ಸಾವಯವ ಕೃಷಿಕ ಹನುಮಂತಪ್ಪಗೆ ಜಿಲ್ಲಾ ಪ್ರಶಸ್ತಿ

ಧಾರವಾಡದಲ್ಲಿ ನಡೆಯುವ ಕೃಷಿ ಮೇಳದಲ್ಲಿ ಮುಖ್ಯಮಂತ್ರಿಗಳು-ಸಚಿವರಿಂದ ಪ್ರಶಸ್ತಿ ಪ್ರದಾನ

Team Udayavani, Sep 18, 2022, 12:56 PM IST

4

ಲಕ್ಷ್ಮೇಶ್ವರ: ತಾಲೂಕಿನ ಮಾಡಳ್ಳಿ ಗ್ರಾಮದ ಸಾವಯವ ಯುವ ಕೃಷಿಕ ಹನುಮಂತಪ್ಪ ಜಿ. ಚಿಂಚಲಿ ಅವರು ಜಿಲ್ಲಾಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸೆ.18 ರಂದು ಧಾರವಾಡದಲ್ಲಿ ನಡೆಯುವ ಕೃಷಿ ಮೇಳದಲ್ಲಿ ಮುಖ್ಯಮಂತ್ರಿಗಳು ಮತ್ತು ಸಚಿವರ ಉಪಸ್ಥಿತಿಯಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಹನುಮಂತಪ್ಪನ ಕೃಷಿ ಸಾಧನೆ: ಕೃಷಿಯನ್ನೇ ಬದುಕಾಗಿಸಿ ಕೊಂಡಿರುವ ಕುಟುಂಬದವರಾದ ಹನುಮಂತಪ್ಪ ಅವರು ಓದಿದ್ದು ಎಸ್‌ಎಸ್‌ಎಲ್‌ಸಿ ವರೆಗೆ ಮಾತ್ರ. ಮನೆಯಲ್ಲಿ ಕೃಷಿಯನ್ನು ಮುಂದುವರೆಸಿಕೊಂಡು ಹೋಗಬೇಕೆಂಬ ತಂದೆಯ ಸಲಹೆಯಂತೆ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿದರು. ಸ್ವಂತ 30 ಎಕರೆ ಜಮೀನು ಹೊಂದಿರುವ ಅವರು ಕೃಷಿ ಮೇಲಿನ ಪ್ರೀತಿ, ಆಸಕ್ತಿಯಿಂದ ಕೃಷಿಯಲ್ಲಿಯೇ ಉತ್ತಮ ಸಾಧನೆ ಮಾಡುವ ಮೂಲಕ “ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆ ಮೇಲು’ ಎಂಬುದನ್ನು ಸಾಬೀತುಪಡಿಸಿದ್ದಾರೆ.

30 ಎಕರೆ ಕಪ್ಪು ಮಣ್ಣಿನ ಜಮೀನಿನಲ್ಲಿ ಸಾವಯುವ ಕೃಷಿಗೆ ಅಣಿಯಾಗಿರುವ ಅವರು ತಮ್ಮ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಿಸಿ ಅವಶ್ಯಕ ಸಂದರ್ಭದಲ್ಲಿ ಬೆಳೆಗಳಿಗೆ ಹನಿ ನೀರಾವರಿ ಮೂಲಕ ಕೃಷಿ ಬೆಳೆ ಮತ್ತು ತರಕಾರಿ ಬೆಳೆಯುತ್ತಾರೆ. ಮಣ್ಣಿನ ಸವಕಳಿ ತಡೆಗಾಗಿ ನರೇಗಾ ಯೋಜನೆಯಡಿ, ಟ್ರ್ಯಾಕ್ಟರ್ ಮೂಲಕ ಮಳೆ ನೀರು ಕೊಯ್ಲು, ಇಳಿಜಾರು ಬದು ನಿರ್ಮಾಣ ಮಾಡಿ ಕೊಳ್ಳುತ್ತಾರೆ. ಅಲ್ಲದೇ, ಜಮೀನಿನ ಬದುವುಗಳಲ್ಲಿ ಬೇವು, ಹೆಬ್ಬೇವು, ಬನ್ನಿ, ಹೊಂಗೆ ಮರಗಳನ್ನು ಬೆಳೆಸಿದ್ದಾರೆ.

