ಗ್ರಾಮ-ನಗರ ಸ್ವಚ್ಛತೆಗೆ ಪಣ

•ಜಿಲ್ಲಾಮಟ್ಟದ ಸ್ವಚ್ಛಮೇವ ಜಯತೆ-ಜಲಾಮೃತ ಕಾರ್ಯಕ್ರಮಕ್ಕೆ ಸಚಿವ ಪರಮೇಶ್ವರ ನಾಯ್ಕ ಚಾಲನೆ

Team Udayavani, Jun 12, 2019, 10:19 AM IST

gadaga-tdy-1..

•ಜಿಲ್ಲಾಮಟ್ಟದ ಸ್ವಚ್ಛಮೇವ ಜಯತೆ-ಜಲಾಮೃತ ಕಾರ್ಯಕ್ರಮಕ್ಕೆ ಸಚಿವ ಪರಮೇಶ್ವರ ನಾಯ್ಕ ಚಾಲನೆ

ಗದಗ: ಆರೋಗ್ಯಕರ ಮತ್ತು ಕ್ರಿಯಾಶೀಲತೆಗಾಗಿ ಸ್ವಚ್ಛಮೇವ ಜಯತೆ ಹಾಗೂ ಜಲಾಮೃತ ಕಾರ್ಯಗಳು ಪ್ರತಿಯೊಬ್ಬರ ಜೀವನದ ಮಂತ್ರವಾಗಬೇಕು ಎಂದು ರಾಜ್ಯ ಕೌಶಲಾಭಿವೃದ್ಧಿ, ಮುಜರಾಯಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಹೇಳಿದರು.

ತಾಲೂಕಿನ ಬಿಂಕದಕಟ್ಟಿ ಗ್ರಾಮದ ಹೊರವಲಯದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಸ್ವಚ್ಛಮೇವ ಜಯತೆ ಹಾಗೂ ಜಲಾಮೃತ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸರ್ಕಾರ ಸಿಸಿ ರಸ್ತೆ, ಒಳಚರಂಡಿ, ಕುಡಿಯುವ ನೀರು, ಕೃಷಿ ಕಾರ್ಮಿಕರಿಗೆ ಉದ್ಯೋಗ ಹೀಗೆ ಎಲ್ಲ ಸೌಲಭ್ಯಗಳನ್ನೂ ನೀಡುತ್ತಿದೆ. ಅದನ್ನು ಬಳಸುವವರು ಎಲ್ಲವೂ ಗ್ರಾ.ಪಂ., ನಗರಸಭೆ ಅಥವಾ ಸರ್ಕಾರವೇ ಮಾಡಬೇಕು ಎಂಬ ಮನೋಭಾವ ಬದಿಗಿಟ್ಟು ಸ್ವಚ್ಛತೆಗೆ, ನೀರಿನ ಸದ್ಭಳಕೆಗೆ ಗಮನ ಹರಿಸಬೇಕು. ಅಂದಾಗ ಮಾತ್ರ ಇಡೀ ಓಣಿ, ಗ್ರಾಮ, ನಗರ ಪ್ರದೇಶಗಳನ್ನು ಸ್ವಚ್ಛ ಸುಂದರವನ್ನಾಗಿಸಲು ಸಾಧ್ಯ. ಇಂತಹ ಕಾರ್ಯಗಳಲ್ಲಿ ಜನರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್.ಕೆ. ಪಾಟೀಲ ಮಾತನಾಡಿ, ಜಲ ಸಂವರ್ಧನೆಗಾಗಿ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ರಿಜ್‌ ವ್ಯಾಲಿ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ರೈತರಿಗೆ ಸಾಕಷ್ಟು ಪ್ರಮಾಣದಲ್ಲಿ ಅನುಕೂಲವಾಗಿದೆ. ರಾಜ್ಯ ಸರಕಾರವು ಗ್ರಾಮೀಣ ಜನರ ಜೀವನಮಟ್ಟ ಸುಧಾರಣೆಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಯೋಜನೆಗಳ ಯಶಸ್ಸಿಗೆ ಸಾರ್ವಜನಿಕರ ಸಹಭಾಗಿತ್ವ ಪ್ರಮುಖವಾಗಿದೆ. ಮುಂದಿನ ದಿನಮಾನಗಳಲ್ಲಿ ಈ ಭಾಗದಲ್ಲಿ ಹನಿ ನೀರಾವರಿ ಯೋಜನೆ ಜಾರಿಗೆ ಬರಲಿದ್ದು, ಈ ಭಾಗದ ರೈತರು ಸಂಬಂಧಿಸಿದ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಯೋಜನೆಗೆ ತಕ್ಕಂತೆ ತಮ್ಮ ಹೊಲಗಳನ್ನು ಹದ ಮಾಡಿಕೊಳ್ಳಬೇಕು ಎಂದು ಪಾಟೀಲ ಸಲಹೆ ನೀಡಿದರು.

