ಹದಗೆಟ್ಟ ರಸ್ತೆಗೆ ಜನ ಸುಸ್ತೋ ಸುಸ್ತು..

ಈ ರಸ್ತೆಯಲ್ಲಿ ಹಣ-ಸಮಯ ಎರಡೂ ವ್ಯರ್ಥ

Team Udayavani, Jul 29, 2019, 8:53 AM IST

gadaga-tdy-1

ರೋಣ: ಗ್ರಾಮೀಣ ಪ್ರದೇಶಗಳ ರಸ್ತೆ ಸುಧಾರಣೆಗೆ ಕೇಂದ್ರ-ರಾಜ್ಯ ಸರಕಾರಗಳು ಸಾಕಷ್ಟು ಹಣ ಬಿಡುಗಡೆ ಮಾಡುತ್ತವೆ. ಆದರೆ ಅನುದಾನ ಉಪಯೋಗ ಸರಿಯಾಗಿ ಮತ್ತು ಅವಶ್ಯವಿರುವ ಕಡೆಗಳಲ್ಲಿ ಮಾತ್ರ ಬಳಕೆಯಾಗದಿರುವುದಕ್ಕೆ ತಾಲೂಕಿನ ಕೋತಬಾಳಯಿಂದ ಮಾಡಲಗೇರಿಗೆ ಸಂಪರ್ಕಿಸುವ ರಸ್ತೆಯೇ ಸಾಕ್ಷಿ.

ಮಳೆಗಾಲದಲ್ಲಿ ಈ ರಸ್ತೆಯಲ್ಲಿ ಪ್ರಯಾಣ ಮಾಡಬೇಕಾದರೆ ವಾಹನ ಸವಾರರು ಹರಸಾಹಸ ಪಡಬೇಕಿದೆ.

ರಸ್ತೆ ಅಭಿವೃದ್ಧಿ ಯಾವಾಗ?: ತಾಲೂಕು ಕೇಂದ್ರ ಸ್ಥಾನದಿಂದ ಬೆರಳೆಣಿಕೆಯಷ್ಟು ಕಿ.ಮಿ.ದೂರದಲ್ಲಿರುವ ಕೋತಬಾಳ ಗ್ರಾಮದಿಂದ ಮಾಡಲಗೇರಿ ಗ್ರಾಮಕ್ಕೆ ಹೋಗುವ ಈ ರಸ್ತೆ ಕೋತಬಾಳ ಗ್ರಾಮದಿಂದ ಸಂಪೂರ್ಣ ಕಚ್ಚಾ ರಸ್ತೆಯಿಂದ ಕೂಡಿದೆ. ಇದು ಇಲ್ಲಿಯವರೆಗೆ ಯಾವುದೇ ರೀತಿಯಲ್ಲಿ ದುರಸ್ತಿ ಕಂಡಿಲ್ಲ. ರೈತರು ಹೊಲಗಳಿಗೆ ತೆರಳಬೇಕಾದರೆ ಈ ರಸ್ತೆಯನ್ನೇ ಅವಲಂಬಿಸಬೇಕಾಗಿದೆ. ಇಂತಹ ರಸ್ತೆ ದುರಸ್ತಿ ಕಾಣದಿರುವುದಕ್ಕೆ ಸಾರ್ವಜನಿಕರು ಅಧಿಕಾರಿಗಳು ಹಾಗೂ ಜನಪತ್ರಿನಿಧಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಮಳೆಯಾದರೆ ಸಂಚಾರವೇ ಬಂದ್‌: ಮಳೆ ಬಂದರೆ ಈ ರಸ್ತೆಯಲ್ಲಿ ಪ್ರಯಾಣ ಮಾಡುವವರ ಪಾಡು ಹೇಳತಿರದು. ಇದು ಕಚ್ಚಾ ರಸ್ತೆಯಾಗಿರುವುದರಿಂದ ರಸ್ತೆಯಲ್ಲಿರುವ ತಗ್ಗುಗಳು ನೀರಿನಿಂದ ಆವೃತವಾಗುತ್ತವೆ. ಇದರಿಂದ ರಸ್ತೆ ಸಂಪೂರ್ಣ ಕೊಚ್ಚೆಯಾಗಿ ಪರಿಣಮಿಸುವುದು. ವಾಹನ ಸವಾರರು ಸ್ವಲ್ಪ ಆಯ ತಪ್ಪಿದರೂ ಅಪಘಾತ ಕಟ್ಟಿಟ್ಟ ಬುತ್ತಿ.

