ಬೊಮ್ಮಾಯಿ ಸರಕಾರದಿಂದ ಅಭಿವೃದ್ಧಿ ಪರ್ವ
ರಾಜ್ಯದಲ್ಲಿ ರೈತರ ಶ್ರೇಯೋಭಿವೃದ್ದಿಗೆ ಸಾಕಷ್ಟು ಯೋಜನೆ ಜಾರಿ: ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ
Team Udayavani, Aug 7, 2022, 3:52 PM IST
ನರಗುಂದ: ಕರ್ನಾಟಕದಲ್ಲಿ ಅಭಿವೃದ್ಧಿ ಪರ್ವವನ್ನೇ ಸೃಷ್ಟಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ, ರೈತರ ಶ್ರೇಯೋಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಲೋಕೋಪ ಯೋಗಿ ಸಚಿವ ಸಿ.ಸಿ.ಪಾಟೀಲ ಹೇಳಿದರು.
ಸಮೀಪದ ಸವದತ್ತಿ ತಾಲೂಕು ಆಚಮಟ್ಟಿ ಗ್ರಾಮದಲ್ಲಿ 11.15 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವರು, ನಂತರ ಗ್ರಾಮದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದರು.
ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ ಸಾಕಷ್ಟು ಸೌಲಭ್ಯಗಳನ್ನು ನೀಡಿದೆ.ನಾನು ಲೋಕೋಪಯೋಗಿ ಸಚಿವನಾದ ಬಳಿಕ ಎಸ್ಸಿಪಿ, ಟಿಎಸ್ಪಿ ಯೋಜನೆಗೆ 950 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಯಾವುದೇ ಅನುದಾನ ಬಿಡುಗಡೆ ಮಾಡಿದರೂ ಅದು ನಿಮ್ಮ ತೆರಿಗೆ ಹಣ ಆಗಿರುತ್ತದೆ. ಆದ್ದರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಅಡೆತಡೆ ಮಾಡದೇ ಗುಣಮಟ್ಟದ ಕಾಮಗಾರಿ ತೆಗೆದುಕೊಳ್ಳಬೇಕೆಂದು ಸಚಿವ ಸಿ.ಸಿ.ಪಾಟೀಲ ಸಾರ್ವಜನಿಕರಿಗೆ ಕರೆ ನೀಡಿದರು.
ನರಗುಂದ ತಾಲೂಕಿನ ನರಗುಂದದ ಹಿರೇಮಠ, ಪತ್ರಿವನಮಠ, ವಿರಕ್ತಮಠ, ಭೈರನಹಟ್ಟಿ ಮಠ, ಹೂಲಿ ಮಠ, ಚುಳಕಿ ಸಿದ್ದರಾಮೇಶ್ವರ ದೇವಸ್ಥಾನ, ಆಚಮಟ್ಟಿ ಉಡಚಾ ಪರಮೇಶ್ವರಿ ದೇವಸ್ಥಾನಗಳಿಗೆ ತಲಾ 1 ಕೋಟಿ ಹಾಗೂ ಕಲ್ಮೇಶ್ವರ ದೇವಸ್ಥಾನಕ್ಕೆ 25 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಸವದತ್ತಿ ತಾಲೂಕಿಗೆ ಲೋಕೋಪಯೋಗಿ ಇಲಾಖೆಯಿಂದ ಇನ್ನೂ 25 ರಿಂದ 30 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಸಚಿವ ಸಿ.ಸಿ.ಪಾಟೀಲ ಭರವಸೆ ನೀಡಿದರು.
ಸ್ಥಳದಲ್ಲಿದ್ದ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಅವರ ಕೋರಿಕೆಯಂತೆ ಯರಗಟ್ಟಿಯಿಂದ ಮುನವಳ್ಳಿ, ನರಗುಂದ, ಯಾವಗಲ್ಲ, ಗಜೇಂದ್ರಗಡ ಮಾರ್ಗವಾಗಿ ಕುಷ್ಟಗಿ ರಸ್ತೆ ಮರು ಡಾಂಬರೀಕರಣ ಕಾಮಗಾರಿಯನ್ನು ಈ ವರ್ಷ ಕೈಗೆತ್ತಿಕೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಅವರು ಮಾತನಾಡಿ, ಸವದತ್ತಿ ಮಹಾನಗರಕ್ಕೆ ಕುಡಿಯುವ ನೀರಿನ ಯೋಜನೆಗಾಗಿ 100 ಕೋಟಿ ರೂ. ವೆಚ್ಚದ ಬೃಹತ್ ಅನುದಾನವನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದ್ದಾರೆ. ಪ್ರಧಾನಮಂತ್ರಿಗಳ ಸಾಕಷ್ಟು ಯೋಜನೆಗಳನ್ನು ನಮ್ಮ ರಾಜ್ಯ ಸರ್ಕಾರ ಜಾರಿಗೊಳಿಸಿದೆ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ಜಮಖಂಡಿ, ಉಪಾಧ್ಯಕ್ಷ ಮಹಾಂತೇಶ ರಾಯನಗೌಡ್ರ, ಅಣ್ಣಪ್ಪಗೌಡ ಪಾಟೀಲ, ಕಾರ್ಯನಿರ್ವಾಹಕ ಅಭಿಯಂತರ ಎಸ್.ಎಸ್.ಸೊಬರದ ವೇದಿಕೆಯಲ್ಲಿದ್ದರು. ಗುತ್ತಿಗೆದಾರ ಬಿ.ಎಂ.ಪಾಟೀಲ ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.
ಸನ್ಮಾನ: ಕಾರ್ಯಕ್ರಮದಲ್ಲಿ ನರಗುಂದ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷ ಉಮೇಶಗೌಡ ಸಿ. ಪಾಟೀಲ ಅವರನ್ನು ಸಚಿವರ ಹುಟ್ಟೂರಾದ ಆಚಮಟ್ಟಿ ಗ್ರಾಮಸ್ಥರು ಸತ್ಕರಿಸಿದರು. ವಿವಿಧ ಕಾಮಗಾರಿಗೆ ಭೂಮಿಪೂಜೆ ಸವದತ್ತಿ ರಾಜ್ಯ ಹೆದ್ದಾರಿಯ ಅಚಮಟ್ಟಿ ಕ್ರಾಸ್ ನಿಂದ ಚುಳಕಿ ಗ್ರಾಮದವರೆಗೆ 9.90 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಮರು ಡಾಂಬರೀಕರಣ, 1 ಕೋಟಿ ರೂ. ವೆಚ್ಚದಲ್ಲಿ ಉಡಚಮ್ಮ ದೇವಸ್ಥಾನ ಜೀರ್ಣೋದ್ಧಾರ, 25 ಲಕ್ಷ ವೆಚ್ಚದಲ್ಲಿ ಕಲ್ಮೇಶ್ವರ ದೇವಸ್ಥಾನ ಜೀರ್ಣೋದ್ಧಾರ ಕಾಮಗಾರಿಗೆ ಸಚಿವ ಸಿ.ಸಿ.ಪಾಟೀಲ ಭೂಮಿಪೂಜೆ ನೆರವೇರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