ಸಾವಯುವ ಕೃಷಿ: ರಾಸಾಯನಿಕ ಗೊಬ್ಬರ-ಕ್ರಿಮಿನಾಶಕ ಬಳಸದ ಇವರು ಮಣ್ಣಿನ ಫಲವತ್ತತೆಗೆ ಆದ್ಯತೆ ನೀಡುತ್ತಾರೆ. ಅದಕ್ಕಾಗಿ ಕೃಷಿ ವಿವಿಯಿಂದ ತರಬೇತಿ ಪಡೆದು ತಾವು ಸಾಕಿರುವ ದೇಶಿ ಆಕಳು, ಎತ್ತುಗಳಿಂದ ಗೊಬ್ಬರ ತಯಾರಿಸಿ ಭೂಮಿಯ ಫಲವತ್ತತೆ ಹೆಚ್ಚಿಸುತ್ತಾರೆ. ‌

“ಭೂಮಿ ತಾಯಿ ಕೂಡ ಆಡಿದ್ರ ಕೇಡಿಲ್ಲ’ ಎಂಬ ಹಿರಿಯರ ಮಾತನ್ನು ಬಲವಾಗಿ ನಂಬಿದ್ದೇನೆ. ಸಂಪೂರ್ಣ ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಂಡು ಕೃಷಿ ವೆಚ್ಚ ಬಹಳಷ್ಟು ಕಡಿಮೆ ಮಾಡಿಕೊಂಡಿದ್ದೇನೆ. ಮಣ್ಣಿನ ಫಲವತ್ತತೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಹೆಚ್ಚು ಇಳುವರಿ ಪಡೆಯಲು ಸಾಧ್ಯವಾಗುತ್ತದೆ. ಅಲ್ಲದೇ, ಮನೆಯವರೆಲ್ಲ ಕಾಯಾ, ವಾಚಾ, ಮನಸಾ ಸಂಪೂರ್ಣ ಕೃಷಿಯಲ್ಲೇ ತೊಡಗಿಸಿಕೊಂಡಿದ್ದರಿಂದ ಮತ್ತು ಕೃಷಿ ಇಲಾಖೆ ಅಧಿಕಾರಿಗಳ ಸಲಹೆ-ಸಹಕಾರದಿಂದ ಕೃಷಿಯಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗಿದೆ.  –ಹನುಮಂತಪ್ಪ ಚಿಂಚಲಿ, ಜಿಲ್ಲಾ ಶ್ರೇಷ್ಠ ಕೃಷಿಕ

ಸಂಪೂರ್ಣ ಸಾವಯವ ಕೃಷಿ ಅಳವಡಿಸಿಕೊಂಡು ಅತ್ಯಂತ ಆಸಕ್ತಿಯಿಂದ ಕೃಷಿಯನ್ನೇ ಉಸಿರಾಗಿಸಿಕೊಂಡಿದ್ದಾರೆ. ಕಳೆದ ವರ್ಷ ತುಕ್ಕು ರೋಗದ ನಡುವೆಯೂ ಉತ್ತಮ ಮೆಣಸಿನಕಾಯಿ ಬೆಳೆ ಬೆಳೆದಿದ್ದಾರೆ. ಅತಿವೃಷ್ಟಿ-ಅನಾವೃಷ್ಟಿಯ ನಡುವೆಯೂ ತಕ್ಕ ಮಟ್ಟಿಗಾದರೂ ಬೆಳೆ ತೆಗೆದು ಕೃಷಿಯಲ್ಲಿ ಲಾಭ ಮಾಡಿಕೊಳ್ಳುತ್ತಾರೆ. ಬಹು ಬೆಳೆ ಪದ್ಧತಿ, ಮಿಶ್ರ ಕೃಷಿ ಅಳವಡಿಸಿಕೊಂಡು ಇತರ ರೈತರಿಗೆ ಮಾದರಿಯಾಗಿದ್ದಾರೆ. -ಚಂದ್ರಶೇಖರ ನರಸಮ್ಮನವರ, ಕೃಷಿ ಅಧಿಕಾರಿ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.