ಡಿಸಿ ಹಿರೇಮಠ ವರ್ಗಾವಣೆ
Team Udayavani, Jun 30, 2020, 2:42 PM IST
ಗದಗ: ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ. ಅವರ ಸ್ಥಾನಕ್ಕೆ ಸುಂದರೇಶ್ ಬಾಬು ಎಂ. ಅವರನ್ನು ವರ್ಗಾಹಿಸಿ ಸರಕಾರ ಆದೇಶ ಹೊರಡಿಸಿದೆ. 2018ರ ಆಗಸ್ಟ್ 6ರಂದು ಗದಗ ಜಿಲ್ಲಾಧಿ ಕಾರಿಯಾಗಿ ಅಧಿ ಕಾರ ಸ್ವೀಕರಿಸಿದ್ದ ಎಂ.ಜಿ. ಹಿರೇಮಠ ಅವರು, ಒಂದೂವರೆ ವರ್ಷಗಳಲ್ಲಿ ಜಿಲ್ಲೆಯ ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿ ಕೊಂಡು, ಸೈ ಎನಿಸಿಕೊಂಡಿದ್ದಾರೆ.
ಜಿಲ್ಲೆಗೆ ಆಗಮಿಸುತ್ತಿದ್ದಂತೆ 2018ರ ಸೆಪ್ಟೆಂಬರ್ನಿಂದ ಜಿಲ್ಲೆಯ ಆಯ್ದ ಗ್ರಾಮಗಳಲ್ಲಿ ಗ್ರಾಮ ವಾಸ್ತವ್ಯ ಹಾಗೂ ಗ್ರಾಮಸ್ಥರೊಂದಿಗೆ ಸಂವಾದ ನಡೆಸುವ ಮೂಲಕ ಸ್ಥಳೀಯ ಸಮಸ್ಯೆಗಳು, ಸರಕಾರದ ಯೋಜನೆಗಳನ್ನು ಪರಿಣಾಮಕಾರಿ ಜಾರಿಗೊಳಿಸುವ ಪ್ರಯತ್ನ ನಡೆಸಿದರು. ಲಿಂಗ ಸಮಾನತೆಗಾಗಿ ಕೇಂದ್ರ ಸರಕಾರ ಜಾರಿಗೊಳಿಸಿರುವ “ಬೇಟಿ ಬಚಾವೋ, ಬೇಟಿ ಪಡಾವೋ’ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಕೇಂದ್ರ ಸರಕಾರ ನೀಡುವ ರಾಷ್ಟ್ರಮಟ್ಟದ ಪ್ರಶಸ್ತಿಗೆ ಜಿಲ್ಲಾಡಳಿತ ಪಾತ್ರವಾಗಿದೆ. 2018-19 ಹಾಗೂ 2019-20ನೇ ಸಾಲಿಗೆ ಸತತ ಎರಡು ಬಾರಿ ಲಭಿಸಿದ ಪ್ರಶಸ್ತಿಯನ್ನು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಪ್ರಶಸ್ತಿ ಸ್ವೀಕರಿಸಿದ್ದಾರೆ. 2019ರ ಆಗಸ್ಟ್ನಿಂದ ಡಿಸೆಂಬರ್ ಮಧ್ಯೆ ಮೂರು ಬಾರಿ ಜಿಲ್ಲೆಯ ನರಗುಂದ ಮತ್ತು ರೋಣ ತಾಲೂಕುಗಳು ಪ್ರವಾಹಕ್ಕೆ ತುತ್ತಾಗಿವೆ. ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವುದರೊಂದಿಗೆ ನೆರೆ ಸಂತ್ರಸ್ತರಿಗೆ ತಕ್ಷಣಕ್ಕೆ ಪರಿಹಾರ ಒದಗಿಸುವ ಮೂಲಕ ಜನ ಮನಗೆದ್ದಿದ್ದರು. ಮೃದುಸ್ವಭಾವ, ಸಂಭಾವಿತ ಜಿಲ್ಲಾಧಿ ಕಾರಿ ಎಂದು ಅಧಿಕಾರಿ ವಲಯದಲ್ಲಿ ಪ್ರೀತಿ ಪಾತ್ರರಾಗಿದ್ದರು. ಗದಗ ಜಿಲ್ಲಾಧಿಕಾರಿಯಾಗಿ 2012ರ ಕರ್ನಾಟಕ ಐಎಎಸ್ ಕೇಡರ್ನ ಸುಂದರೇಶ್ ಬಾಬು ಅವರು ವರ್ಗಾವಣೆಗೊಂಡಿದ್ದು, ಈ ಮೊದಲು ಅವರು ಹುದ್ದೆಯ ನಿರೀಕ್ಷೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್