ಲಕ್ಷ್ಮೇಶ್ವರ ಮಾರುಕಟ್ಟೆ ಪರಿಶೀಲಿಸಿದ ಡಿಸಿ
Team Udayavani, Apr 16, 2020, 4:34 PM IST
ಲಕ್ಷ್ಮೇಶ್ವರ: ಕೋವಿಡ್ 19 ವೈರಸ್ ತಡೆಗಟ್ಟಲು ಲಾಕ್ಡೌನ್ ಘೋಷಣೆಯ ಅವ ಧಿಯಲ್ಲಿಸರ್ಕಾರದ ಆದೇಶ-ಸೂಚನೆಗಳನ್ನು ಜಿಲ್ಲೆಯ ಎಲ್ಲ ಇಲಾಖೆ ಅಧಿ ಕಾರಿಗಳು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಕೊರೊನಾ ವಿರುದ್ಧದ ಹೋರಾಟದಲ್ಲಿ ಸಾಕಷ್ಟು ಶ್ರಮಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಪ್ರಶಂಸೆ ವ್ಯಕ್ತಪಡಿಸಿದರು.
ಅವರು ಬುಧವಾರ ಪಟ್ಟಣಕ್ಕೆ ಭೇಟಿ ನೀಡಿದ್ದ ವೇಳೆ ಮಾತನಾಡಿ, ಲಾಕ್ ಡೌನ್ ಮೇ 3ರವರೆಗೆ ವಿಸ್ತರಣೆಯಾಗಿದೆ. ಅಲ್ಲಿಯವರೆಗೂ ಮಾರ್ಕೆಟ್, ಎಪಿಎಂಸಿ ಸೇರಿ ಜನ ಸೇರುವ ಸ್ಥಳಗಳಲ್ಲಿ ಸಾಮಾಜಿಕಅಂತರ ಕಾಯಲು ತಾಲೂಕಾಡಳಿತ,ಪೊಲೀಸ್ ಮತ್ತು ಪುರಸಭೆಯವರು ಇನ್ನಷ್ಟು ಶ್ರಮಿಸಬೇಕು ಮತ್ತು ಚೆಕ್ಪೋಸ್ಟ್ಗಳಲ್ಲಿ ಕಟ್ಟುನಿಟ್ಟಿನ ನಿಗಾವಹಿಸಬೇಕು. ಏ. 20ರ ನಂತರ ಸರ್ಕಾರದ ಹೊಸ ಮಾರ್ಗಸೂಚಿಗಳು ಅನ್ವಯವಾಗಲಿದ್ದು, ಈ ವೇಳೆಯಿಂದ ಜಿಲ್ಲೆಯಲ್ಲಿ ಒಂದಿಷ್ಟುವಿನಾಯಿತಿ ಲಭಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಈ ವೇಳೆ ಅವರುಕೈಗಾ-ಇಳಕಲ್ ರಾಜ್ಯ ಹೆದ್ದಾರಿಯಲ್ಲಿರುವ ಗೋನಾಳ ಹತ್ತಿರದ ಚೆಕ್ಪೋಸ್ಟ್ಗೆ ಭೇಟಿ ನೀಡಿ ಮಾಹಿತಿ ಪಡೆದರು. ಬಳಿಕ ಪುರಸಭೆ ಆವರಣದ ಮುಂದೆ ನಡೆಯುತ್ತಿರುವ ತರಕಾರಿ ಹರಾಜು ಪ್ರಕ್ರಿಯೆ ವೀಕ್ಷಿಸಿ ಸಾಮಾಜಿಕ ಅಂತರದೊಂದಿಗೆ ವ್ಯವಸ್ಥಿತವಾಗಿ ನಡೆದ ಹರಾಜು ಪ್ರಕ್ರಿಯೆ ಮೆಚ್ಚಿದರು. ಈ ವೇಳೆ ಶಿಗ್ಲಿಯ ರೈತರ ಮೋಹನಜನಿವಾರದ ಅವರು, ಗೋವಿನಜೋಳ ಕೇಳುವವರಿಲ್ಲದೇ ಹಾಳಾಗುತ್ತಿದೆ. ಗೋವಿನ ಜೋಳವನ್ನು ಬೆಂಬಲ ಬೆಲೆಯಡಿ ಖರೀದಿಸಲು ಜಿಲ್ಲಾಧಿಕಾರಿಗೆ ಮನವಿಮಾಡಿದರು. ಉಪ ತಹಶೀಲ್ದಾರ್ ಎಂ.ಜಿ. ದಾಸಪ್ಪನವರ, ಪುರಸಭೆ ಮುಖ್ಯಾಧಿಕಾರಿ ಆರ್.ಎಂ. ಪಾಟೀಲ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