ಬಿರುಗಾಳಿ ಮಳೆಗೆ ನಲುಗಿದ ಜಿಲ್ಲೆ


Team Udayavani, May 25, 2019, 12:16 PM IST

Udayavani Kannada Newspaper

ಗದಗ: ಗದಗ- ಬೆಟಗೇರಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗುರುವಾರ ಸಂಜೆ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ತೋಟಗಾರಿಕೆ ಬೆಳೆಗಾರರ ಬದುಕು ಅಕ್ಷರಶಃ ನಲುಗಿ ಹೋಗಿದೆ. ಗದಗ ಮತ್ತು ಶಿಹರಟ್ಟಿ ತಾಲೂಕಿನ ವಿವಿಧೆಡೆ ಸುರಿದ ಆಲಿಕಲ್ಲು ಮಳೆಯಿಂದಾಗಿ ಅಪಾರ ಪ್ರಮಾಣದ ತೋಟಗಾರಿಕೆ ಬೆಳೆಗಳು ಹಾನಿಗೀಡಾಗಿವೆ. ಬಿರುಗಾಳಿಯಿಂದ ಸುಮಾರು 113 ವಿದ್ಯುತ್‌ ಕಂಬಗಳು ನೆಲಕ್ಕುರುಳಿವೆ. ವಿದ್ಯುತ್‌ ಸಂಪರ್ಕ ಕಡಿತಗೊಂಡು ಗ್ರಾಮಗಳನ್ನು ಕತ್ತಲೆಗೆ ದೂಡಿದರೆ, ತಗ್ಗು ಪ್ರದೇಶದ ಮನೆಗಳಿಗೆ ಮಳೆ ನೀರು ನುಗ್ಗಿದ್ದರ ಪರಿಣಾಮ ಜನರು ರಾತ್ರಿಯಿಡೀ ಜಾಗರಣೆ ಮಾಡುವಂತಾಯಿತು.

ಹೌದು, ಕಳೆದ ಐದಾರು ವರ್ಷಗಳಿಂದ ಸತತ ಬರದಿಂದ ಕಂಗೆಟ್ಟಿರುವ ರೈತರಿಗೆ ಗುರುವಾರ ರಾತ್ರಿ ಸುರಿದ ವರ್ಷಧಾರೆ ಉತ್ತಮ ಮುಂಗಾರಿನ ಭರವಸೆ ಮೂಡಿಸಿದ್ದು, ರೈತಾಪಿ ಜನರಲ್ಲಿ ಮಂದಹಾಸ ಮೂಡಿಸಿದೆ. ಆದರೆ, ಮಳೆಯೊಂದಿಗೆ ಬಿರುಗಾಳಿ ಬೀಸಿದ್ದರಿಂದ ಗೊನೆ ಬಿಟ್ಟಿದ್ದ ಹತ್ತಾರು ಹೆಕ್ಟರ್‌ ಪ್ರದೇಶದ ಬಾಳೆ ಗಿಡಗಳು ಮುರಿದು ಬಿದ್ದಿವೆ. ಭಾರೀ ಲಾಭದ ನಿರೀಕ್ಷೆಯಲ್ಲಿದ್ದ ಬಾಳೆ ಬೆಳೆಗಾರರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತಾಗಿದೆ.

ಗದಗ ತಾಲೂಕಿನ ಕಳಸಾಪುರ, ಹರ್ತಿ, ಶಾಗೋಟಿ, ಹುಲಕೋಟಿ, ಮುಳಗುಂದ, ಹರ್ತಿ, ಹೊಸಳ್ಳ, ದೂಂದೂರು ಹಾಗೂ ಶಿರಹಟ್ಟಿ ತಾಲೂಕಿನ ಚಿಕ್ಕ ಸವಣೂರು ಭಾಗದಲ್ಲಿ ಹೆಚ್ಚಾಗಿ ಬಾಳೆ ಬೆಳೆಯಲಾಗಿದೆ. ಸತತ ಬರದ ಮಧ್ಯೆಯೂ ಆಳೆತ್ತರಕ್ಕೆ ಬೆಳೆದು ನಿಂತಿದ್ದ ಬಾಳೆ ಗಿಡಗಳ ರಕ್ಷಣೆಗಾಗಿ ಸಾಲ ಸೋಲ ಮಾಡಿ ಸಾವಿರಾರು ರೂ. ಖರ್ಚು ಮಾಡಿದ್ದ ರೈತರು, ಇನ್ನೊಂದು ತಿಂಗಳಲ್ಲಿ ಬೆಳೆ ಮಾರಾಟ ಮಾಡಿ, ಕೈತುಂಬ ಕಾಸು ನೋಡುವ ಕನಸು ಕಂಡಿದ್ದರು. ಆದರೆ, ಗುರುವಾರ ರಾತ್ರಿ ಸುರಿದ ಮಳೆಯಿಂದಾಗಿ ಗದಗ, ಶಿರಹಟ್ಟಿ ತಾಲೂಕು ಸೇರಿದಂತೆ ಜಿಲ್ಲೆಯಾದ್ಯಂತ ಸುಮಾರು 55ರಿಂದ 60 ಹೆಕ್ಟರ್‌ ಪ್ರದೇಶದ ಬಾಳೆ ಗಿಡಗಳು ಹಾನಿಗೊಳಗಾಗಿದೆ. ಅದರೊಂದಿಗೆ ಮಾವು, ಕಬ್ಬು, ಗೋಂಡಬಿ ಗಿಡಗಳು ಮುರಿದು ಬಿದ್ದಿದ್ದು, 1.25 ಕೋಟಿ ರೂ.ಗಿಂತ ಅಧಿಕ ಬೆಳೆ ಹಾನಿ ಸಂಭವಿಸಿದೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಅಂದಾಜಿಸಿದ್ದಾರೆ.

