ಕಡಲೆ-ಜೋಳಕ್ಕೆ  ರೋಗಬಾಧೆ 


Team Udayavani, Dec 13, 2018, 3:56 PM IST

13-december-19.gif

ಗಜೇಂದ್ರಗಡ: ಹಿಂಗಾರು ಹಂಗಾಮಿನ ಕಡಲೆ ಮತ್ತು ಜೋಳ ಬೆಳೆಗಳು ಫಸಲು ಹಂತಕ್ಕೆ ಬಂದಿರುವ ಸಮಯದಲ್ಲಿ ಕಾಯಿಕ ಕೊರಕ ರೋಗ ಕಾಣಿಸಿಕೊಂಡಿದ್ದು, ಕೈಗೆ ಬಂದು ತುತ್ತು ಬಾಯಿಗೆ ಬಾರದಂತ ಪರಿಸ್ಥಿತಿ ಗಜೇಂದ್ರಗಡ ತಾಲೂಕಿನ ರೈತರದ್ದಾಗಿದೆ. ಮಳೆ ಹಾಗೂ ತೇವಾಂಶ ಕೊರತೆಯಿಂದ ಬೆಳೆಗಳಿಗೆ ಕಾಯಿಕ ರೋಗ ಕಾಣಿಸಿಕೊಂಡಿದೆ. ಬೆಳೆಗಳನ್ನು ರಕ್ಷಿಸಿಕೊಳ್ಳಲು ಅನಿವಾರ್ಯವಾಗಿ ಕ್ರಿಮಿನಾಶಕ ಸಿಂಪಡಣೆಯಲ್ಲಿ ತೊಡಗಿರುವ ದೃಶ್ಯ ಸಾಮಾನ್ಯವಾಗಿದೆ.

ಮುಂಗಾರು ಹಂಗಾಮು ಬೆಳೆ ಕೈಕೊಟ್ಟಿತ್ತು. ಹಿಂಗಾರು ಹಂಗಾಮಿನ ಮಳೆ ಆಶ್ರಿತ ಎರಿ(ಕಪ್ಪು) ಭೂಮಿಯಲ್ಲಿ ರೈತರಯ ಅಣ್ಣಿಗೇರಿ ತಳಿಯ ಕಡಲೆ ಮತ್ತು ಜೋಳ ಬೀಜಗಳನ್ನು ಬಿತ್ತನೆ ಮಾಡಿದ್ದರು. ಅಲ್ಪಸಲ್ಪ ಹಿಂಗಾರು ಮಳೆಯಾಗಿತ್ತು. ಇದಲ್ಲದೆ ಇರುವ ಚಳಿಗಾಲದ ಹಿಬ್ಬನಿಯ ತೇವಾಂಶದಿಂದ ಬೆಳೆಗಳು ಹಸಿರಾಗಿದ್ದು, ಉತ್ತಮ ಇಳುವರಿ ನಿರೀಕ್ಷಿಸಲಾಗಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಕಾಣಿಸಿಕೊಂಡ ಕಾಯಿಕೊರಕ ರೋಗದಿಂದ ಇಳುವರಿ ಕ್ಷೀಣಬಹುದಾಗಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಬೆಳೆಯಲ್ಪಡುವ ಜೋಳ ಈ ಬಾರಿ 1,69,00 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಕಡಲೆ 63,615 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. ಬೆಳೆಗಳಿಗೆ ಕಾಯಿಕೊರಕ ರೋಗ ಕಾಣಿಸಿಕೊಂಡಿದ್ದು, ಕೃಷಿ ತಜ್ಞರ ಸಲಹೆ ಮೇರೆಗೆ ಔಷಧಗಳನ್ನು ಸಿಂಪಡಿಸಿ ರೋಗಬಾಧೆ ಹತೋಟಿಗೆ ತರಲು ಯತ್ನಿಸಲಾಗುತ್ತಿದೆ ಎಂದು ರೈತರು ತಿಳಿಸುತ್ತಾರೆ. 

ದೇಶ-ವಿದೇಶದಲ್ಲೂ ಬೇಡಿಕೆ 
ಸೂಡಿ, ಕಳಕಾಪುರ, ದಿಂಡೂರ, ಕೊಡಗಾನೂರ, ರಾಜೂರ, ನೆಲ್ಲೂರ, ನಿಡಗುಂದಿ, ಹಾಳಕೇರಿ, ಜಕ್ಕಲಿ, ನೇರೆಗಲ್‌, ರೋಣ, ಇಟಗಿ, ಪ್ಯಾಟಿ, ಬೇವಿನಕಟ್ಟಿ, ಇನ್ನಿತರ ಗ್ರಾಮಗಳಲ್ಲಿ ಬೆಳೆಯುವ ಅಣ್ಣಿಗೇರಿ ತಳಿಯ ಕಡಲೆ ಕಾಳುಗಳಿಗೆ ದೇಶ, ವಿದೇಶಗಳಲ್ಲೂ ಭಾರಿ ಬೇಡಿಕೆ ಇದೆ. ಗದುಗಿನ ಕೃಷಿ ಮಾರುಕಟ್ಟೆಯಿಂದ ಕಡಲೆ ಹೊರ ದೇಶಗಳಿಗೂ ರವಾನೆಯಾಗುತ್ತದೆ. 

ಹಿಂಗಾರಿ ಜೋಳ, ಕಡಲೆ ಬೆಳಿ ಬೆಳದ ನಿಂತಾವ್ರಿ. ಆದ್ರ ಬೆಳೆಗೆ ಕೀಟಬಾಧೆ ಕಾಟ ಶುರುವಾಗೈತ್ರಿ. ಭೂ ತಾಯಿ ತನ್ನ ಮಕ್ಕಳನ್ನ ಎಂದೆಂದಿಗೂ ಕೈಬಿಡುವದಿಲ್ಲಾ. ನಮ್ಮ ಬದುಕು ಹಸನಾಗಿಸುತ್ತಾಳೆ ಅನ್ನುವ ಖಾತ್ರಿ ಐತ್ರಿ.
 ಕಳಕಪ್ಪ ಕುಂಬಾರ, ಜೋಳ, ಕಡಲೆ ಬೆಳೆದ ರೈತ

ಪ್ರಸಕ್ತ ಬಾರಿ ತಾಲೂಕಿನಲ್ಲಿ ಜೋಳ ಮತ್ತು ಕಡಲೆ ಸೇರಿ ಒಟ್ಟು 80,515 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಬೆಳೆಗಳಿಗೆ ಕೀಟಭಾದೆ ತಗುಲುವುದು ಸಾಮಾನ್ಯ. ರೈತರು ಇಮಾಮೆಟಿನ್‌ ಬೆಂಜಿವೆಟ್‌ ಮತ್ತು ಕ್ಲೋರೊಪರಿಪಾಸ್‌ ರಾಸಾಯನಿಕ ಸಿಂಪಡಿಸಲು ಮುಂದಾಗಬೇಕು. ರೈತ ಸಂಪರ್ಕ ಕೇಂದ್ರದಲ್ಲಿ ಕ್ರಿಮಿನಾಶಕ ದಾಸ್ತಾನು ಸಂಗ್ರಹಿಸಿ ರೈತರಿಗೆ ವಿತರಿಸಲಾಗುತ್ತಿದೆ.
ಸಿದ್ದೇಶ ಕೋಡಳ್ಳಿ, ಸಹಾಯಕ ಕೃಷಿ ನಿರ್ದೆಶಕ.

„ಡಿ.ಜಿ. ಮೋಮಿನ್‌

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.