ತಾಪಂ ಇಒ ವಿರುದ್ಧ ಅಸಮಾಧಾನ


Team Udayavani, Dec 18, 2019, 1:17 PM IST

gadaga-tdy-3

ರೋಣ: ತಾಲೂಕಿನ 35 ಗ್ರಾಮ ಪಂಚಾಯತ್‌ ಗಳಲ್ಲಿ ನಡೆದ ಜಮಾಬಂಧಿ ಸಭೆಗಳಲ್ಲಿ ಇಲ್ಲಿಯವರೆಗೆ ಕೋರಂ ಭರ್ತಿಯಾಗುತ್ತಿಲ್ಲ. ಯಾವುದೇ ದಿನಪತ್ರಿಕೆಯಲ್ಲಿ ಪ್ರಕಟಣೆ ನೀಡುತ್ತಿಲ್ಲ. ಕಾನೂನು ಬಾಹಿರವಾಗಿ ಗ್ರಾಪಂ ಅಧಿಕಾರಿಗಳು ಸಭೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ನೋಡಲ್‌ ಅಧಿಕಾರಿಯನ್ನು ಸಭೆಗೆ ಕರೆಯದೆ, ತಾವೇ ಮಾಡಿಕೊಂಡ ಜಮಾಬಂಧಿ ವರದಿ ತಾಪಂಗೆ ಸಲ್ಲಿಸುತ್ತಾರೆ. ಅಂತಹ ವರದಿ ನೀವೇಕೆ ಸ್ವೀಕಾರ ಮಾಡುತ್ತಿರಿ. ಇದರಲ್ಲಿ ನೀವು ಕೂಡಾ ಭಾಗಿಯಾಗಿದ್ದಿರಾ? ಇಲ್ಲವಾದರೆ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ತಾಪಂ ಸದಸ್ಯ ಪ್ರಭು ಮೇಟಿ ತಾಪಂ ಇಒ ಅವರನ್ನು ತರಾಟೆಗೆ ತೆಗೆದುಕೊಂಡರು. ಪಟ್ಟಣದ ತಾಪಂ ಸಭಾಭವನದಲ್ಲಿ ಮಂಗಳವಾರ ಜರುಗಿದ ತಾಪಂ ಸಾಮಾನ್ಯ ಸಭೆಯಲ್ಲಿ ವಿವಿಧ ವಿಷಯಗಳನ್ನು ಚರ್ಚೆ ಮಾಡುವ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಪಂ ಜಮಾಬಂಧಿಗೆ ಅಧ್ಯಕ್ಷ, ಪಿಡಿಒ ಮಾತ್ರ ಸಹಿ ಮಾಡಿಕೊಳ್ಳುತ್ತಾರೆ. ಸಂಬಂಧಿಸಿದ ನೋಡೆಲ್‌ ಅಧಿಕಾರಿ ಹಾಗೂ ತಾಪಂ ಅಧಿಕಾರಿಗಳ ಸಹಿ ಹೊಂದಿರದ ವರದಿಗೆ ಯಾವ ಆಧಾರದ ಮೇಲೆ ಅನುಮೋದನೆ ನೀಡುತ್ತಿರಿ ಎಂದು ವಿರೋಧ ಪಕ್ಷದ ಹಾಗೂ ಆಡಳಿತ ಪಕ್ಷದ ಸದಸ್ಯರು ಒಮ್ಮತದಿಂದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಎಲ್ಲ ಗ್ರಾಪಂಗಳ ಜಮಾಬಂಧಿ ಕುರಿತು ಮಾಹಿತಿ ತರಿಸುವವರೆಗೆ ಸಭೆ ನಡೆಸದಂತೆ ಆಗ್ರಹಿಸಿದರು.

