ಅಕ್ಷರ ದೇಗುಲವೀಗ ಅನೈತಿಕ ತಾಣ


Team Udayavani, Mar 12, 2020, 5:03 PM IST

gadaga-tdy-2

ನರೇಗಲ್ಲ: ಸಮೀಪದ ಪ್ರಭುಲಿಂಗ ಲೀಲೆಯ ಕರ್ತೃ, ಕವಿ ಚಾಮರಸರ ತವರೂರು ನಾರಾಯಣಪುರ ಗ್ರಾಮದಲ್ಲಿನ ಶತಮಾನ ಕಂಡ ಹಳೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹಸ್ರಾರು ವಿದ್ಯಾರ್ಥಿಗಳಿಗೆ ಅಕ್ಷರ ನೀಡಿ, ಬಾಳಿಗೆ ಬೆಳಕಾಗಿದ್ದ ತಾಣ ಇಂದು ಅಕ್ರಮ-ಅನೈತಿಕ ಚಟುವಟಿಕೆಗಳ ತಾಣವಾಗಿದೆ.

ರೋಣ ಮತ ಕ್ಷೇತ್ರದ ವ್ಯಾಪ್ತಿಯ ಕೋಟುಮಚಗಿ ಗ್ರಾಮದ ಮಜರೆ ಹಾಗೂ ವಾರ್ಡ್‌ ನಂ.6ರಲ್ಲಿ ನಾರಾಯಣಪುರ ಗ್ರಾಮದಲ್ಲಿ ಸುಮಾರು 2 ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿದೆ. ಈ ಗ್ರಾಮದಲ್ಲಿ ಜನಿಸಿದ ಕವಿ ಚಾಮರಸನ ಕೃತಿಗೆ ವಿಜಯನಗರ ಅರಸರ ಕಾಲದಲ್ಲಿ ಆನೆಯ ಅಂಬಾರಿ ಮೇಲೆ ಕವಿ ಚಾಮರಸ ಬರೆದ ಪ್ರಭುಲಿಂಗ ಲೀಲೆ ಕೃತಿಯಿಟ್ಟು ಕನಕಾಭಿಷೇಕ ಮಾಡಿದ ಇತಿಹಾಸ ಹೊಂದಿದೆ. ಅಂತಹ ಊರಿನ ಶಾಲೆ ಅನೈತಿಕ ಚಟುವಟಿಕೆಗಳಿಗೆ ಬಹುದೊಡ್ಡ ಆಶ್ರಯವಾಗಿದೆ.

ಈ ಶಾಲೆಯು ಶತಮಾನಗಳ ಕಾಲ ಊರಿನ ಪ್ರತಿಯೊಬ್ಬ ನಾಗರಿಕನಿಗೂ ಶಿಕ್ಷಣ ನೀಡಿದೆ. “ಮತ್ತು ಕೊಡುವಳು ಬಂದಾಗ ತುತ್ತು ಕೊಟ್ಟವಳ ಮರಿಬ್ಯಾಡ’ ಎಂಬ ಗಾದೆ ಮಾತಿನಂತಾಗಿದೆ ನಾರಾಯಣಪುರ ಗ್ರಾಮದ ಹಳೇ ಶಾಲೆಯ ಕಟ್ಟಡದ ಸ್ಥಿತಿ. ಆರ್‌ಸಿಸಿ ಕಟ್ಟಡ ನಿರ್ಮಾಣವಾದ ಬಳಿಕೆ ಹಳೆಯ ಹಂಚಿನ ಹಾಗೂ ಕಲ್ಲಿನ ಕಟ್ಟಡಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಮರೆಯುತ್ತಿದೆ. ಅಕಾರಿಗಳ ನಿರ್ಲಕ್ಷ್ಯ ಧೋರಣೆಯಿಂದ ಬೀಳುವ ಹಂತದಲ್ಲಿದೆ.

ಮರಳಿ ಕೊಡಿ: ಮಕ್ಕಳ ಶಿಕ್ಷಣ ಹಾಗೂ ಶಾಲೆಯ ನಿರ್ಮಾಣಕ್ಕಾಗಿ ಭೂಮಿ ನೀಡಿದ ದಾನಿಗಳು ಮರಳಿ ನಮ್ಮ ಭೂಮಿಯನ್ನು ನಮಗೆ ಹಿಂದಿರುಗಿಸುವಂತೆ ಒತ್ತಾಯಿಸುತ್ತಿದ್ದಾರೆ. ನೂತನಕಟ್ಟಡಗಳನ್ನು ನಿರ್ಮಿಸಿದ್ದರಿಂದ ಹಳೇಯ ಕಟ್ಟಡವನ್ನು ಅನಾಥವಾಗಿ ಕೈಬಿಟ್ಟಿರುವುದು ಶಿಕ್ಷಣ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಶಾಲೆಯಲ್ಲಿ ಚುನಾವಣೆಯಲ್ಲಿ ಮತಗಟ್ಟೆ

ಕೇಂದ್ರ : ಶತಮಾನ ಕಂಡ ಶಾಲೆಯಲ್ಲಿ ಹಲವು ದಶಕಗಳಿಂದ ಈ ಆವರಣದಲ್ಲಿ ಒಂದು ಕೊಠಡಿ ಚುನಾವಣೆ ಇಲಾಖೆಯ ಮತಗಟ್ಟೆಯಾಗಿದೆ. ಇಲ್ಲಿಯೇ ಅನೈತಿಕ, ಅಕ್ರಮ ಚಟುವಟಿಕೆಗಳು ಕೆಳದ ಎರಡು ವರ್ಷಗಳಿಂದ ಎಗ್ಗಿಲ್ಲದೇ ಅವ್ಯಾಹತವಾಗಿ ನಡೆಯುವ. ಇದಕ್ಕೆ ಆರೋಗ್ಯ, ಶಿಕ್ಷಣ ಇಲಾಖೆ ಹಾಗೂ ಜನಪ್ರತಿನಿ ಗಳ ನಿರ್ಲಕ್ಷ್ಯವೇ ಕಾರಣ. ಹಲವು ಬಾರಿ ಮನವಿ ಸಲ್ಲಿಸದರೂ ಪ್ರಯೋಜನವಾಗಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕೋಟುಮಚಗಿ ಗ್ರಾಪಂ ವ್ಯಾಪ್ತಿಯ ನಾರಾಯಣಪುರ ಗ್ರಾಮದ ಹಳೆಯ ಶಾಲೆಯನ್ನು ಬೇರೆ ಇಲಾಖೆಗೆ ಅಥವಾ ಉದ್ಯಾನವರ, ಸಾರ್ವಜನಿಕ ಗ್ರಂಥಾಲಯ ನಿರ್ಮಿಸುವುದಕ್ಕೆ ಅವಕಾಶ ಇದೆ. ಆದರೆ, ಈ ಶಾಲೆಯಲ್ಲಿ ಚುನಾವಣೆ ಮತಗಟ್ಟೆ ಇರುವುದರಿಂದ ಇದನ್ನು ನೆಲಸಮ ಮಾಡುವುದು ಸ್ವಲ್ಪ ಕಷ್ಟವಾಗಿದೆ. ಚುನಾವಣೆ ಇಲಾಖೆಗೆ ಈಗಾಗಲೇ ಮತಗಟ್ಟೆಯನ್ನು ಸ್ಥಳಾಂತರ ಮಾಡುವುದಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. -ಎಂ.ಎ. ರಡ್ಡೇರ, ಗದಗ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ

 

-ಸಿಕಂದರ್‌ ಆರಿ

ಟಾಪ್ ನ್ಯೂಸ್

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.