ಆರೋಗ್ಯ ಕಾಳಜಿಗೆ ಪೊಲೀಸರಿಗೆ ಡಿಸಿ ಸಲಹೆ
ಬೇರೆ ಇಲಾಖೆಯವರಿಗೆ ಕುಟುಂಬಕ್ಕೆ ಹಾಗೂ ಆರೋಗ್ಯ ಕಡೆಗೆ ಗಮನ ಕೊಡಲು ಸಮಯವಿರುತ್ತದೆ.
Team Udayavani, Nov 30, 2021, 5:55 PM IST
ಗದಗ: ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆಗಾಗಿ ಹಗಲಿರುಳು ಶ್ರಮಿಸುವ, ಸದಾ ಒತ್ತಡದಲ್ಲಿ ಕೆಲಸ ಮಾಡುವ ಪೊಲೀಸರು ತಮ್ಮ ಆರೋಗ್ಯದ ಬಗ್ಗೆಯೂ ಹೆಚ್ಚಿನ ಗಮನ ಹರಿಸಬೇಕು. ಪ್ರತಿನಿತ್ಯ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಉತ್ತಮ ಆರೋಗ್ಯ ಹೊಂದಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶಬಾಬು ಹೇಳಿದರು.
ಜಿಲ್ಲಾ ಪೊಲೀಸ್ ಇಲಾಖೆಯಿಂದ ಇಲ್ಲಿನ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಇತರೆ ಇಲಾಖೆಯ ಸಿಬ್ಬಂದಿ ಸರ್ಕಾರದ ಸೇವೆಯನ್ನು ಮಾಡುತ್ತಾರೆ. ಆದರೆ ಜನರಿಗೆ ಅತೀ ಹೆಚ್ಚು ಹತ್ತಿರದಿಂದ ಹಾಗೂ ಜನರಿಗೆ ನಿರಂತರವಾಗಿ ಸ್ಪಂದಿಸುವುದು ಪೊಲೀಸ್ ಇಲಾಖೆ ಮಾತ್ರ. ಅದರಲ್ಲೂ ಸತತ ಎರಡು ವರ್ಷದಿಂದ ಕಾಡುತ್ತಿರುವ ಮಹಾಮಾರಿ ಕೋವಿಡ್ ನಿರ್ವಹಣೆಯಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿ ಅತ್ಯಂತ ಹೆಚ್ಚಿನ ರಿಸ್ಕ್ ತೆಗೆದುಕೊಂಡು ಕೆಲಸ ಮಾಡಿದ್ದಾರೆ.
ಕೋವಿಡ್ ಮೊದಲ ಮತ್ತು ಎರಡನೇ ಲಾಕ್ಡೌನ್ನಲ್ಲಿ ಗದಗ ಜಿಲ್ಲಾ ಪೊಲೀಸ್ ಇಲಾಖೆ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದೆ. ಜಿಲ್ಲೆಯ ಆರೋಗ್ಯ ಇಲಾಖೆ ಸೋಂಕಿತರಿಗೆ ಉತ್ತಮ ಮತ್ತು ಸಕಾಲದಲ್ಲಿ ಚಿಕಿತ್ಸೆ ನೀಡಿದರೆ, ಪೊಲೀಸ್ ಇಲಾಖೆ ಸೋಂಕು ವ್ಯಾಪಕವಾಗಿ ಹರಡದಂತೆ ನಿಗಾ ವಹಿಸಿ ಜನದಟ್ಟಣೆ ಸೇರದಂತೆ ನೋಡಿಕೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಬೇರೆ ಇಲಾಖೆಯವರಿಗೆ ಕುಟುಂಬಕ್ಕೆ ಹಾಗೂ ಆರೋಗ್ಯ ಕಡೆಗೆ ಗಮನ ಕೊಡಲು ಸಮಯವಿರುತ್ತದೆ. ಆದರೆ, ಪೊಲೀಸರಿಗೆ ಸಮಯವಿರುವುದಿಲ್ಲ. ಹಬ್ಬಹರಿದಿನಗಳ ಸಂದರ್ಭದಲ್ಲೂ ಅವಿರತವಾಗಿ ಶ್ರಮಿಸುತ್ತೀರಿ. ತಮ್ಮ ಆರೋಗ್ಯದ ದೃಷ್ಟಿಯಿಂದ ಪ್ರತಿನಿತ್ಯ 30 ನಿಮಿಷಗಳ ಕಾಲ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳ ಬೇಕು. ಕುಟುಂಬದವರಿಗೂ ಸಮಯ ನೀಡಬೇಕು. ಮಕ್ಕಳು ಶಿಕ್ಷಣದ ಬಗ್ಗೆಯೂ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಎಸ್ಪಿ ಶಿವಪ್ರಕಾಶ ದೇವರಾಜ ಸ್ವಾಗತಿಸಿದರು. ಡಿಸಿಆರ್ಬಿ ಡಿಎಸ್ಪಿ ವಿಜಯ ಬಿರಾದಾರ, ಗದಗ ಡಿಎಸ್ಪಿ ಶಿವಾನಂದ ಪವಾಡಶೆಟ್ಟಿ, ಸಿಪಿಐಗಳಾದ ಪಂಚಾಕ್ಷರಿ ಸಾಲಿಮಠ, ವಿಕಾಸ ಲಮಾಣಿ, ಸುನೀಲ ಸವದಿ, ರವಿ ಕಪ್ಪತ್ತನವರ, ವಿದ್ಯಾನಂದ ನಾಯಕ ಸೇರಿದಂತೆ ಜಿಲ್ಲೆಯ 2 ಉಪವಿಭಾಗದ 7 ಠಾಣೆಗಳ ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ
ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ
Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್
Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್
ಗದಗ: ಮಾರುಕಟ್ಟೆಗೆ ಲಗ್ಗೆಯಿಟ್ಟ ಹಣ್ಣುಗಳ ರಾಜ- ದರದಲ್ಲಿ ವ್ಯತ್ಯಾಸ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು