತಪ್ಪಿಲ್ಲ.

ಜಿಲ್ಲೆಯಲ್ಲಿ ಲಾಕ್‌ಡೌನ್‌ ಜಾರಿಗೊಂಡಾಗಿನಿಂದ ವಾಹನಗಳ ಸಂಚಾರ ತಡೆ ಹಾಗೂ ದಿನಸಿ, ತರಕಾರಿ ಖರೀದಿಯಲ್ಲಿ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮಾಡಲು ಪೊಲೀಸರು ಪ್ರತಿನಿತ್ಯ ಹರಸಾಹಸ ನಡೆಸುತ್ತಿದ್ದರು. ಈ ನಡುವೆ ಬೈಕ್‌ಗಳನ್ನು ವಶಕ್ಕೆ ಪಡೆದು ಅನಗತ್ಯ ಸಂಚಾರಕ್ಕೆ ಕಡಿವಾಣ ಹಾಕಿದ್ದರೂ, ತರಕಾರಿ ಹಾಗೂ ದಿನಸಿ ಖರೀದಿಯಲ್ಲಿ ಸಾಮಾಜಿಕ ಅಂತರ ಕಂಡು ಬರಲಿಲ್ಲ.

ಇದೇ ವೇಳೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾ ಧೀಶರಾದ ಜಿ.ಎಸ್‌. ಸಂಗ್ರೇಶಿ ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್‌.ಜಿ. ಸಲಗೆರೆ ಅವರು ಮಾರುಕಟ್ಟೆಗೆ ಭೇಟಿ ನೀಡಲಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಜನರನ್ನು ಚದುರಿಸಿದರು. ಬಳಿಕ ಸ್ಥಳಕ್ಕೆ ಬಂದ ನ್ಯಾಯಾಧಿಧೀಶರು, ಮಾರುಕಟ್ಟೆಯಲ್ಲಿ ಸೇರಿದ್ದ ಜನರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕೋವಿಡ್ 19 ದಿಂದ ಮುಕ್ತರಾಗಬೇಕು ಎಂದು ತಿಳಿ ಹೇಳಿದರು.

ಮೇವು ವಿತರಣೆ: ಕರ್ನಾಟಕ ಪ್ರಜಾಪರ ವೇದಿಕೆ ಹಾಗೂ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಸೇವಾ ಸಂಘದ ಕಾರ್ಯಕರ್ತರು ಅವಳಿ ನಗರದ ವಿವಿಧೆಡೆ ಇರುವ ಬಿಡಾಡಿ ದನಗಳಿಗೆ ಮೇವಿನ ವ್ಯವಸ್ಥೆ ಮಾಡುವ ಮೂಲಕ ಮಾನವೀಯತೆ ಮೆರೆದರು. ಸಂಘದ ಪದಾ ಧಿಕಾರಿಗಳು ಒಂದು ಟಿಪ್ಪರ್‌ ಒಣ ಮೇವನ್ನು ಪಂಚಾಕ್ಷರಿ ನಗರ, ಕುರಹಟ್ಟಿ ಪೇಟೆ, ಶಹಪುರ ಪೇಟೆ,ಬೆಟಗೇರಿ ಬಸ್‌ ನಿಲ್ದಾಣ, ಡಿ.ಸಿ. ಮಿಲ್‌, ಖಾನತೋಟ, ಸೇರಿದಂತೆ ಮುಳಗುಂದ ದೋಬಿಘಾಟ್‌ ಸಮೀಪದ ವೆಂಕಟೇಶ್ವರ ಪ್ರೌಢಶಾಲೆ ಬಳಿ ನಿಂತಿದ್ದ ಜಾನುವಾರುಗಳಿಗೆ ಹಾಕಿದರು.

ಉಚಿತ ಹಾಲು ವಿತರಣೆ: ಕಾರ್ಮಿಕ, ಪಶು ಸಂಗೋಪನೆ ಇಲಾಖೆಗಳ ಹಾಗೂ ಧಾರವಾಡದ ಕರ್ನಾಟಕ ಹಾಲು ಒಕ್ಕೂಟ ಮಂಡಳಿ ರಾಜ್ಯ ಸರ್ಕಾರದ ನಿರ್ದೇಶನದಂತೆ ಇಲ್ಲಿನ ಬಾಪೂಜಿ ನಗರದ ಬಡ ಕುಟುಂಬಗಳಿಗೆ ತಲಾ ಅರ್ಧ ಲೀಟರ್‌ ಹಾಲು ವಿತರಿಸಲಾಯಿತು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಬಡಾವಣೆಯ ಮನೆ ಮನೆಗೆ ತೆರಳಿ ಹಾಲು ವಿತರಿಸಿದರು. ನಗರಸಭೆ ಪೌರಾಯುಕ್ತ ಮನ್ಸೂರ ಅಲಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ, ಪಶುಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಜಟ್ಟೆಣ್ಣವರ, ಕೆ.ಎಂ. ಎಫ್‌ ಅಧಿ ಕಾರಿ ನೋಡಲ್‌ ಅಧಿಕಾರಿ ಜಿ. ಯಲ್ಲಪ್ಪ ಇದ್ದರು.

ಫಾಗಿಂಗ್‌: ನಗರಸಭೆ ಮಾಜಿ ಸದಸ್ಯ ಎಂ.ಸಿ. ಶೇಖ್‌ ನೇತೃತ್ವದಲ್ಲಿ ವಾರ್ಡ್‌ ನಂ. 33ರ ವ್ಯಾಪ್ತಿಯ ಬಾಪೂಜಿ ನಗರ, ಹುಬ್ಬಳ್ಳಿ ರಸ್ತೆಯ ವಿವಿಧ ಬಡಾವಣೆಗಳಲ್ಲಿ ಕೊರೊನಾ ವೈರಸ್‌ ಹಾಗೂ ಸೊಳ್ಳೆಗಳು ಹರಡದಂತೆ ಫಾಗಿಂಗ್‌ ನಡೆಸಲಾಯಿತು.

ಟಾಪ್ ನ್ಯೂಸ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.