ಸಾಲಮನ್ನಾ ನ್ಯೂನತೆ ಸರಿಪಡಿಸದಿದ್ರೆ ಹೋರಾಟ

•ರಾಜ್ಯ-ಕೇಂದ್ರ ಸರ್ಕಾರಗಳು ಸಮನ್ವಯದಿಂದ ಮಹದಾಯಿ ಯೋಜನೆ ಅನುಷ್ಠಾನಗೊಳಿಸಲಿ

Team Udayavani, Jul 6, 2019, 10:44 AM IST

gadaga-tdy-1..

ನರಗುಂದ: ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರೈತ ಸೇನಾ ರಾಜ್ಯಾಧ್ಯಕ್ಷ ಶಂಕರಪ್ಪ ಅಂಬಲಿ ಮಾತನಾಡಿದರು.

ನರಗುಂದ: ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರಾಜ್ಯ ಸರ್ಕಾರ ಘೋಷಿಸಿದ ರೈತರ ಸಾಲಮನ್ನಾ ಯೋಜನೆಯಲ್ಲಿ ಸ್ಪಷ್ಟತೆಯಿಲ್ಲ. ಸಹಕಾರಿ ಬ್ಯಾಂಕ್‌ನಲ್ಲಿ ಲಾಭ ಪಡೆದ ರೈತರಿಗೆ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಅವಕಾಶವಿಲ್ಲ. ಇಂತಹ ಹಲವಾರು ನ್ಯೂನತೆಗಳನ್ನು ಸರಿಪಡಿಸದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಅನಿವಾರ್ಯವಾಗುತ್ತದೆ ಎಂದು ಕರ್ನಾಟಕ ರೈತ ಸೇನಾ ರಾಜ್ಯಾಧ್ಯಕ್ಷ ಶಂಕರಪ್ಪ ಅಂಬಲಿ ಎಚ್ಚರಿಕೆ ನೀಡಿದರು.

ಪಟ್ಟಣದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, 2017,ಡಿ.31ರವರೆಗೆ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿನ ಸುಸ್ತಿ ಸಾಲ ಮತ್ತು 2018 ಜು.10ರವರೆಗಿನ ಸಹಕಾರಿ ಬ್ಯಾಂಕ್‌ನಲ್ಲಿನ ಸಾಲ ಮನ್ನಾ ಘೋಷಣೆ ಮಾಡಲಾಗಿದೆ. ಆದರೆ ಮೊದಲಿಗೆ ಸಹಕಾರಿ ಬ್ಯಾಂಕಿನಲ್ಲಿನ ಸಾಲಮನ್ನಾ ಮಾಡಿದ ಸರ್ಕಾರದ ಕ್ರಮದಿಂದ ಯೋಜನೆ ರೈತರಿಗೆ ಸಮರ್ಪಕವಾಗಿ ಅನುಷ್ಟಾನಗೊಂಡಿಲ್ಲ ಎಂದರು.

ರಾಷ್ಟ್ರೀಕೃತ ಬ್ಯಾಂಕಿನಲ್ಲಿನ 2 ಲಕ್ಷ ಹಾಗೂ ಸಹಕಾರಿ ಬ್ಯಾಂಕಿನಲ್ಲಿನ 1 ಲಕ್ಷ ರೂ.ಸಾಲ ಮನ್ನಾ ಘೋಷಿಸಲಾಗಿದೆ. ಆದರೆ ಒಂದು ಕಡೆಗೆ ಲಾಭ ಪಡೆದ ರೈತರಿಗೆ ಮತ್ತೂಂದು ಕಡೆ ವಂಚಿತವಾಗುವಂತಾಗಿದೆ. ಉ.ಕ.ರೈತರಿಗೆ ಸಾಲಮನ್ನಾ ಲಾಭ ಸಿಗದಂತೆ ಮಾಡಲಾಗಿದೆ. ಆದ್ದರಿಂದ ಎಲ್ಲ ರೈತರ ಸಂಪೂರ್ಣ 2 ಲಕ್ಷ ರೂ. ಸಾಲಮನ್ನಾ ಘೋಷಣೆಗೆ ರಾಜ್ಯ ಸರ್ಕಾರ ಮುಂದಾಗದಿದ್ದರೆ ಹೋರಾಟದ ಹಾದಿ ತುಳಿಯಬೇಕಾಗುತ್ತದೆ ಎಂದು ಹೇಳಿದರು.

