ಇಂದೋ, ನಾಳೆಯೋ ಬೀಳ್ಳೋ ಭೀತಿ


Team Udayavani, Oct 22, 2019, 1:57 PM IST

gadaga-tdy-1

ಗದಗ: ಎಲ್ಲೆಂದರಲ್ಲಿ ಬಿರುಕು ಬಿಟ್ಟ ಗೋಡೆಗಳು.. ಮೂಲೆ ಸೇರಿದ ಹೊಸ ಪುಸ್ತಕ ಮೂಟೆಗಳು..ಕುರ್ಚಿ ಇದ್ದರೂ ಇಡಲು ಜಾಗವಿಲ್ಲ..ಇದ್ದ ಪುಸ್ತಕಗಳ ರಕ್ಷಣೆಗೆ ನಿತ್ಯ ಹರಸಾಹಸ ಪಡಬೇಕಾದ ದುಸ್ಥಿತಿ.. ಓದುಗರ ಮೇಲೆ ಕಟ್ಟಡ ಚಾವಣಿ ಯಾವಾಗ ಬೀಳುತ್ತದೆಯೋ ಭಯದ ಸ್ಥಿತಿ.

ಇದು ತಾಲೂಕಿನ ಅಂತೂರ-ಬೆಂತೂರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿರುವ ಕೇಂದ್ರ ಗ್ರಂಥಾಲಯದ ಇಂದಿನ ಪರಿಸ್ಥಿತಿ.

ಸಂಸದರ ಅನುದಾನದಲ್ಲಿ ಕಟ್ಟಡ: ಅಂತೂರ-ಬೆಂತೂರ ಗ್ರಾಮದ ಅನ್ನದಾನೇಶ್ವರ ಮಠದಲ್ಲಿ 1993-94ರಲ್ಲಿ ಕೇಂದ್ರ ಗ್ರಂಥಾಲಯ ಆರಂಭಗೊಂಡಿದೆ. ಅಂದಿನ ಸಂಸದ ವಿಜಯ ಸಂಕೇಶ್ವರ ಅವರ ಅನುದಾನದಲ್ಲಿ 2000ರಲ್ಲಿ ಗ್ರಾಮದ ಶಾಲೆ ಆವರಣದಲ್ಲಿ ನಿರ್ಮಿಸಿದ ಕಟ್ಟಡಕ್ಕೆ ಸ್ಥಳಾಂತರಗೊಂಡಿದೆ. ಆದರೆ ಕಾಲಂ ಇಲ್ಲದೆ ಕಟ್ಟಡ ನಿರ್ಮಾಣ ಮತ್ತು ನಿರ್ವಹಣೆ ಕೊರತೆಯಿಂದ ಕೇವಲ 20 ವರ್ಷದಲ್ಲೇ ಗ್ರಂಥಾಲಯ ಕಟ್ಟಡ ಶಿಥಿಲಾವಸ್ಥೆಗೊಂಡಿದೆ. ಗ್ರಂಥಾಲಯ ಕಟ್ಟಡದಲ್ಲಿ ಎರಡು ಕೊಠಡಿಗಳಿದ್ದು, ಒಂದರಲ್ಲಿ ಪುಸ್ತಕಗಳನ್ನು ಇಡಲಾಗಿದೆ.

ಮತ್ತೂಂದರಲ್ಲಿ ಪುಸ್ತಕ ಮತ್ತು ದಿನಪತ್ರಿಕೆ ಓದಲು ಟೇಬಲ್‌, ಕುರ್ಚಿ ಹಾಕಲಾಗಿದೆ. ಆದರೆ, ಕಟ್ಟಡದ ಎಲ್ಲ ಗೋಡೆಗಳು ಎಲ್ಲೆಂದರಲ್ಲಿ ಬಿರುಕು ಬಿಟ್ಟಿವೆ. ಮಳೆ ನೀರಿಗೆ ನೆನೆದ ಗೋಡೆಗಳು ಶಿಥಿಲಗೊಂಡಿವೆ. ಇದರಿಂದ ಪುಸ್ತಕಗಳ ರಕ್ಷಣೆಯೇ ದೊಡ್ಡ ಸವಾಲಾಗಿದೆ. ಕಟ್ಟಡದ ನೆಲಹಾಸು ಹಾಳಾಗಿದ್ದು, ಕುರ್ಚಿಗಳನ್ನು ಮೂಲೆಯಲ್ಲಿಡಲಾಗಿದೆ. ಇದರಿಂದ ಕೆಲ ವೇಳೆ ಓದುಗರು ಸ್ಥಳದ ಅಭಾವ ಎದುರಿಸುವಂತಾಗಿದೆ.