ನಂತರ ತಾ.ಪಂ ಇಒ ಸಂತೋಷ ಪಾಟೀಲ ಮಾತನಾಡಿ, ತಾಲೂಕಿನ 35 ಪಂಚಾಯತ್‌ ಗಳ ಜಮಾಬಂದಿ ಸಭೆ ಮತ್ತೂಮ್ಮೆ ನಿಯಮಾನುಸಾರವಾಗಿ ಮಾಡಿ ತಾಪಂಗೆ ವರದಿ ಸಲ್ಲಿಸುವಂತೆ ಎಲ್ಲ ಪಂಚಾಯತ್‌ ಗೆ ನೋಟಿಸ್‌ ಕೊಡಲು ಠರಾವು ಪಾಸ್‌ ಮಾಡಲಾಗಿದೆ ಎಂದು ತಿಳಿಸಿದರು. ನರೇಗಾದಲ್ಲಿ ನಡೆಯುವ ಭ್ರಷ್ಟಾಚಾರ ಹಾಗೂ ಕಳಪೆ ಕಾಮಗಾರಿ ಕುರಿತು ಸಾಮಾಜಿಕ ಲೆಕ್ಕಪತ್ರದ ವರದಿಯನ್ನು ಕಾರ್ಯರೂಪಕ್ಕೆ ತರದೆ, ದೂಳ ತುಂಬುವಂತೆ ಮಾಡಿದ್ದೀರಿ. ಕಚೇರಿಯಲ್ಲಿ ತಂದು ವರದಿ ಇಟ್ಟುಕೊಳ್ಳುವುದಾದರೆ ಸೋಶಿಯಲ್‌ ಆಡಿಟ್‌ ಮಾಡಿಸುವುದಾದರೂ ಯಾಕೆ?. ಯಾವ ಕಾಮಗಾರಿಯಲ್ಲಿ ಎಷ್ಟು ಹಣ ಮರಳಿ ಕಟ್ಟಿಸಬೇಕು ಎಂಬ ವರದಿ ಇದೆ ಎಂಬುವುದನ್ನು ಸಂಪೂರ್ಣ ಮಾಹಿತಿ ಮುಂದಿನ ಸಭೆಯಲ್ಲಿ ಕೊಡಬೇಕು ಎಂದು ಸದಸ್ಯ ಪ್ರಭು ಮೇಟಿ ತಿಳಿಸಿದರು.

ಪಟ್ಟಣದ ಡಾ| ಭೀಮಸೇನ ಜೋಶಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತಿಯೊಬ್ಬ ಹೊರ ರೋಗಿಯಿಂದ ಪಡೆದುಕೊಳ್ಳುವ 5 ರೂ. ಹಣ ದಿನಕ್ಕೆ ಎಷ್ಟು ಕೂಡುತ್ತದೆ. ಜೊತೆಗೆ ನಿತ್ಯ ಆಸ್ಪತ್ರೆಗೆ ಎಷ್ಟು ಜನ ರೋಗಿಗಳು ಬರುತ್ತಾರೆ ಎಂಬ ಸರಿಯಾದ ಮಾಹಿತಿ ತಂದು ಸಭೆಗೆ ಹಾಜರಾಗುವಂತೆ ತಾಲೂಕು ಆರೋಗ್ಯ ಅಧಿಕಾರಿ ಬಿ.ಎಸ್‌. ಭಜೇಂತ್ರಿ ಅವರನ್ನು ಸಭೆಯಿಂದ ಹೊರಹಾಕಿದರು. ಕೃಷಿ ಇಲಾಖೆ, ನೀರಾವರಿ ಇಲಾಖೆ, ಕುಡಿಯುವ ನೀರು ಮತ್ತು ನೈರ್ಮಲ್ಯ, ಲೋಕೋಪಯೋಗಿ ಸೇರಿದಂತೆ ಅನೇಕ ಇಲಾಖೆಗಳ ಕಾಮಗಾರಿಗಳ ಪ್ರಗತಿ ಕುರಿತು ಚರ್ಚೆ ನಡೆಸಿದರು.

ತಾಪಂ ಅಧ್ಯಕ್ಷೆ ಪ್ರೇಮವ್ವ ನಾಯಕ, ಉಪಾಧ್ಯಕ್ಷೆ ಇಂದಿರಾ ತೇಲಿ, ಸ್ಥಾಯಿ ಸಮಿತಿ ಅಧ್ಯಕ್ಷ ವಿರೂಪಾಕ್ಷಗೌಡ ಪಾಟೀಲ, ಸದಸ್ಯರಾದ ಮಹ್ಮದ್‌ಸಾಬ್‌ ತರಫದಾರ, ಪ್ರಭು ಮೇಟಿ, ಶಶಿಧರ ತೇಲಿ, ಸಿದ್ಧಣ್ಣ ಯಾಳಗಿ, ರಾಮನಗೌಡ ಪಾಟೀಲ, ಶೇಖರಗೌಡ ಚನ್ನಪ್ಪಗೌಡ್ರ, ಹೇಮಾವತಿ ಕಡದಳ್ಳಿ, ಪಡಿಯಪ್ಪ ಮಾದರ, ಮುಖ್ಯ ಇಂಜಿನಿಯರ್‌ ಉಮೇಶ ಮಂಡಸೊಪ್ಪಿ, ಮಹಾದೇವಪ್ಪ, ಬಿಸಿಎಂ ಮರಿಗೌಡ ಸುರಕೋಡ್‌, ಅರಣ್ಯ ಇಲಾಖೆ ಅಧಿಕಾರಿ ಪ್ರಕಾಶ ಪವಾಡಿಗೌಡ್ರ ಸೇರಿದಂತೆ ಇದ್ದರು.

ಟಾಪ್ ನ್ಯೂಸ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.