ಅಧಿಸೂಚನೆ ನೀಡಲಿ: ನ್ಯಾಯಾಧೀಕರಣ ಮಹದಾಯಿ ನದಿ ನೀರು ಹಂಚಿಕೆ ಮಾಡಿ ವರ್ಷ ಗತಿಸುತ್ತ ಬಂದರೂ ನಮ್ಮ ಪಾಲಿನ ನೀರು ನಮಗೆ ದೊರಕುತ್ತಿಲ್ಲ. ಈ ಹಂತದಲ್ಲಿ ಕೇಂದ್ರ ಸರ್ಕಾರದ್ದು ಒಂದೆಡೆ ನಿರ್ಲಕ್ಷ್ಯವಾದರೆ, ರಾಜ್ಯ ಸರ್ಕಾರದ್ದು ಮತ್ತೂಂದೆಡೆ ನಿರ್ಲಕ್ಷ ್ಯವಾಗುತ್ತಿದೆ. ಮುಖ್ಯವಾಗಿ ಕೇಂದ್ರ ಸರ್ಕಾರ ಅಗತ್ಯ ಅಧಿಸೂಚನೆ ಹೊರಡಿಸಲು ರಾಜ್ಯ ಸರ್ಕಾರ ತೀರ್ಪಿನಂತೆ ಪರಿಷ್ಕೃತ ಯೋಜನಾ ವರದಿ(ಡಿಪಿಆರ್‌) ಇದುವರೆಗೂ ಸಲ್ಲಿಸದಿರುವುದು ಪ್ರಮುಖ ಅಡ್ಡಿಯಾಗಿದೆ ಎಂದು ಶಂಕರಪ್ಪ ಅಂಬಲಿ ಆರೋಪಿಸಿದರು.

ಒಂದೊಂದು ವಿಷಯದಲ್ಲಿ ಮೂರೂ ರಾಜ್ಯಗಳು ನ್ಯಾಯಾಧೀಕರಣ ತೀರ್ಪು ಪ್ರಶ್ನಿಸಿ ಸರ್ವೋಚ್ಛ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿವೆ. ಆದರೆ ಈ ಹಂತದಲ್ಲಿ ನಮ್ಮ ರಾಜ್ಯಕ್ಕೆ ಹಂಚಿಕೆಯಾದ ನೀರನ್ನು ಪಡೆಯಲು ರಾಜ್ಯ ಸರ್ಕಾರ ಕೂಡಲೇ ಕೇಂದ್ರ ಜಲಶಕ್ತಿ, ಪರಿಸರ, ಅರಣ್ಯ ಇಲಾಖೆ ಅನುಮತಿ ಪಡೆದರೆ ಆ ಕೂಡಲೇ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್‌ ಹೊರಡಿಸಬೇಕು ಎಂದು ಒತ್ತಾಯಿಸಿದರು.

ಇದೇ ಜು.16ಕ್ಕೆ ಮಹದಾಯಿ ಹೋರಾಟ 4 ವರ್ಷಗಳನ್ನು ಪೂರೈಸುತ್ತ ಬಂದರೂ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಮಾತು ಆಲಿಸುತ್ತಿಲ್ಲ. ಇನ್ನಾದರೂ ಉಭಯ ಸರ್ಕಾರಗಳು ಸಮನ್ವಯತೆಯಿಂದ ಯೋಜನೆ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.

ರೈತಸಂಘ ಜಿಲ್ಲಾಧ್ಯಕ್ಷ ಬಸವರಾಜ ಸಾಬಳೆ, ಶಹರ ಅಧ್ಯಕ್ಷ ವಿಠಲ ಜಾಧವ, ಲೋಕನಾಥ ಹೆಬಸೂರ, ವೀರಬಸಪ್ಪ ಹೂಗಾರ, ಪರಶುರಾಮ ಜಂಬಗಿ, ವೀರಣ್ಣ ಸೊಪ್ಪಿನ, ಚನ್ನು ನಂದಿ, ಜಿನ್ನಪ್ಪ ಮುತ್ತಿನ ಇದ್ದರು.

ರೈತರ ಮೇಲಿನ ಪ್ರಕರಣ ಬಾಕಿ:

ಹಿಂದಿನ ಸಿದ್ಧರಾಮಯ್ಯನವರ ಸರ್ಕಾರದಲ್ಲಿ ಮಹದಾಯಿ ಹೋರಾಟದಲ್ಲಿ ರೈತರ ಮೇಲೆ ದಾಖಲಾದ ಎಲ್ಲ ಪ್ರಕರಣ ಹಿಂಪಡೆಯಲಾಗಿದೆ ಎಂದು ಘೋಷಿಸಲಾಗಿತ್ತು. ಆದರೆ ನರಗುಂದ, ನವಲಗುಂದ, ಹುಬ್ಬಳ್ಳಿ, ಸವದತ್ತಿ ತಾಲೂಕುಗಳ ಸುಮಾರು 300 ರೈತರ ಮೇಲೆ ಇನ್ನೂ ಪ್ರಕರಣ ದಾಖಲಿವೆ. ಹೀಗಾಗಿ ರೈತರು ಇಂದಿಗೂ ನ್ಯಾಯಾಲಯಕ್ಕೆ ಅಲೆದಾಡುವಂತಾಗಿದೆ. ಸರ್ಕಾರ ಕೂಡಲೇ ಉಳಿದ ರೈತರ ಮೇಲಿನ ಪ್ರಕರಣ ಹಿಂಪಡೆಯಬೇಕು. •ಶಂಕರಪ್ಪ ಅಂಬಲಿ. ಕರ್ನಾಟಕ ರೈತ ಸೇನಾ ರಾಜ್ಯಾಧ್ಯಕ್ಷ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.