364 ಜನ ಸದಸ್ಯರು: ಸುಮಾರು 10 ಸಾವಿರ ಜನಸಂಖ್ಯೆ ಹೊಂದಿರುವ ಈ ಗ್ರಾಮದಲ್ಲಿ ಗ್ರಂಥಾಲಯ ಆರಂಭಗೊಂಡ ಮೊದ-ಮೊದಲು ಓದುಗರ ಸಂಖ್ಯೆ ಅಧಿಕವಾಗಿತ್ತು. ಈಚೆಗೆ ಓದುಗರ ಸಂಖ್ಯೆ ಕ್ಷೀಣಿಸಿದರೂ ಗ್ರಂಥಾಲಯ ಸದಸ್ಯರ ಪ್ರಮಾಣ ಹೆಚ್ಚುತ್ತಲೇ ಇದೆ. ಸದ್ಯ 364 ಜನರು ಸದಸ್ಯತ್ವ ಪಡೆದಿದ್ದು, 15 ದಿನಕ್ಕೊಮ್ಮೆ ಪುಸ್ತಕ ವಿನಿಮಯ ಮಾಡಿಕೊಳ್ಳುತ್ತಾರೆ. ನಿತ್ಯ 80-100 ಜನ ಓದುಗರು ಗ್ರಂಥಾಲಯಕ್ಕೆ ಬರುತ್ತಾರೆ.

 

3500ಕ್ಕೂ ಹೆಚ್ಚು ಪುಸ್ತಕ ಇವೆ: ಈ ಗ್ರಂಥಾಲಯದಲ್ಲಿ 3500ಕ್ಕೂ ಹೆಚ್ಚು ಪುಸ್ತಕಗಳು ಇವೆ. ನಿತ್ಯ ಮೂರು ದಿನಪತ್ರಿಕೆಗಳು, ರಾಜ್ಯ ಸರ್ಕಾರದ ಮಾಸ ಪತ್ರಿಕೆ (ಜನಪದ, ಕರ್ನಾಟಕ ವಿಕಾಸ) ಓದಲು ದೊರೆಯುತ್ತವೆ. ಪ್ರಸಕ್ತ ವರ್ಷ 500 ಹೊಸ ಪುಸ್ತಕಗಳನ್ನು ಸಾರ್ವಜನಿಕ ಗ್ರಂಥಾಲಯ ಇಲಾಖೆ ಪೂರೈಸಿದೆ. ಆದರೆ, ಸ್ಥಳದ ಅಭಾವದಿಂದ ಮೂಲೆ ಸೇರಿವೆ.

ತಿಂಗಳಿಗೆ 400 ರೂ. ಸಹಾಯಧನದಲ್ಲೇ ಕೆಲ ದಿನಪತ್ರಿಕೆ ಮತ್ತು ಮಾಸಿಕ ಪತ್ರಿಕೆಗಳನ್ನು ತರಿಸಲಾಗುತ್ತಿದೆ. ಕೆಲ ಯುವಕರು ಸ್ಪರ್ಧಾತ್ಮಕ ಪತ್ರಿಕೆಗಳನ್ನು ಕೇಳುತ್ತಾರೆ. ಒದಗಿಸಲು ಆಗುತ್ತಿಲ್ಲ. ಇನ್ನು ಗ್ರಂಥಾಲಯ ಕಟ್ಟಡದ ದುರಸ್ತಿಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮತ್ತು ಗ್ರಾಪಂ ಕಚೇರಿಗೆ ಮನವಿ ಸಲ್ಲಿಸಲಾಗಿದೆ. ಪ್ರಯೋಜನವಾಗಿಲ್ಲ. ಬೂದೇಶ ಗುಡಿಸಲಕೊಪ್ಪ, ಗ್ರಂಥಾಲಯ ಮೇಲ್ವಿಚಾರಕ

 

-ಶರಣು ಹುಬ್ಬಳ್ಳಿ

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.