ಧರೆಗುರುಳಿದ 113 ವಿದ್ಯುತ್‌ ಕಂಬಗಳು: ಗುರುವಾರ ಸಂಜೆಯಿಂದಲೇ ಬೀಸಿದ ಬಿರುಗಾಳಿಗೆ ಗದಗ ಹಾಗೂ ಮುಂಡರಗಿ ತಾಲೂಕಿನಲ್ಲಿ ಒಟ್ಟು 113 ವಿದ್ಯುತ್‌ ಕಂಬಗಳು ಧರೆಗುರುಳಿವೆ. ಆ ಪೈಕಿ ಗದಗ ತಾಲೂಕಿನ ಶಾಗೋಟಿ, ಅಡವಿಸೋಮಾಪುರ, ಕಳಸಾಪುರ, ದುಂದೂರು, ನಾಗಾವಿ, ಹೊಂಬಳ, ಹುಯಿಲಗೋಳ ಭಾಗದಲ್ಲಿ ಸುಮಾರು 80ಕ್ಕೂ ಹೆಚ್ಚು ಕಂಬಗಳು ಮುರಿದು ಬಿದ್ದಿವೆ ಎಂದು ಹೇಳಲಾಗಿದೆ.

ಮಳೆಯೊಂದಿಗೆ ಭಾರಿ ಗುಡುಗು, ಸಿಡಿಲಿನಿಂದ ಹಳೆ ಬಸ್‌ ನಿಲ್ದಾಣ ಸಮೀಪದ ಒಂದು ವಿದ್ಯುತ್‌ ಪರಿವರ್ತಕ ಸುಟ್ಟು ಹೋಗಿದೆ. ಇನ್ನುಳಿದಂತೆ ವೀರನಾರಾಯಣ ದೇವಸ್ಥಾನ, ರೆಹಮತ ನಗರ, ಹಳೆ ಬಸ್‌ ನಿಲ್ದಾಣ, ಮಹೇಂದ್ರಕರ್‌ ವೃತ್ತ, ಬಸವೇಶ್ವರ ನಗರ ಸೇರಿದಂತೆ ತಾಲೂಕಿನ ವಿವಿಧಡೆ ಹತ್ತಾರು ಬೃಹತ್‌ ಮರಗಳು ನೆಲಕ್ಕುರುಳಿವೆ. ಅವುಗಳಲ್ಲಿ ಕೆಲವು ವಿದ್ಯುತ್‌ ತಂತಿಗಳ ಮೇಲೆ ಮುರಿದು ಬಿದ್ದಿದ್ದರಿಂದ ಗದಗ ನಗರದಲ್ಲಿ ರಾತ್ರಿಯಿಡೀ ವಿದ್ಯುತ್‌ ಪೂರೈಕೆ ಸ್ಥಗಿತಗೊಂಡಿತ್ತು. ಅವಳಿ ನಗರದಲ್ಲಿ ರಾತ್ರಿಯೇ ತುಂತಡಾಗಿದ್ದ ವಿದ್ಯುತ್‌ ತಂತಿಗಳನ್ನು ಸರಿಪಡಿಸಲಾಗಿದ್ದು, ಗ್ರಾಮೀಣ ಭಾಗದಲ್ಲಿ ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ.

