ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತರಿಂದ ದೆಹಲಿ ಚಲೋ
ರೈತರಿಗೆ ಸೂಕ್ತ ಮಾಸಾಶನ ನೀಡಲು ಮನವಿ
Team Udayavani, Jun 9, 2019, 11:07 AM IST
ಮುಂಡರಗಿ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರೈತರು ಕೈಗೊಂಡ ದೆಹಲಿ ಚಲೋಗೆ ನಾಡೋಜ ಡಾ| ಅನ್ನದಾನೀಶ್ವರ ಸ್ವಾಮೀಜಿ ಚಾಲನೆ ನೀಡಿದರು.
ಮುಂಡರಗಿ: ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ತಾಲೂಕು ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಶನಿವಾರ ಪಟ್ಟಣದ ಅನ್ನದಾನೀಶ್ವರ ಮಠದಿಂದ ಕೈಗೊಂಡ ದೆಹಲಿ ಚಲೋಗೆ ನಾಡೋಜ ಡಾ| ಅನ್ನದಾನೀಶ್ವರ ಸ್ವಾಮೀಜಿ ಚಾಲನೆ ನೀಡಿದರು.
ನಂತರ ಮಾತನಾಡಿದ ಸ್ವಾಮೀಜಿ, ನಮಗೆ ಬೇಕಾದ ಸೌಲಭ್ಯ ಪಡೆದುಕೊಳ್ಳಲು ಹೋರಾಟ ಮಾಡುವುದು ಅತ್ಯವಶ್ಯವಿದೆ. ಶಾಂತಿಯುತ ಹೋರಾಟದ ಮೂಲಕ ಬೇಡಿಕೆ ಈಡೇರಿಸಿಕೊಳ್ಳಬೇಕು. ರೈತರು, ರೈತ ಮಹಿಳೆಯರಿಗೆ ಸೂಕ್ತವಾದ ಮಾಸಾಶನ ನೀಡಬೇಕು ಎಂದರು.
ಜಿಲ್ಲಾ ಹಸಿರು ಸೇನೆ ಅಧ್ಯಕ್ಷ ಶಿವಾನಂದ ಇಟಗಿ ಮಾತನಾಡಿ, ರೈತರ ಬೆಳೆಗೆ ಉತ್ತಮ ಬೆಲೆ ಸಿಗಬೇಕು. ಮಹಿಳಾ ಸ್ವಸಹಾಯ ಸಂಘಗಳಿಗೆ 10 ಲಕ್ಷ ರೂ. ವರೆಗೂ ಬಡ್ಡಿರಹಿತ ಸಾಲ ಸೌಲಭ್ಯ ನೀಡಬೇಕು. ಸ್ವತಂತ್ರ ಹೋರಾಟಗಾರರ, ಸಂತರ, ಶರಣರ, ದಾರ್ಶನಿಕರ ಜಯಂತಿಯನ್ನು ಒಂದೇ ವೇದಿಕೆಯಲ್ಲಿ ಒಂದೇ ದಿನವೇ ಆಚರಿಸುವಂತೆ ಆಗಬೇಕು ಎಂದು ಆಗ್ರಹಿಸಿ ದೆಹಲಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದರು.
ತಾಲೂಕು ರೈತ ಸಂಘ ಅಧ್ಯಕ್ಷ ಹನುಮಪ್ಪ ಕುರಿ ಮಾತನಾಡಿದರು. ಬಿಜೆಪಿ ಮಹಿಳಾ ರೈತ ಮೋರ್ಚಾ ಅಧ್ಯಕ್ಷೆ ಕಸ್ತೂರೆವ್ವ ಅರಕೇರಿ, ರಾಮಣ್ಣ ಇಲ್ಲೂರ, ಯಲ್ಲಪ್ಪ ಸಂಶಿ, ಈರಣ್ಣ ಲದ್ದಿ, ಈರಣ್ಣ ಚೌಡಾಳ, ಗವಿಸಿದ್ಧಪ್ಪ ಗಟ್ಟಿರಡ್ಡಿಹಾಳ, ಕನಕಪ್ಪ ಶಾಸ್ತ್ರಿ, ಈರಣ್ಣ ಇಟಗಿ, ಈರಪಮ್ಮ ಸಂದಣ್ಣವರ, ಕರಬಸಪ್ಪ ಚೌಡಾಳ, ಯಂಕಮ್ಮ ಪ್ಯಾಟಿ, ದೀಪಾ ಪಾಟೀಲ, ಶಿವಮ್ಮ ಗಡಗಿ, ನಾಗರಾಜ ಬಡಿಗೇರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