ಹೆಸರು ಬೆಳೆಗೆ ರೋಗ ಬಾಧೆ ರೈತ ಕಂಗಾಲು

ಜಿಲ್ಲೆಯ ಹೆಸರು ಬೆಳೆಯ ಶೇ.5 ಭಾಗದಲ್ಲಿ ಹಳದಿ ನಂಜಾಣು ರೋಗ ; ತೇವಾಂಶ ಹೆಚ್ಚಿರುವ ಕಡೆ ಕೈಕೊಟ್ಟ ಹೆಸರು ಬೆಳೆ

Team Udayavani, Jul 25, 2022, 3:36 PM IST

13

ಗದಗ: ನಿರಂತರ ಮಳೆ, ಮೋಡ ಮುಸುಕಿದ ವಾತಾವರಣದ ಹಿನ್ನೆಲೆಯಲ್ಲಿ ಜಿಲ್ಲೆಯ ಹೆಸರು ಬೆಳೆಗೆ ಹಳದಿ ನಂಜಾಣು ರೋಗ ವ್ಯಾಪಿಸುತ್ತಿದ್ದು, ರೈತರು ಕಂಗಾಲಾಗಿದ್ದಾರೆ.

ಕೃಷಿ ಇಲಾಖೆ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ 1.20 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಹೆಸರು ಬೆಳೆ ಬಿತ್ತನೆಯಾಗಿದೆ. ಆ ಪೈಕಿ ಬಿತ್ತನೆಯ ಶೇ. 5ರಷ್ಟು ಭಾಗದಲ್ಲಿ ಹಳದಿ ನಂಜಾಣು ರೋಗ ಕಾಣಿಸಿಕೊಂಡಿದೆ. ಕಳೆದ ಸಾಲಿನ ಮಂಗಾರು ಅವಧಿ ಯಲ್ಲಿ ಉತ್ತಮ ಅನುಕೂಲಕರ ವಾತಾವರಣವಿದ್ದ ಕಾರಣ ಕಡಿಮೆ ಪ್ರಮಾಣದಲ್ಲಿ ಹಳದಿ ನಂಜಾಣು ರೋಗ ಕಾಣಿಸಿಕೊಂಡಿತ್ತು. ಈ ಬಾರಿ ಪ್ರತಿಕೂಲ ವಾತಾವರಣದಿಂದ ಹೆಸರು ಬೆಳೆ ಹಳದಿ ರೋಗಕ್ಕೆ ತುತ್ತಾಗಿ ರೈತರ ಮೊಗದಲ್ಲಿ ನಂಜು ಆವರಿಸಿದಂತಾಗಿದೆ.

ಜಿಲ್ಲೆಯ ನರಗುಂದ ಹಾಗೂ ಶಿರಹಟ್ಟಿ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗ ಕಾಣಿಸಿಕೊಂಡಿದೆ. ಗದಗ ಹಾಗೂ ರೋಣ ಭಾಗದಲ್ಲಿ ಹೆಸರು ಬೆಳೆ ಉತ್ತಮವಾಗಿದ್ದರೂ ತೇವಾಂಶ ಹೆಚ್ಚಿರುವ ಕಡೆಗಳಲ್ಲಿ ಹೆಸರು ಬೆಳೆ ಕೈಕೊಟ್ಟಿದೆ.

ಗದಗ ತಾಲೂಕಿನ ಹರ್ಲಾಪೂರ, ಲಕ್ಕುಂಡಿ, ತಿಮ್ಮಾಪೂರ, ಕಣಗಿನಹಾಳ, ಹಾತಲಗೇರಿ ಗ್ರಾಮಗಳ ಭಾಗದಲ್ಲಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಶೇಂಗಾ, ಹೆಸರು ಬೆಳೆಗಳಿಗೆ ಹಳದಿ ನಂಜಾಣು ರೋಗ ಅಂಟಿಕೊಂಡಿದ್ದು, ರೈತ ಸಮೂಹ ಕಂಗಾಲಾಗಿದೆ. ಈ ವರ್ಷ ವಾಡಿಕೆಗಿಂತ ಹೆಚ್ಚಾಗಿ ಮುಂಗಾರು ಮಳೆಯಾಗಿದ್ದು, ಹೆಸರು, ಶೇಂಗಾ ಉಷ್ಣಾಂಶದ ಕೊರತೆಯಿಂದ ಹಳದಿ ನಂಜಾಣು ರೋಗ ಅಧಿ ಕವಾಗಿ ಬೆಳೆಗಳು ನಾಶವಾಗುತ್ತಿವೆ. ಸಾವಿರಾರು ರೂ. ಖರ್ಚು ಮಾಡಿದರೂ ರೋಗ ಹತೋಟಿಗೆ ಬರುತ್ತಿಲ್ಲ ಎಂದು ರೈತರು ಗೋಳಾಡುತ್ತಿದ್ದಾರೆ.