ಮನೆಗಳಿಗೆ ನುಗ್ಗಿದ ಮಳೆ ನೀರು: ಇಲ್ಲಿನ ರೆಹಮತ ನಗರ, ಬೆಟಗೇರಿಯ ಹಲವೆಡೆ ತಗ್ಗುಪ್ರದೇಶದಲ್ಲಿರುವ ಮನೆಗಳಿಗೆ ಮಳೆ ನೀರು ನುಗ್ಗಿ ಭಾರಿ ಅವಾಂತರವನ್ನೇ ಸೃಷ್ಟಿಸಿತು. ಮನೆಯಲ್ಲಿರುವಧವಸ ಧಾನ್ಯಗಳು, ದಿನಬಳಕೆ ವಸ್ತುಗಳನ್ನು ಮಳೆ ನೀರಿನಿಂದ ರಕ್ಷಿಸಲು ಸಾರ್ವಜನಿಕರು ಪರದಾಡಿದರು. ಇನ್ನೂ, ಕೆಲವರು ಮಳೆ ಕಡಿಮೆಯಾಗುತ್ತಿದ್ದಂತೆ ಮನೆಯಲ್ಲಿ ನಿಂತಿದ್ದ ನೀರು ಹೊರ ಹಾಕಲು ಹರಸಾಹಸ ನಡೆಸಿದರು.

ಜಿಲ್ಲೆಯಾದ್ಯಂತ ಗುರುವಾರ ಸಂಜೆ ಸುರಿದ ಮಳೆಯಿಂದ ಒಟ್ಟು 158.5 ಮಿ.ಮೀ. ಮಳೆ ದಾಖಲಾಗಿದೆ. ಆ ಪೈಕಿ ಗದಗಿನಲ್ಲಿ 42 ಮಿ.ಮೀ., ಮುಂಡರಗಿಯಲ್ಲಿ 33.8 ಮಿ.ಮೀ., ನರಗುಂದ ತಾಲೂಕಿನಲ್ಲಿ 44.9 ಮಿ.ಮೀ., ರೋಣದಲ್ಲಿ 17 ಮಿ.ಮೀ. ಹಾಗೂ ಶಿರಹಟ್ಟಿಯಲ್ಲಿ 20.8 ಮಿ.ಮೀ. ನಷ್ಟು ಮಳೆಯಾಗಿದೆ.

ಗುರುವಾರ ಸಂಜೆ ಬೀಸಿದ ಬಿರುಗಾಳಿಗೆ ತೋಟದ ಮನೆಯ ಮೆಲ್ಛಾವಣಿ(ತಗಡುಗಳು) ಹಾರಿ ಹೋದವು. ಟಿನ್‌ಗಳ ಮೇಲೆ ಭಾರವಿರಲು ಇಡಲಾಗಿದ್ದ ದೊಡ್ಡ ಕಲ್ಲುಗಳು ಕಾಲ್ಚೆಂಡಿನಂತೆ ತೂರಿ ಬಂದವು. ನೋಡ ನೋಡುತ್ತಿದ್ದಂತೆ ವಿದ್ಯುತ್‌ ಕಂಬಗಳು, ಬದುವಿನಲ್ಲಿದ್ದ ಬೃಹತ್‌ ಮರಗಳು ನೆಲಕ್ಕುರಳಿದವು. ಇದರಿಂದ ಬೆದರಿದ ನಾವೆಲ್ಲಾ ರಸ್ತೆಯ ದಿಬ್ಬದ ಮೇಲೆ ನಿಂತಿದ್ದೆವು. ತೋಟದಲ್ಲಿ ಬೆಳೆದಿದ್ದ ಗೋಡಂಬಿ, ಮಾವಿನ ಬೆಳೆ ಹಾನಿಯಿಂದ ಐದಾರು ಲಕ್ಷ ರೂ. ನಷ್ಟವಾಗಿದೆ.

•ಫಕ್ಕಿರೇಶಪ್ಪ ಕೋರ್ಲಹಳ್ಳಿ, ಶ್ಯಾಗೋಟಿ ಗ್ರಾಮದ ರೈತ

ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಯಿಂದಾಗಿ ಗದಗ, ಶಿರಹಟ್ಟಿ ತಾಲೂಕಿನ ಹಲವೆಡೆ ಹೆಚ್ಚಾಗಿ ಬಾಳೆ ಬೆಳೆ ಹಾನಿಯಾಗಿದೆ. ಜೊತೆಗೆ ಮಾವು, ಕಬ್ಬು, ಗೊಂಡಬಿ ಬೆಳಗಳು ನಾಶವಾಗಿವೆ. ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪ್ರಕೃತಿ ವಿಕೋಪ ನಿಯಮದಡಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಈಗಾಗಲೇ ಸಮೀಕ್ಷೆ ನಡೆಸಲಾಗುತ್ತಿದೆ.

•ಎಲ್. ಪ್ರದೀಪ, ಕೃಷಿ ಅಧಿಕಾರಿ

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.