ಜಿ.ಪಂ. ಅಧ್ಯಕ್ಷ ಎಸ್‌.ಪಿ. ಬಳಿಗಾರ, ಮಾಜಿ ಶಾಸಕ ನಂಜಯ್ಯನಮಠ ಮಾತನಾಡಿದರು.

ಜಿ.ಪಂ. ಸಿಇಒ ಮಂಜುನಾಥ ಚವ್ಹಾಣ ಪ್ರಾಸ್ತಾವಿಕವಾಗಿ ಮಾತನಾಡಿ, ಕಳೆದ ಎರಡು ದಶಕಗಳಲ್ಲಿ ರಾಜ್ಯ 14 ವರ್ಷ ಬರಗಾಲ ಎದುರಿಸಿದೆ. ಕಳೆದ 5 ವರ್ಷಗಳಲ್ಲಿ ಗದಗ ಜಿಲ್ಲಾ ಸೇರಿದಂತೆ 4 ವರ್ಷ ಬರಗಾಲವಿದ್ದು, ರೈತರ ಗ್ರಾಮೀಣ ವರ್ಗದ ಜನರ ಜೀವನ ಸಂಕಷ್ಟಕೆ ಸಿಲುಕಿದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ 2019ನ್ನು ಜಲಾಮೃತ ವರ್ಷವೆಂದು ಘೋಷಿಸಿದ್ದು, ನೀರು ನೆಲಗಳ ಸಂವರ್ಧನೆ, ರಕ್ಷಣೆ ಅವುಗಳ ಸದ್ಭಳಕೆಗೆ ಜನಜಾಗೃತಿಗೆ ಮುಂದಾಗಿದೆ ಎಂದರು.

ಈ ಸಂದರ್ಭದಲ್ಲಿ ಸ್ವಚ್ಛಮೇವ ಜಯತೆ ಹಾಗೂ ಜಲಾಮೃತ ಕುರಿತಂತೆ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿ.ಪಂ. ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ, ಜಿ.ಪಂ. ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಹನುಮಂತಪ್ಪ ಪೂಜಾರ, ಸದಸ್ಯರಾದ ವಾಸಣ್ಣ ಕುರಡಗಿ, ಸಿದ್ಧು ಪಾಟೀಲ, ತಾ.ಪಂ. ಅಧ್ಯಕ್ಷ ಮೋಹನ ದುರಗಣ್ಣವರ, ಉಪಾಧ್ಯಕ್ಷೆ ಸುಜಾತಾ ಖಂಡು, ಬಿಂಕದಕಟ್ಟಿ ಗ್ರಾ.ಪಂ. ಅಧ್ಯಕ್ಷ ವಿ.ಡಿ. ರಂಗಪ್ಪನವರ, ಉಪಾಧ್ಯಕ್ಷೆ ಜಯಶ್ರೀ ಹುಲ್ಲೋಜಿ, ಪ್ರಮುಖರಾದ ರವಿ ಮೂಲಿಮನಿ, ಡಾ| ಮೇಟಿ ಡಬಾಲಿ ಇದ್ದರು.

ಕಾರ್ಯಕ್ರಮದ ಅಂಗವಾಗಿ ಆರೋಗ್ಯ ಇಲಾಖೆ, ಕೃಷಿ ಕಾರ್ಮಿಕರಿಗೆ ಏರ್ಪಡಿಸಿದ್ದ ಆರೋಗ್ಯ ತಪಾಸಣೆ ಶಿಬಿರ, ಕೃಷಿ, ಜಲಾನಯನ, ಪಶುಪಾಲನೆ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಮಾಹಿತಿ ಕೇಂದ್ರಗಳನ್ನು ಸಚಿವರು ವೀಕ್ಷಿಸಿದರು.

ಟಾಪ್ ನ್ಯೂಸ್

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.