ಡಿಎಪಿ ಗೊಬ್ಬರ ಪಡೆಯಲು ಸುಸ್ತು

ಬಿತ್ತನೆ ಕಾರ್ಯಕ್ಕೆ ರೈತರ ಹಿಂದೇಟು |"ದಾಸ್ತಾನು ಖಾಲಿ' ಉತ್ತರಕ್ಕೆ ಅನ್ನದಾತ ಕಂಗಾಲು

Team Udayavani, Jun 10, 2021, 6:23 PM IST

9 lxr 5.b

ಲಕ್ಷ್ಮೇಶ್ವರ: ಕಳೆದ 10-12 ದಿನಗಳಿಂದ ಲಕ್ಷ್ಮೇಶ್ವರ ತಾಲೂಕಿನಲ್ಲಿ ರೈತರು ಡಿಎಪಿ ಗೊಬ್ಬರಕ್ಕಾಗಿ ಅಲೆದಾಡುತ್ತಿದ್ದರೂ ಗೊಬ್ಬರ ಸಿಗದೇ ಪರದಾಡುವಂತಾಗಿದೆ.

ಮುಂಗಾರು ಮಳೆ ಉತ್ತಮವಾಗಿ ಸುರಿಯುತ್ತಿದ್ದು, ರೈತರು ಬಿತ್ತನೆ ಕಾರ್ಯಕ್ಕೆ ಮುಂದಾಗಿದ್ದಾರೆ. ಆದರೆ ಡಿಎಪಿ ಗೊಬ್ಬರ ಸಿಗದೇ ಇರುವುದರಿಂದ ರೈತರಲ್ಲಿ ಅಸಮಾಧಾನ-ಆತಂಕ ಮನೆಮಾಡಿದೆ. ಶೇ.46 ಪಾಸ್ಪರಸ್‌ ಪೋಷಕಾಂಶವಿರುವ ಡಿಎಪಿ ಎಲ್ಲ ಬೆಳೆಗೆ ಸೂಕ್ತ ಎಂಬ ನಂಬಿಕೆ ರೈತರದ್ದು. ಸಬ್ಸಿಡಿಯಿಂದಾಗಿ ಡಿಎಪಿ ಗೊಬ್ಬರದ ಬೆಲೆ ಚೀಲವೊಂದಕ್ಕೆ 1700 ರೂ. ಬದಲಾಗಿ 1200 ರೂ.ಗೆ ಇಳಿದಿದೆ. ಉಳಿದಂತೆ ಕಾಂಪ್ಲೆಕ್ಸ್‌ ಗೊಬ್ಬರದ ಬೆಲೆ ಡಿಎಪಿಗಿಂತಲೂ ಹೆಚ್ಚಿದೆ. ಈ ಕಾರಣದಿಂದ ಗೊಬ್ಬರಕ್ಕೆ ಅಲೆದರೆ ಅಂಗಡಿಗಳಲ್ಲಿ ಡಿಎಪಿ ಗೊಬ್ಬರ ಇಲ್ಲವೆಂಬ ಫಲಕ ಹಾಕಿರುವುದು ರೈತರನ್ನು ಚಿತೆಗೀಡು ಮಾಡಿದೆ.

ಡಿಎಪಿ ದಾಸ್ತಾನು ಖಾಲಿ: ಲಕ್ಷ್ಮೇಶ್ವರ, ಶಿರಹಟ್ಟಿ ತಾಲೂಕಿನ ಎಲ್ಲ ರಸಗೊಬ್ಬರ ಮಾರಾಟ ಅಂಗಡಿಗಳಲ್ಲಿ ಯಾವುದೇ ಕಂಪನಿಯ ಡಿಎಪಿ ಗೊಬ್ಬರ ದಾಸ್ತಾನು ಇಲ್ಲ. ಇಲಾಖೆ ಮಾಹಿತಿ ಪ್ರಕಾರ ಇದುವರೆಗೂ ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕಿನ ನಡುವೆ 518 ಟನ್‌ ಡಿಎಪಿ ಗೊಬ್ಬರ ಬಂದಿದ್ದು, ಎಲ್ಲವೂ ಮಾರಾಟವಾಗಿದೆ.

ಕೊರೊನಾ ಭೀತಿ ಲೆಕ್ಕಿಸದೇ ಗೊಬ್ಬರ ಕೇಳಿ ಬರುವ ರೈತರಿಗೆ ಮಾರಾಟಗಾರರಿಂದ ಡಿಎಪಿ ಬಂದಿಲ್ಲ ನಾಳೆ ಬರಬಹುದು ಎಂಬ ಸಿದ್ಧ ಉತ್ತರ ರೈತರ ಅಸಮಾಧಾನಕ್ಕೆ ಕಾರಣವಾಗಿದೆ.

ತಾಲೂಕಿನ ರೈತರಿಗೆ ಅನ್ಯಾಯ: ಸರ್ಕಾರ ರಸಗೊಬ್ಬರವನ್ನು ಆಯಾ ಜಿಲ್ಲೆಯ ಕೃಷಿ ಕ್ಷೇತ್ರಕ್ಕನುಗುಣವಾಗಿ ವಿತರಿಸುತ್ತದೆ. ಆದರೆ ನೆರೆಯ ಧಾರವಾಡ, ಹಾವೇರಿ ಜಿಲ್ಲೆಯ ರೈತರು ತಾಲೂಕಿನ ಪಾಲಿನ ಶೇ.60 ಗೊಬ್ಬರ ಖರೀದಿಸಿದ್ದಾರೆ. ಈ ನೀತಿಯಿಂದ ಲಕ್ಷ್ಮೇಶ್ವರ ಮತ್ತು ಶಿರಹಟ್ಟಿ ತಾಲೂಕಿನ ರೈತರಿಗೆ ಡಿಎಪಿ ಗೊಬ್ಬರ ಸಿಗದೇ ಮುಂಗಾರು ಬಿತ್ತನೆಗೆ ಪೆಟ್ಟು ಬಿದ್ದಂತಾಗಿದೆ.

ರಸಗೊಬ್ಬರ ಮಾರಾಟ, ವಿತರಣೆಯಲ್ಲಿ ರೈತರನ್ನು ಜಿಲ್ಲಾ ತಾಲೂಕುವಾರು ವಿಭಜಿಸುವುದು ಬೇಡ.ಬೇಡಿಕೆಗೆ ತಕ್ಕಷ್ಟು ರಸಗೊಬ್ಬರ ಪೂರೈಸಬೇಕೆನ್ನುವುದು ರೈತರ ನಿಲುವು.

ಟಾಪ್ ನ್ಯೂಸ್

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.