 

ಕೊರಕ ಹುಳು-ಕೀಡೆಯಿಂದ ಬೆಳೆ ನಾಶ

ರೈತರು ಸಾಲ ಮಾಡಿ ಹೆಸರು, ಶೇಂಗಾ ಬಿತ್ತನೆ ಮಾಡಿದ್ದಾರೆ. ಆದರೆ, ಕೊರಕ ಹುಳು ಹಾಗೂ ಕೀಡೆಗಳು ಉತ್ಪತ್ತಿಯಾಗಿ ಬೆಳೆ ಹೂವು ಕಾಯಿ ಬಿಡುವ ಮುನ್ನ ಕಾಂಡ ಮತ್ತು ಎಲೆಗಳನ್ನು ತಿಂದು, ಎಲೆಗಳ ಮೇಲೆ ಮೊಟ್ಟೆಗಳು ಉತ್ಪತ್ತಿಯಾಗಿ ಎಲೆಗಳು ರಂಧ್ರ ಬಿದ್ದು ಬೆಳೆಯನ್ನು ನಾಶಪಡಿಸುತ್ತಿವೆ ಎಂದು ಕಣಗಿನಹಾಳ ರೈತರಾದ ಬಾಲರಾಜ್‌ ಹುಯಿಲಗೋಳ, ಸಿದ್ದಪ್ಪ ಪಾಟೀಲ, ರಾಮಣ್ಣ ಖಂಡ್ರಿ ಅವರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ರೋಗ ಹತೋಟಿಗೆ ಕ್ರಮ

ಹೆಸರು ಬೆಳೆಯ ಎಲೆಗಳು ಹಳದಿಯಾಗಿ ಗಿಡಗಳು ಒಣಗಲು ಆರಂಭಿಸಿದರೆ ಇಳುವರಿ ಕುಂಠಿತಗೊಳ್ಳುತ್ತದೆ. ಎಲೆಗಳು ಹಳದಿ ಬಣ್ಣಕ್ಕೆ ತಿರುಗುವಾಗ ಕೂಡಲೇ ನಂಜು ಬಾತ ಹೆಸರು ಗಿಡಗಳನ್ನು ಕಿತ್ತು ಹಾಕಬೇಕು. ಪ್ರತಿ ಲೀಟರ್‌ ನೀರಿಗೆ 3 ಗ್ರಾಂ 13:0:45 ಪೊಟ್ಯಾಷಿಯಂ ನೈಟ್ರೇಟ್‌ ರಸಗೊಬ್ಬರವನ್ನು ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು. ಜೊತೆಗೆ 0.3 ಗ್ರಾಂ ಅಸಿಟಮಾಪ್ರಿಡ್‌ ಅಥವಾ 0.3 ಗ್ರಾಂ ಫಿಪ್ರೋನಿಲ್‌ ಕೀಟನಾಶಕ ಸಿಂಪಡಿಸಬೇಕು. ಇದರಿಂದ ಹಳದಿ ನಂಜಾಣು ರೋಗ ಹತೋಟಿಗೆ ಬರಲು ಸಾಧ್ಯ ಎಂದು ಕೃಷಿ ಇಲಾಖೆ ತಿಳಿಸಿದೆ.

 

ಹೆಸರು ಹಾಗೂ ಶೇಂಗಾ ಬೆಳೆಗಳು ಪ್ರತಿ ವರ್ಷ ಯಾವುದೇ ಕೀಟನಾಶಕ ಸಿಂಪಡಣೆ ಮಾಡದೆ ಬೆಳೆ ಬರುತ್ತಿತ್ತು. ಆದರೆ, ಈ ವರ್ಷ ಗಾಯದ ಮೇಲೆ ಬರೆ ಎಂಬಂತೆ, ಸಾವಿರಾರು ರೂ. ಖರ್ಚು ಮಾಡಿದರೂ ರೋಗ ಹತೋಟಿಗೆ ಬರುತ್ತಿಲ್ಲ. ಆದ್ದರಿಂದ ಸಂಬಂಧಪಟ್ಟ ಕೃಷಿ ಅಧಿ ಕಾರಿಗಳು ರೈತರ ಜಮೀನಿಗೆ ಭೇಟಿ ನೀಡಿ ರೋಗದ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು. ಅಲ್ಲದೇ, ಬೆಳೆ ಹಾನಿಯ ಬಗ್ಗೆ ಸರಕಾರಕ್ಕೆ ವರದಿ ನೀಡಬೇಕು. –ಯಲ್ಲಪ್ಪ ಬಾಬರಿ, ಜಿಲ್ಲಾಧ್ಯಕ್ಷ, ರೈತ ಸಂಘ-ಹಸಿರು ಸೇನೆ (ವಿ.ಆರ್‌. ನಾರಾಯಣ ರೆಡ್ಡಿ ಬಣ)

ಜಿಲ್ಲೆಯ ವಿವಿಧೆಡೆ ಹೆಸರು ಬೆಳೆಗೆ ತಗುಲಿರುವ ಹಳದಿ ನಂಜಾಣು ರೋಗ ನಿಯಂತ್ರಣಕ್ಕೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ರೈತರು ಕೃಷಿ ಇಲಾಖೆ ಸೂಚಿಸಿದ ಹೆಸರು ಬೆಳೆಯ ಹಳದಿ ನಂಜು ರೋಗದ ನಿರ್ವಹಣೆ ಕ್ರಮಗಳನ್ನು ಪಾಲಿಸುವುದರ ಮೂಲಕ ಹಳದಿ ರೋಗ ಹತೋಟಿಗೆ ಮುಂದಾಗಬೇಕು. –ಜಿಯಾವುಲ್ಲಾ ಕೆ. ಜಂಟಿ ಕೃಷಿ ನಿರ್ದೇಶಕರು

-ಅರುಣ ಕುಮಾರ ಹಿರೇಮಠ

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.