ನಗರಸಭೆ ವಾಣಿಜ್ಯ ಮಳಿಗೆಗಳ ಟೆಂಡರ್ಗೆ ಆಗ್ರಹ
Team Udayavani, May 4, 2019, 1:53 PM IST
ಗದಗ: ಗದಗ-ಬೆಟಗೇರಿ ನಗರಸಭೆ ಮಾಲೀಕತ್ವದಲ್ಲಿ ಅವಳಿ ನಗರದಲ್ಲಿರುವ ವಾಣಿಜ್ಯ ಮಳಿಗೆಗಳನ್ನು ಬಹಿರಂಗ ಹರಾಜು ಮೂಲಕ ವಿತರಣೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಮಹಾತ್ಮಗಾಂಧಿ ವೃತ್ತದಿಂದ ನಗರಸಭೆವರೆಗೆ ಪ್ರತಿಭಟನೆ ನಡೆಸಿ, ವಾಣಿಜ್ಯ ಮಳಿಗೆಗಳ ಹಂಚಿಕೆಯಲ್ಲಿ ಕಾನೂನು ಗಾಳಿಗೆ ತೂರುವ ನಗರಸಭೆ ಹಾಗೂ ಜಿಲ್ಲಾಡಳಿತಕ್ಕೆ ಧಿಕ್ಕಾರ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ ಸುಮಾರು 320ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳಿವೆ. ಅವುಗಳನ್ನು 25-30 ವರ್ಷಗಳ ಹಿಂದೆ ಬಹಿರಂಗ ಹರಾಜು ಮೂಲಕ ವಿತರಿಸಲಾಗಿದೆ. ಆನಂತರ ಕಾಲಕಾಲಕ್ಕೆ ಟೆಂಡರ್ ಕರೆಯದೇ, ಲೀಸ್ ಅಥವಾ ಬಾಡಿಗೆಯನ್ನು ಮುಂದುವರಿಸಲಾಗಿದೆ ಎಂದು ದೂರಿದರು.
30 ವರ್ಷದ ಹಿಂದೆ ವಾಣಿಜ್ಯ ಮಳಿಗೆಗಳಿಗೆ 200ರಿಂದ 500 ರೂ. ಬಾಡಿಗೆ ನಿಗದಿಪಡಿಸಿದೆ. ಆದರೆ, ಸದ್ಯ ಮಾರುಕಟ್ಟೆಯಲ್ಲಿ ಮಳಿಗೆಯೊಂದಕ್ಕೆ ಕನಿಷ್ಠ 2000 ರಿಂದ 6000 ರೂ. ಬಾಡಿಗೆ ಇದೆ. ಅಲ್ಲದೇ, 30 ವರ್ಷಗಳ ಹಿಂದೆ ಹರಾಜು ಮೂಲಕ ಮಳಿಗೆ ಪಡೆದವರು, ಅಕ್ರಮವಾಗಿ ಮತ್ತೂಬ್ಬರಿಗೆ ದುಪ್ಪಟ್ಟು ಬೆಲೆಗೆ ಬಾಡಿಗೆ ನೀಡಿ, ಹಣ ಜೇಬಿಗಿಳಿಸುತ್ತಿದ್ದಾರೆ. ಈ ಬಗ್ಗೆ ಸ್ಥಳೀಯ ನಗರಸಭೆ ಅಧಿಕಾರಿಗಳು ಕಂಡೂ ಕಾಣದಂತೆ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿದರು.
ನಗರಸಭೆ ವಾಣಿಜ್ಯ ಮಳಿಗೆಗಳನ್ನು ಕಾಲಕಾಲಕ್ಕೆ ಟೆಂಡರ್ ಮೂಲಕ ಹಂಚಿಕೆ ಮಾಡಬೇಕು ಎಂದು ಕಾನೂನುಗಳಿದ್ದರೂ ಅಧಿಕಾರಿಗಳು ಅದನ್ನು ಪಾಲಿಸುತ್ತಿಲ್ಲ ಎಂದು ದೂರಿದ ಪ್ರತಿಭಟನಾಕಾರರು, ಈ ಕುರಿತು ಜಿಲ್ಲಾಡಳಿತ ಗಮನ ಹರಿಸಿ ನಗರಸಭೆಯ ಎಲ್ಲ ವಾಣಿಜ್ಯ ಮಳಿಗೆಗಳನ್ನು ಹರಾಜು ಮೂಲಕ ಹಂಚಿಕೆ ಮಾಡಬೇಕು. ಈ ಮೂಲಕ ನವೋದ್ಯಮಿಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಅದರೊಂದಿಗೆ ನಗರಸಭೆ ವ್ಯಾಪ್ತಿಯ ಹಲವು ಉದ್ಯಾನಗಳು ನಿರ್ವಹಣೆ ಇಲ್ಲದೇ ಅನೈತಿಕ ಚಟುವಟಿಕೆ ತಾಣಗಳಾಗಿ ಮಾರ್ಪಡುತ್ತಿವೆ. ಈ ಕುರಿತು ನಗರಸಭೆ ಅಧಿಕಾರಿಗಳು ಗಮನ ಹರಿಸಬೇಕು ಎಂದು ಕೋರಿ ಪೌರಾಯುಕ್ತರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಕರವೇ ಜಿಲ್ಲಾಧ್ಯಕ್ಷ ಹನುಮಂತ ಎಚ್. ಅಬ್ಬಿಗೇರಿ, ಪದಾಧಿಕಾರಿಗಳಾದ ಶರಣು ಗೋಡಿ, ನಿಂಗನೌಡ ಮಾಲಿಪಾಟೀಲ, ಬಸವರಾಜ ಮೇಟಿ, ಸಿದ್ಧಪ್ಪ ವಡ್ಡರ, ಹನಮಂತ ಪೂಜಾರ, ಶಂಶುದ್ದೀನ್ ಡಂಬಳ, ಶಾಮು ನದಾಫ್, ಲಖನ್ ಸಿಂಗ್ ಗಂಗಾವತಿ, ಆಶಾ ಜೂಲಗುಡ್ಡ, ರತ್ನಮ್ಮ ಯಲಬುರ್ಗಿ, ರತ್ನಮ್ಮ ಕಣಗಿನಹಾಳ, ಗೀತಾ ಕಾಳಗಿ, ಮೇರಿ ಪೂಜಾರ, ನಾಗಪ್ಪ ಅಣ್ಣಿಗೇರಿ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್