ಹದಗೆಟ್ಟ ರಸ್ತೆಯಲ್ಲಿ ಸಂಚಾರ ಅಯೋಮಯ


Team Udayavani, Dec 13, 2019, 5:28 PM IST

gadaga-tdy-1

ನರೇಗಲ್ಲ: ಅಬ್ಬಿಗೇರಿ ಗ್ರಾಮದಿಂದ ಡ.ಸ. ಹಡಗಲಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗ ಕಳೆದ ಹತ್ತಾರು ದಶಕಗಳಿಂದ ಡಾಂಬರೀಕರಣ ಆಗದೇ ಕಲ್ಲು, ಮಣ್ಣಿನಿಂದ ಕೂಡಿದ ರಸ್ತೆಯಲ್ಲೇ ಸಾರ್ವಜನಿಕರು ಓಡಾಡುವ ಸ್ಥಿತಿ ನಿರ್ಮಾಣ ಆಗಿದೆ.

ಅಬ್ಬಿಗೇರಿ ಗ್ರಾಮದಿಂದ ಡ.ಸ. ಹಡಗಲಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ 15 ಕಿ.ಮೀ ರಸ್ತೆ ಸಂಪೂರ್ಣ ನಾಶವಾಗಿದೆ. ಈ ಬಗ್ಗೆ ಯಾವ ಜನಪ್ರತಿನಿಧಿ ಗಳೂಗಮನ ಹರಿಸಿಲ್ಲ. ಪ್ರತಿ ದಿನ ಈ ರಸ್ತೆಯಲ್ಲಿ ಓಡಾಡುವನೂರಾರು ವಾಹನ ಸವಾರರು ಇಲಾಖೆಗೆ ಹಿಡಿಶಾಪ ಹಾಕುತ್ತಿದ್ದಾರೆ. 20ರಿಂದ 25 ನಿಮಿಷದಲ್ಲಿ ತಲುಪುವ ಜಾಗಕ್ಕೆ ಈ ರಸ್ತೆಯಲ್ಲಿ ತೆರಳಿದರೆ ಕನಿಷ್ಠ ಒಂದು ಗಂಟೆ ಸಮಯ ಬೇಕಾಗುತ್ತದೆ. ಸರ್ಕಾರ ಮಾತ್ರ ಗ್ರಾಮೀಣ ಭಾಗದ ರಸ್ತೆಗಳಿಗೆ ನೂರಾರು ಕೋಟಿ ಖರ್ಚು ಮಾಡುತ್ತಿದ್ದರೂ ಈ ರಸ್ತೆ ಮೋಕ್ಷ ಕಂಡಿಲ್ಲ.

ಹೋಬಳಿಗೆ ಸಂಪರ್ಕ ರಸ್ತೆ: ರೈತ ಸಂಪರ್ಕ ಕೇಂದ್ರವನ್ನು ಹೊಂದಿರುವ ನರೇಗಲ್ಲ ಹೋಬಳಿ ಕೇಂದ್ರಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆ ಇದಾಗಿದೆ. ಡ.ಸ. ಹಡಗಲಿಯಿಂದ ನರೇಗಲ್ಲಿಗೆ ಕೇವಲ 15 ಕಿ.ಮೀ ಅಂತವಿದೆ. ಆದರೆ ಈ ರಸ್ತೆ ಸಂಪೂರ್ಣ ಹದಗೆಟ್ಟ ಪರಿಣಾಮ ರೋಣ ಅಥವಾ ಗದಗ ಮಾರ್ಗವಾಗಿ ಸುಮಾರು 40 ಕಿ.ಮೀ ಸುತ್ತಿ ಬಳಸಿ ನರೇಗಲ್ಲಿಗೆ ಬರುವುದು ಅನಿವಾರ್ಯವಾಗಿದೆ. ಈ ಮಾರ್ಗವಾಗಿ ಬಸ್‌ ಸಂಚಾರ ಇಲ್ಲದ ಪರಿಣಾಮವಾಗಿ ಬಹುತೇಕರು ದ್ವಿಚಕ್ರ ವಾಹನ ಹಾಗೂ ಟಂಟಂ ವಾಹನಗಳ ಮೂಲಕ ಈ ರಸ್ತೆಯಲ್ಲಿ ಸಂಚರಿಸುತ್ತಾರೆ. ಕಳೆದ ವರ್ಷದ ಹಿಂದೆ ನಿರ್ಮಿಸಲಾಗಿದ್ದ ಸೇತುವೆ ಮತ್ತೆ ಕಿತ್ತು ಹೋಗಿರುವುದರಿಂದ ಟಂಟಂ, ಕಾರ್‌ ಸಂಚರಿಸಲು ಸಾಧ್ಯವಾಗುತ್ತಿಲ್ಲ. ಕೇವಲ ಬೈಕ್‌ ಸವಾರರು ಜೀವ ಕೈಯಲ್ಲಿ ಹಿಡಿದುಕೊಂಡು ಸಾಗುವ ಸ್ಥಿತಿ ಉದ್ಭವಿಸಿದೆ.

ಹಿಂಗಾರು ಹಂಗಾಮಿನಲ್ಲಿ ಈ ಭಾಗದ ಜಮೀನುಗಳಲ್ಲಿ ಉತ್ತಮ ಫಸಲು ಇರುವುದರಿಂದ ರೈತರು ಬೆಳಗ್ಗಿನ ಜಾವ ತಾವು ಬೆಳೆದ ಬೆಳೆಗಳಿಗೆ ಔಷಧಿ ಸಿಂಪಡಿಸುವ ಕಾರ್ಯಕ್ಕೆ ಹೆಚ್ಚು ಹೋಗುತ್ತಿದ್ದು, ಅಲ್ಲದೇ ಜಮೀನುಗಳಲ್ಲಿ ಕಸ ಬಹಳ ಇರುವುದರಿಂದ ಬೇರೆ ಬೇರೆ ಗ್ರಾಮಗಳಿಂದ ಕೃಷಿ ಕಾರ್ಮಿಕರನ್ನು ಕರೆದುಕೊಂಡು ಬಂದು ಕಸ ತೆಗೆಯುವ ಕೆಲಸಕ್ಕೆ ಮುಂದಾಗಿರುವ ರೈತರಿಗೆ ಈ ರಸ್ತೆ ಹಾಗೂ ಕಿತ್ತು ಹೋದ ಸೇತುವೆ ಸಂಕಷ್ಟ ತಂದಿದೆ. ಕೃಷಿ ಮಹಿಳೆಯರು ಈ ರಸ್ತೆಯಲ್ಲಿ ಕೆಲಸಕ್ಕೆ ಬರುವುದಕ್ಕೆ ಹಿಂದೆಟ್ಟು ಹಾಕುತ್ತಿದ್ದಾರೆ.

 

-ಸಿಕಂದರ ಆರಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.