ಅಲ್ಪಸಂಖ್ಯಾತರ ರಕ್ಷಣೆ ಹಿಂದೆಯೂ ಮಾಡಿದ್ದೇವೆ,ಇನ್ನೂ ಮಾಡುತ್ತೇವೆ:ಹಿಜಾಬ್ ವಿಚಾರಕ್ಕೆ ಡಿಕೆಶಿ
Team Udayavani, Feb 13, 2022, 2:48 PM IST
ಗದಗ: ಸಂವಿಧಾನ ನಮ್ಮ ಧರ್ಮ. ಹಾಗೂ ರಾಷ್ಟ್ರ ಧ್ವಜ ನಮ್ಮ ಧರ್ಮ. ಹಿಜಾಬ್ ವಿಚಾರದಲ್ಲಿ ಎಲ್ಲರಿಗೂ ಮಾತನಾಡಬೇಡಿ ಎಂದು ಹೇಳಿದ್ದೆವು, ಆದ್ರೆ ನಾನು ಮಾತನಾಡುತ್ತೇನೆ. ಅಲ್ಪಸಂಖ್ಯಾತರನ್ನು ನಾವು ಮೊದಲಿನಿಂದಲೂ ರಕ್ಷಣೆ ಮಾಡಿಕೊಂಡು ಬಂದಿದ್ದೆವೆ. ಇವತ್ತೂ ಮಾಡುತ್ತೇವೆ, ಮುಂದೆಯೂ ರಕ್ಷಣೆ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.
ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಗಮನದಲ್ಲಿಟ್ಟುಕೊಂಡು ಮೇಕೆದಾಟು ಹೋರಾಟ ಮಾಡಿಲ್ಲ. ಬಿಜೆಪಿಯವರು ನುಡಿದಂತೆ ನಡೆಯುತ್ತಿಲ್ಲಾ. ಮೇಕೆದಾಟು ಹೋರಾಟ ತಡೆಯಲು ಏನೆಲ್ಲಾ ತೊಂದರೆ ಮಾಡಿದ್ದರು. ಕೋರ್ಟ್ ಹೋದರು, ಹೋರಾಟ ನಿಲ್ಲಿಸಲು ಪ್ರಯತ್ನ ಮಾಡಿದರು. ಸದ್ಯದಲ್ಲಿ ಮೇಕೆದಾಟು ಹೋರಾಟ ಆರಂಭ ಮಾಡುತ್ತೇವೆ. ಶಾಸಕಾಂಗ ಸಭೆಯನ್ನು ಕರೆದು ಆದಷ್ಟು ಬೇಗ ಹೋರಾಟ ಆರಂಭ ಮಾಡುತ್ತೇವೆ ಎಂದರು.
ಇದನ್ನೂ ಓದಿ:ಪಕ್ಷಕ್ಕೆ ಯಾರೂ ಮುಖ್ಯವಲ್ಲ, ನಮಗೆ ಪಕ್ಷ ಮುಖ್ಯವಾಗಿದೆ: ಸಾ.ರಾ.ಮಹೇಶ್
ಉತ್ತರ ಕರ್ನಾಟಕ, ಹಾಗೂ ಕಲ್ಯಾಣ ಕರ್ನಾಟಕದಲ್ಲಿ ಅನೇಕ ಸಮಸ್ಯೆ ಇವೆ. ನಾವು ಯಾವುದೇ ಕಾರ್ಯಕ್ರಮ ಮಾಡಬಾರದು ಎನ್ನುವುದು ಸರ್ಕಾರದ ಉದ್ದೇಶ. ಅದನ್ನು ಗಮನದಲ್ಲಿಟ್ಟುಕೊಂಡು ಯೋಜನೆ ಮಾಡುತ್ತೇವೆ. ಜಾತ್ರೆ ಉತ್ಸವಕ್ಕೆ ಅವಕಾಶ ನೀಡಿದ್ದಾರೆ, ಆದರೆ ರಾಜಕೀಯಕ್ಕೆ ಅವಕಾಶ ನೀಡಿಲ್ಲಾ. ನಾವು ಜನರ ಧ್ವನಿಯಾಗಿ ಕೆಲಸ ಮಾಡುತ್ತೇವೆ ಎಂದು ಡಿಕೆಶಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