ಸಮಯ ಮತ್ತು ಹಣ ಉಳಿತಾಯವಾಗುವ ಕಾರಣಕ್ಕೆ ರೋಣದಿಂದ ಕೋತಬಾಳ ಮಾರ್ಗವಾಗಿ ಮಾಡಲಗೇರಿಗೆ ಪ್ರಯಾಣಿಸಬಹುದು. ಆದರೆ ರಸ್ತೆಯಲ್ಲಿ ಬಿದ್ದಿರುವ ತಗ್ಗು-ದಿನ್ನೆಗಳಿಗೆ ಮಣ್ಣು ಹಾಕಿ ಕಚ್ಚಾ ರಸ್ತೆಯನ್ನು ಪಕ್ಕಾ ರಸ್ತೆಯನ್ನಾಗಿ ಮಾಡಿದರೆ ಈ ರಸ್ತೆ ಸಂಚಾರಕ್ಕೆ ಅನುಕೂಲವಾಗುತ್ತದೆ.•ಭರಮಗೌಡ ರಾಯನಗೌಡ್ರ, ಮಾಡಲಗೇರಿ ಗ್ರಾಮಸ್ಥ

ಕೋತಬಾಳದಿಂದ ಮಾಡಲಗೇರಿಗೆ ಸಂಪರ್ಕ ಕಲ್ಪಿಸುವ ರಸ್ತೆ ವಾಸ್ತವ ಸ್ಥಿತಿಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ತರಿಸಿಕೊಳ್ಳಲಾಗುವುದು. ರಾಜ್ಯ ಹಾಗೂ ಕೇಂದ್ರ ಸರ್ಕಾರದ ನೆರವಿನೊಂದಿಗೆ ಉತ್ತಮ ರಸ್ತೆ ನಿರ್ಮಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.•ಕಳಕಪ್ಪ ಬಂಡಿ, ಶಾಸಕ, ರೋಣ

2.5 ಕಿ.ಮೀ ದೂರ ಮಾತ್ರ: ಕೋತಬಾಳ ಗ್ರಾಮದಿಂದ ಮಾಡಲಗೇರಿಗೆ ಪ್ರಯಾಣಿಸಬೇಕಾದರೆ ಸುಮಾರು 2.5 ಕಿ.ಮೀ.ಗೂ ಹೆಚ್ಚು ರಸ್ತೆ ಸಂಪೂರ್ಣವಾಗಿ ಕಚ್ಚಾ ರಸ್ತೆಯಾಗಿದ್ದು, ಹದಗೆಟ್ಟು ಹೋಗಿದೆ. ಈ ರಸ್ತೆಯಲ್ಲಿ ಪ್ರಯಾಣ ಮಾಡುವುದು ಸುಲಭವಲ್ಲ. ದ್ವಿಚಕ್ರ ವಾಹನ ಸವಾರರಂತೂ ರಸ್ತೆಯಲ್ಲಿ ಬಿದ್ದಿರುವ ತಗ್ಗು-ದಿನ್ನೆ ತಪ್ಪಿಸಿ ವಾಹನ ಓಡಿಸಬೇಕಾದರೆ ಅವರು ಪಡುವ ಪಾಡು ಅಷ್ಟಿಷ್ಟಲ್ಲ. ಅದಕ್ಕಾಗಿ ರಸ್ತೆ ದುರಸ್ತಿ ಪಡಿಸುವುದು ಅವಶ್ಯ ಎನ್ನುತ್ತಾರೆ ಕೋತಬಾಳ ಗ್ರಾಮಸ್ಥ ಬಸವರಾಜ ದಿಂಡೂರ. ಮಾಡಲಗೇರಿ ಗ್ರಾಮಸ್ಥರು ಕೋತಬಾಳ ಹಾಗೂ ರೋಣಕ್ಕೆ ಬರಬೇಕಾದರೆ ಹಿರೇಹಾಳ ಮಾರ್ಗವಾಗಿ ಸುತ್ತು ಹಾಕಿ ಬರಬೇಕಾಗುವುದು. ಅದಕ್ಕಾಗಿ ಗ್ರಾಮಸ್ಥರು ನಿತ್ಯ ಕೆಲಸ ಕಾರ್ಯಗಳಿಗೆ ತಾಲೂಕು ಕೇಂದ್ರಕ್ಕೆ ಬರಬೇಕಾದರೆ ಅವರು ಸಮೀಪದ ದಾರಿ ಆಯ್ಕೆ ಮಾಡಿಕೊಂಡು ಕೋತಬಾಳ ಮಾರ್ಗವಾಗಿ ಬರುತ್ತಾರೆ. ಆದರೆ ಇಲ್ಲಿ ರಸ್ತೆ ಸರಿಯಾಗಿಲ್ಲ. ಅದಲ್ಲಿರಯೇ ಬಂದು ಹೋಗಬೇಕಾದ ಅನಿವಾರ್ಯತೆ ಬಂದೊದಗಿದೆ. ರೋಣ ಪಟ್ಟಣದಿಂದ ಕೋತಬಾಳ ಮಾರ್ಗವಾಗಿ ಮಾಡಲಗೇರಿ ಗ್ರಾಮಕ್ಕೆ ಬಂದರೆ ಕೋತಬಾಳ ಮಾರ್ಗವಾಗಿ ಪ್ರಯಾಣಿಸುತ್ತಾರೆ. ಇದರಿಂದ ಸಮಯ ಉಳಿಯುವುದಲ್ಲದೇ ಹಣ ಕೂಡ ಉಳಿತಾಯವಾಗುತ್ತದೆ.

 

•ಯಚ್ಚರಗೌಡ ಗೋವಿಂದಗೌಡ್ರ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.